ಮೈಸೂರು

ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಬೆಲೆ ಏರಿಕೆ ಮಾಡಿ ಜನತೆಯನ್ನು ಮೂರ್ಖರನ್ನಾಗಿಸಿದೆ: ಎಲ್‌.ನಾಗೇಂದ್ರ

ಮೈಸೂರು: ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ನಿರಂತರವಾಗಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿ ರಾಜ್ಯದ ಜನತೆಯನ್ನು ಮೂರ್ಖರನ್ನಾಗಿಸಿದೆ ಎಂದು ಸರ್ಕಾರದ ವಿರುದ್ಧ ಮೈಸೂರು ನಗರ ಬಿಜೆಪಿ ಘಟಕದ ಅಧ್ಯಕ್ಷ ಎಲ್‌.ನಾಗೇಂದ್ರ ಕಿಡಿಕಾರಿದ್ದಾರೆ.

ಮೈಸೂರಿನಲ್ಲಿ ಇಂದು(ಏಪ್ರಿಲ್‌.1) ಸರ್ಕಾರ ಇಂದಿನಿಂದ ರಾಜ್ಯದಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಹಿನ್ನೆಲೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಈ ರಾಜ್ಯದಲ್ಲಿ ಹಾಲಿನ ದರ, ವಿದ್ಯುತ್‌ ದರ ಸೇರಿದಂತೆ ಇನ್ನಿತರ ವಸ್ತುಗಳ ಮೇಲೆ ದರ ಏರಿಕೆ ಮಾಡಿ ಮತ್ತಷ್ಟು ದುಬಾರಿಯಾಗಿವೆ. ಸಿಎಂ ಸಿದ್ದರಾಮಯ್ಯ ಅವರಿಗೆ ಮಂತ್ರಿಗಳ ಮೇಲೆ ಹಿಡಿತವಿಲ್ಲ. ಅದರಿಂದಲೇ ಸಚಿವರೂ ಲೂಟಿಯಲ್ಲಿ ತೊಡಗಿದ್ದಾರೆ ಎಂದರು.

ಸರ್ಕಾರದ ವತಿಯಿಂದ ಉಚಿತವಾಗಿ ನೀಡಬೇಕಾದ ವೈದ್ಯಕೀಯ ಸೇವೆಗಳಿಗೆ ದರ ನಿಗದಿ ಮಾಡಿರುವುದು ಸರಿಯಲ್ಲ. ನಮ್ಮ ಜಿಲ್ಲೆಯ ಕೆ.ಆರ್‌.ಆಸ್ಪತ್ರೆಯಲ್ಲಿಯೂ ಒಪಿಡಿ ಶುಲ್ಕ ಹೆಚ್ಚಳ ಮಾಡಲಾಗಿದೆ. ಅದರ ಜೊತೆಗೆ ಜನನ ಮತ್ತು ಮರಣ ಪ್ರಮಾಣ ಪತ್ರಗಳನ್ನು ನೀಡಲು ಅಧಿಕ ಶುಲ್ಕ ವಿಧಿಸಲಾಗಿದೆ. ಈ ರಾಜ್ಯ ಸರ್ಕಾರ ದರ ಏರಿಕೆ ಮೂಲಕ ಸಾರ್ವಜನಿಕರಿಗೆ ಕಿರುಕುಳ ನೀಡುತ್ತಿದೆ ಎಂದು ವಾಗ್ದಾಳಿ ನಡೆಸಿದರು.

ಇನ್ನು ಕಾಂಗ್ರೆಸ್‌ ಸರ್ಕಾರ ಮುಸಲ್ಮಾನರ ತುಷ್ಠೀಕರಣದಲ್ಲಿ ತೊಡಗಿದೆ. ಸಂವಿಧಾನಕ್ಕೆ ವಿರುದ್ಧವಾಗಿ ಮುಸಲ್ಮಾನರಿಗೆ ಪ್ರತ್ಯೇಕವಾಗಿ ಮೀಸಲಾತಿ ನೀಡುವ ಮೂಲಕ ವಿಭಿನ್ನ ಧೋರಣೆ ಮಾಡಿದೆ. ಹಾಗಾಗಿ ರಾಜ್ಯ ಸರ್ಕಾರ ಈ ಕೂಡಲೇ ಮುಸಲ್ಮಾನರಿಗೆ ಜಾರಿಗೊಳಿಸಿರುವ ಮೀಸಲಾತಿಯನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದರು.

 

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

1 min ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

3 mins ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

8 mins ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

12 mins ago

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

24 hours ago