ಮೈಸೂರು

ಯುವಜನರಲ್ಲಿ ದೇಶದ ಬಹುಸಂಸ್ಕೃತಿಯ ನೈಜ ಪರಿಚಯದ ಕೊರತೆ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ಯುವಜನತೆಗೆ ದೇಶದ ಬಹುಸಂಸ್ಕೃತಿಯ ನೈಜ್ಯ ಪರಿಚಯದ ಕೊರತೆ ಇದೆ. ಅವರಿಗೆ ಸಂಸ್ಕೃತಿಯ ಅರಿವು ಮೂಡಿಸಬೇಕು. ಆಗ ಮಾತ್ರ ಯುವಕರನ್ನು ಸಂಕುಚಿತ ಮನೋಭಾವನೆಯಿಂದ ಹೊರತರಬಹುದು. ಅದಕ್ಕೆ ಪೂರಕವೆಂಬಂತೆ ಯುವಜನೋತ್ಸವದಂತಹ ಕಾರ್ಯಕ್ರಮಗಳನ್ನು ರೂಪಿಸಬೇಕು ಎಂದು ಶಾಸಕ ತನ್ವಿರ್ ಸೇಠ್ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಯುವ ಕೆಂದ್ರ, ರಾಷ್ಟ್ರೀಯ ಸೇವಾ ಯೋಜನೆ, ಮೈಸೂರು ವಿಶ್ವವಿದ್ಯಾನಿಲಯ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು ಹಾಗೂ ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ, ಯುವಕ ಸಂಘ ಮತ್ತು ಯುವತಿ ಮಂಡಳಿಗಳು ಮೈಸೂರು ಇವರುಗಳ ಸಹಯೋಗದಲ್ಲಿ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಬುಧವಾರ ಆಯೋಜಿಸಲಾಗಿದ್ದ “ಮೈಸೂರು ಜಿಲ್ಲಾ ಮಟ್ಟದ ಯುವಜನೋತ್ಸವ” ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಯುವ ಜನೋತ್ಸವ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಗಮನ ಸೆಳೆಯುವ ಸಾಧನೆಗಳನ್ನು ಮಾಡಿ ಜಿಲ್ಲೆ ಮತ್ತು ರಾಜ್ಯಕ್ಕೆ ಕೀರ್ತಿ ತರಬೇಕು ಎಂದು ತಿಳಿಸಿದರು.

ಯುವಜನೋತ್ಸವದ ಅಂಗವಾಗಿ ಕಲೆ, ಸಾಹಿತ್ಯ, ಸಂಗೀತ, ನೃತ್ಯ ಸೇರಿದಂತೆ ಇತರ ಜನಪದ ಕಲೆಗಳನ್ನುಆಯೋಜಿಸಿ, ಪ್ರಜ್ಞಾವಂತ ಯುವ ಕಲಾ ಪ್ರತಿಭೆಗಳನ್ನು ಗುರುತಿಸುವ ಉದ್ದೇಶದಿಂದ ಅವರ ಪ್ರತಿಭೆಗಳನ್ನು ಗ್ರಾಮ ಮಟ್ಟದಿಂದ ರಾಜ್ಯ, ರಾಷ್ಟ್ರಮಟ್ಟದವರೆಗೆ ಅನಾವರಣಗೊಳಿಸುವುದೇ ಯುವಜನೋತ್ಸವದ ಮುಖ್ಯ ಉದ್ದೇಶವಾಗಿದೆ. ಯುವಕರು ಹೆಚ್ಚಾಗಿ ಇದರಲ್ಲಿ ಪಾಲ್ಗೊಂಡು ತಮ್ಮ ಪ್ರತಿಭೆ ತೋರಿಸಿ ರಾಜ್ಯ, ರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆಯಬೇಕು ಎಂದರು.

ಭಾರತದಲ್ಲಿರುವ ಯುವಕ ಯುವತಿಯರ ಸಂಖ್ಯೆ ಬೇರೆ ಯಾವುದೇ ದೇಶದಲ್ಲಿ ಇಲ್ಲ. ದೇಶದ ಯುವ ಶಕ್ತಿಯನ್ನು ಮಾನವ ಸಂಪನ್ಮೂಲವಾಗಿ ಪರಿವರ್ತಿಸಬೇಕು. ಯುವಕರಿಗೆ ಪ್ರೋತ್ಸಾಹ ಕೊಡುವ ದೃಷ್ಟಿಯಲ್ಲಿ ಸರ್ಕಾರ ಅನೇಕ ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. ಅದನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಯುವಕ ಯುವತಿಯರ ಮನಸ್ಸಿನಲ್ಲಿರುವ ಭಾವನೆಗಳನ್ನು ಅರ್ಥೈಸಿಕೊಂಡು, ಅದಕ್ಕೆ ಪೂರಕವಾದ ಸ್ಪರ್ಧಾತ್ಮಕ ಅವಕಾಶಗಳನ್ನು ಕಲ್ಪಿಸಿಕೊಟ್ಟಲ್ಲಿ ಅವರನ್ನು ಈ ರಾಷ್ಟ್ರದ ಸಂಪತ್ತನ್ನಾಗಿ ಪರಿವರ್ತಿಸಬಹುದು ಎಂದು ಹೇಳಿದರು.

ಯುವಜನರು ತಂತ್ರಜ್ಞಾನದ ಪ್ರಭಾವದಿಂದ ಇತ್ತೀಚಿನ ದಿನಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳ ಕಡೆಗೆ ಹೆಚ್ಚು ಆಸಕ್ತಿ ತೋರುತ್ತಿಲ್ಲ. ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಅನುಕೂಲವಾಗಲು ಶೈಕ್ಷಣಿಕ ಕಲಿಕೆಗಳ ಜೊತೆಗೆ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಹೆಚ್ಚು ಕ್ರಿಯಾತ್ಮಕವಾಗಿ ತೊಡಗಿಸಿಕೊಳ್ಳಬೇಕು ಎಂದು ಹೇಳಿದರು.

ಪ್ರತಿಯೊಬ್ಬರೂ ಜೀವನದಲ್ಲಿ ಸಮಯ ಪ್ರಜ್ಞೆಯನ್ನು ರೂಡಿಸಿಕೊಳ್ಳಬೇಕು. ಮುಖ್ಯವಾಗಿ ವಿದ್ಯಾರ್ಥಿಗಳು ಸಮಯ ಪಾಲನೆ ಮಾಡಬೇಕು. ಸಾಧನೆ ಇಲ್ಲದೆ ಬದುಕು ಕಟ್ಟಿಕೊಳ್ಳುವುದು ಸಾರ್ಥಕತೆಯಲ್ಲ. ಪ್ರತಿಯೊಬ್ಬರಿಗೂ ಯಾವುದಾದರೊಂದು ಪ್ರತಿಭೆ ಇದ್ದೇ ಇರುತ್ತದೆ. ಸ್ಪರ್ಧೆಯಲ್ಲಿ ಸೋಲು ಗೆಲುವು ಎಂಬುದು ಮುಖ್ಯವಲ್ಲ,ಭಾಗವಹಿಸುವಿಕೆ ಬಹಳ ಮುಖ್ಯ. ಸ್ಪರ್ಧೆಯಲ್ಲಿ ಗೆದ್ದವರಿಗೆ ಯಶಸ್ಸು ಸಿಗುತ್ತದೆ, ಸೋತವರಿಗೆ ಮತ್ತೆ ಗೆಲ್ಲುವಂತಹ ಧೈರ್ಯ ಸಿಗುತ್ತದೆ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ನೆಹರು ಯುವ ಕೇಂದ್ರದ ಜಿಲ್ಲಾ ಯುವಜನ ಅಧಿಕಾರಿ ಅಭಿಷೇಕ್ ಎಸ್ ಜವರೆ, ಮೈಸೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆ ಕಾರ್ಯಕ್ರಮದ ಸಂಯೋಜನಾಧಿಕಾರಿ ಡಾ.ಎಂ.ಬಿ ಸುರೇಶ್, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನ ಪ್ರಾಂಶುಪಾಲ ಪ್ರೊ.ಅಬ್ದುಲ್ ರಹಿಮಾನ್ ಎಂ , ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಭಾಸ್ಕರ್ ನಾಯಕ್, ರಾಷ್ಟ್ರ ಪ್ರಶಸ್ತಿ ವಿಜೇತರಾದ ಇಮ್ರಾನ್ ಬೇಗ್, ವಿವಿಧ ಕಾಲೇಜಿನ ಸ್ಪರ್ಧಾರ್ಥಿಗಳು, ವಿದ್ಯಾರ್ಥಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಖರ್ಗೆ ಭಾಷಣ ಮಾಡಿದ ಸ್ಥಳ ಶುದ್ಧೀಕರಣ ಪ್ರಶ್ನಾರ್ಹ

ಇತ್ತೀಚೆಗೆ ರಾಜ್ಯಸಭಾ ಸದಸ್ಯ, ಎಐಸಿಸಿ ಅಧ್ಯಕ್ಷ ಎಂ.ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಉತ್ತರಾಖಂಡ್ ರಾಜ್ಯದ ಹಲ್ ದ್ವಾನಿಯ ರಾಮಲೀಲಾ…

47 mins ago

ಓದುಗರ ಪತ್ರ: ಎನ್‌ಕೌಂಟರ್ ನಿಗೂಢತೆ?

ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮದಲ್ಲಿ ಅರಣ್ಯ ಸಿಬ್ಬಂದಿ ನಡೆಸಿದ ಎನ್‌ಕೌಂಟರ್‌ನಲ್ಲಿ ಮೂವರು ಮೃತಪಟ್ಟಿರುವ ಪ್ರಕರಣ ಹಲವಾರು…

50 mins ago

ಓದುಗರ ಪತ್ರ: ಜಂಬೂಸವಾರಿಯ ಹೊಸ ಸಾರಥಿ ಯಾರು?

ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿಯಲ್ಲಿ ೭೫೦ ಕೆಜಿ ತೂಕದ ಅಂಬಾರಿ ಹೊತ್ತು ಸಾಗುತ್ತಿದ್ದ ಅಭಿಮನ್ಯು ಆನೆ ಇನ್ನುಮುಂದೆ ಬರುವುದಿಲ್ಲ…

51 mins ago

ಧ್ವನಿಹೀನರಿಗೆ ಧ್ವನಿಯಾಗಿದ್ದ ದೇವರಾಜ ಅರಸು

ಎಚ್.ಹಾಲಪ್ಪ ಇಂದು ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಜಯಂತಿ ದೇಶದಲ್ಲಿ ಜನಪ್ರತಿನಿಧಿಗಳ ಸಂಖ್ಯೆ ಸಾವಿರಾರು. ಆದರೆ, ಕಾಲದ ಪರೀಕ್ಷೆಯಲ್ಲಿ ಮುತ್ಸದ್ದಿ…

53 mins ago

ನೀರಿಲ್ಲದಿದ್ದರೂ ಭರ್ತಿಯಾಗುತ್ತಿದೆ ಕಸುವಿನಹಳ್ಳಿ ಕೆರೆ!

ಎಸ್.ಎಸ್.ಭಟ್ ಸುತ್ತಲಿನ ಕ್ರಷರ್‌ನಿಂದ ತಂದು ಹಾಕುತ್ತಿರುವ ರಾಶಿ ದೂಳಿನಿಂದ ತುಂಬುತ್ತಿದೆ ಕೆರೆ; ಗ್ರಾಮಸ್ಥರ ಆಕ್ರೋಶ ನಂಜನಗೂಡು: ಮಳೆ ಬಂದರೆ ನೀರಿನಿಂದ…

56 mins ago