ಪ್ರಶಾಂತ್ ಎಸ್ ಮೈಸೂರು
ಎಚ್ ಡಿ ಕೋಟೆ : ಮಳೆಯ ಆರ್ಭಟದಿಂದ ಪಟ್ಟಣದ ವಡ್ಡರಗುಡಿ ಗ್ರಾಮಕ್ಕೆ ಹೋಗುವ ರಸ್ತೆ ಸಂಪೂರ್ಣ ಜಲಾವೃತಗೊಂಡಿದ್ದು ಸಾರ್ವಜನಿಕರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.
ನೆನ್ನೆ ಸುರಿದ ಬಾರಿ ಮಳೆಯಿಂದ ಹೆಬ್ಬಾಳ ಜಲಾಶಯ ಭರ್ತಿಯಾಗಿ ಕೋಡಿ ಬಿದ್ದ ಪರಿಣಾಮ ವಡ್ಡರಗುಡಿ ಸೇತುವೆ ಜಲಾವೃತಗೊಂಡು ಜನಸಾಮಾನ್ಯರ ಸಂಚಾರ ಸ್ಥಗಿತಗೊಂಡಿದೆ, ಹಲವು ತಿಂಗಳಿನಿಂದ ಸಾಕಷ್ಟು ಬಾರಿ ಜಲಾವೃತಗೊಳ್ಳುತ್ತಿರುವ ಈ ಸೇತುವೆಯಿಂದಾಗಿ ಇಲ್ಲಿನ ಜನರು ಸಮಸ್ಯೆಯನ್ನು ಎದುರಿಸುವಂತಾಗಿದೆ . ಅಲ್ಲದೇ ಸೇತುವೆಯ ಅಕ್ಕಪಕ್ಕದ ತಡೆಗೋಡೆಗಳು ಕೂಡ ಶಿಥಿಲ ವ್ಯವಸ್ಥೆಯಲ್ಲಿದೆ. ಈ ವಿಚಾರ ಕುರಿತು ಸಂಬಂಧಪಟ್ಟವರಿಗೆ ಮಾಹಿತಿ ನೀಡಿದರು ಸಮಸ್ಯೆ ಮಾತ್ರ ಪರಿಹಾರವಾಗಿಲ್ಲ . ಇನ್ನಾದರು ಈ ಸಮಸ್ಯೆ ತಪ್ಪಿಸಲು ಸಂಬಂಧಪಟ್ಟ ಅಧಿಕಾರಿಗಳು, ಜನಪ್ರತಿನಿಧಿಗಳು ಗಮನಹರಿಸುವರಾ ನೋಡಬೇಕಿದೆ.
ಪ್ರತಿಬಾರಿಯು ಮಳೆ ಬಂದಾಗ ಈ ಸಮಸ್ಯೆ ಆಗುತ್ತಲೇ ಇದೆ. ಅದರು ಸಂಬಂಧಪಟ್ಟವರು ಯಾರು ಕೂಡ ಇದರ ಬಗ್ಗೆ ಗಮನಹರಿಸುತ್ತಿಲ್ಲ. ನಾವು ಪ್ರತಿದಿನ ಕೂಲಿ ಕೆಲಸಕ್ಕೆ ಹೋಗುವುದು ಅದೇ ರಸ್ತೆಯಲ್ಲಿ ರಾತ್ರಿ ವೇಳೆಯು ಒಡಾಡುತ್ತೇವೆ. ಅಲ್ಲದೇ ಸೇತುವೆ ಬಳಿ ಒಂದು ಬೀದಿ ದೀಪ ಕೂಡ ಇಲ್ಲ. ಹೀಗಾಗಿ ಮಳೆ ಬಂದಾಗ ಸೇತುವೆ ಸಮಸ್ಯೆ, ಇಲ್ಲದಿದ್ದಾಗ ಬೀದಿ ದೀಪದ ಸಮಸ್ಯೆ. ಇಂತಹ ಸಮಸ್ಯೆಗಳನ್ನು ಎದುರಿಸುತ್ತಿದ್ದೇವೆ. ಇನ್ನಾದರು ಸಂಬಂಧಪಟ್ಟವರು ಸಮಸ್ಯೆಯನ್ನು ಗಮನಹರಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಬೇಕಿದೆ.
ಚಾ.ನಗರದ ತರಕಾರಿ ಮಾರುಕಟ್ಟೆ, ಹಳೇ ಖಾಸಗಿ ಬಸ್ ನಿಲ್ದಾಣದಲ್ಲಿ ಮುಚ್ಚಿದ ಶೌಚಾಲಯಗಳು; ಜನರಿಗೆ ಸಮಸ್ಯೆ ಚಾಮರಾಜನಗರ: ನಗರದಲ್ಲಿನ ಎರಡು ಸಾರ್ವಜನಿಕ…
ಹುಣಸೂರು: ಹಾಡಿಗಳ ಅರಣ್ಯ ಹಕ್ಕು ಸಮಿತಿಗಳ ಪ್ರತಿನಿಧಿಗಳಿಂದ ಅರಣ್ಯ ಪ್ರವೇಶ ಅಭಿಯಾನ ಹುಣಸೂರು: ತಾಲ್ಲೂಕಿನ ಆದಿವಾಸಿಗಳು ೨೦೦೬ರ ಆರಣ್ಯ ಹಕ್ಕು…
ಕೆ.ಬಿ.ರಮೇಶ ನಾಯಕ ೨೦೧೩-೧೪, ೨೦೧೪-೧೫ನೇ ಸಾಲಿನಲ್ಲಿ ಪ್ರವೇಶ ಪಡೆದು ಉತ್ತೀರ್ಣರಾದವರಿಗೆ ಪದವಿ ಪ್ರಮಾಣಪತ್ರ ಮುಕ್ತ ವಿವಿಯ ಇನ್ಹೌಸ್ನಲ್ಲಿ ಪ್ರವೇಶ ಪಡೆದಿದ್ದವರಿಗೆ…
ಕಡಿಮೆ ದರದಲ್ಲಿ ಊಟ, ತಿಂಡಿ ನೀಡುತ್ತಿದ್ದ ಕ್ಯಾಂಟೀನ್ ಮುಚ್ಚಿದ್ದರಿಂದ ಕೂಲಿ ಕಾರ್ಮಿಕರಿಗೆ, ಬಡವರಿಗೆ ತೊಂದರೆ ಎಚ್.ಡಿ.ಕೋಟೆ: ಅನೇಕ ವಿದ್ಯಾರ್ಥಿಗಳಿಗೆ, ಕೂಲಿ…
ನಾಲ್ವರು ನಿವೃತ್ತ ಪೊಲೀಸ್ ಅಧಿಕಾರಿಗಳ ನೇತೃತ್ವದ ಕ್ಷಿಪ್ರ ಕಾರ್ಯಪಡೆ ರಚನೆಗೆ ಒಪ್ಪಿಗೆ ಮೈಸೂರು: ಶಿಕ್ಷಣ, ಸಾಮಾಜಿಕ, ಆರೋಗ್ಯ ಮತ್ತಿತರ ಸೇವಾ…