ಮೈಸೂರು

ಎಚ್‌ ಡಿ ಕೋಟೆ ಗದ್ದಿಗೆ ರಸ್ತೆಯ ವಡ್ಡರಗುಡಿ ಗ್ರಾಮದ ಕೆರೆ ಜಲಾವೃತ

ಪ್ರಶಾಂತ್‌ ಎಸ್‌ ಮೈಸೂರು

ಎಚ್‌ ಡಿ ಕೋಟೆ : ಮಳೆಯ ಆರ್ಭಟದಿಂದ  ಪಟ್ಟಣದ ವಡ್ಡರಗುಡಿ ಗ್ರಾಮಕ್ಕೆ ಹೋಗುವ ರಸ್ತೆ ಸಂಪೂರ್ಣ ಜಲಾವೃತಗೊಂಡಿದ್ದು ಸಾರ್ವಜನಿಕರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ನೆನ್ನೆ ಸುರಿದ ಬಾರಿ ಮಳೆಯಿಂದ  ಹೆಬ್ಬಾಳ ಜಲಾಶಯ ಭರ್ತಿಯಾಗಿ ಕೋಡಿ ಬಿದ್ದ ಪರಿಣಾಮ ವಡ್ಡರಗುಡಿ ಸೇತುವೆ ಜಲಾವೃತಗೊಂಡು ಜನಸಾಮಾನ್ಯರ ಸಂಚಾರ ಸ್ಥಗಿತಗೊಂಡಿದೆ, ಹಲವು ತಿಂಗಳಿನಿಂದ ಸಾಕಷ್ಟು ಬಾರಿ ಜಲಾವೃತಗೊಳ್ಳುತ್ತಿರುವ  ಈ ಸೇತುವೆಯಿಂದಾಗಿ ಇಲ್ಲಿನ ಜನರು  ಸಮಸ್ಯೆಯನ್ನು  ಎದುರಿಸುವಂತಾಗಿದೆ . ಅಲ್ಲದೇ ಸೇತುವೆಯ ಅಕ್ಕಪಕ್ಕದ ತಡೆಗೋಡೆಗಳು ಕೂಡ ಶಿಥಿಲ ವ್ಯವಸ್ಥೆಯಲ್ಲಿದೆ. ಈ ವಿಚಾರ ಕುರಿತು ಸಂಬಂಧಪಟ್ಟವರಿಗೆ ಮಾಹಿತಿ ನೀಡಿದರು ಸಮಸ್ಯೆ ಮಾತ್ರ ಪರಿಹಾರವಾಗಿಲ್ಲ . ಇನ್ನಾದರು ಈ ಸಮಸ್ಯೆ ತಪ್ಪಿಸಲು ಸಂಬಂಧಪಟ್ಟ ಅಧಿಕಾರಿಗಳು, ಜನಪ್ರತಿನಿಧಿಗಳು ಗಮನಹರಿಸುವರಾ ನೋಡಬೇಕಿದೆ.

 

ಪ್ರತಿಬಾರಿಯು ಮಳೆ  ಬಂದಾಗ ಈ ಸಮಸ್ಯೆ ಆಗುತ್ತಲೇ ಇದೆ. ಅದರು ಸಂಬಂಧಪಟ್ಟವರು ಯಾರು ಕೂಡ ಇದರ ಬಗ್ಗೆ ಗಮನಹರಿಸುತ್ತಿಲ್ಲ. ನಾವು ಪ್ರತಿದಿನ  ಕೂಲಿ ಕೆಲಸಕ್ಕೆ ಹೋಗುವುದು ಅದೇ ರಸ್ತೆಯಲ್ಲಿ ರಾತ್ರಿ ವೇಳೆಯು ಒಡಾಡುತ್ತೇವೆ. ಅಲ್ಲದೇ ಸೇತುವೆ ಬಳಿ  ಒಂದು ಬೀದಿ ದೀಪ ಕೂಡ ಇಲ್ಲ. ಹೀಗಾಗಿ ಮಳೆ ಬಂದಾಗ ಸೇತುವೆ ಸಮಸ್ಯೆ, ಇಲ್ಲದಿದ್ದಾಗ ಬೀದಿ ದೀಪದ ಸಮಸ್ಯೆ. ಇಂತಹ ಸಮಸ್ಯೆಗಳನ್ನು ಎದುರಿಸುತ್ತಿದ್ದೇವೆ.  ಇನ್ನಾದರು ಸಂಬಂಧಪಟ್ಟವರು ಸಮಸ್ಯೆಯನ್ನು ಗಮನಹರಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಬೇಕಿದೆ.

-ಅಭಿಲಾಷ್‌ ಆರಾಧ್ಯ, ವಡ್ಡರಗುಡಿ ನಿವಾಸಿ

andolana

Recent Posts

ಶ್ರೀ ಮುತ್ತಪ್ಪ ಭಗವತಿ ದೇವಾಲಯದ ವಾರ್ಷಿಕೋತ್ಸವಕ್ಕೆ ತೆರೆ

ಸಿದ್ದಾಪುರ: ಇಲ್ಲಿನ ಶ್ರೀ ಮುತ್ತಪ್ಪ ದೇವಾಲಯದ 51ನೇ ವರ್ಷದ ಹಾಗೂ ಭಗವತಿ ದೇವಾಲಯದ 25ನೇ ವಾರ್ಷಿಕೋತ್ಸವವು ವಿವಿಧ ಪೂಜಾ ಕೈಂಕರ್ಯಗಳೊಂದಿಗೆ…

11 hours ago

ಹನೂರು| ಆಕಸ್ಮಿಕ ಬೆಂಕಿ ತಗುಲಿ ಜೋಳದ ಮೆದೆ ಸಂಪೂರ್ಣ ನಾಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ತಾಲ್ಲೂಕಿನ ಮೂಗೆಗೌಡದೊಡ್ಡಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿ ಜೋಳದ ಮೆದೆ…

11 hours ago

ಗಾಂಜಾ ಮಾರಾಟ, ಸೇವನೆ: ಪ್ರತ್ಯೇಕ ಪ್ರಕರಣದಲ್ಲಿ ನಾಲ್ವರ ಬಂಧನ

ಸಿದ್ದಾಪುರ: ನಿಷೇದಿತ ಮಾದಕ ವಸ್ತುಗಳ ಮಾರಾಟ ಮತ್ತು ಸೇವನೆಗೆ ಸಂಬಂಧಿಸಿದಂತೆ ಪ್ರತ್ಯೇಕ ಪ್ರಕರಣಗಳಲ್ಲಿ ಇಲ್ಲಿನ ಪೊಲೀಸರು ನಾಲ್ವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.…

11 hours ago

ಹನೂರು| ತಾಲ್ಲೂಕು ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ: ಅಧಿಕಾರಿಗಳಿಗೆ ಸೂಚನೆ ನೀಡಿದ ಸಚಿವ ವೆಂಕಟೇಶ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲೂಕು ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ…

11 hours ago

ಟಿ.ನರಸೀಪುರ: ಕೆಎಸ್‌ಐಸಿ ಫ್ಯಾಕ್ಟರಿ ಆವರಣದಲ್ಲಿ ಸ್ಟೇಡಿಯಂ ನಿರ್ಮಿಸುವ ಪ್ರಸ್ತಾವನೆ: ಬೀದಿಗಿಳಿದ ಕಾರ್ಮಿಕರು

ಟಿ.ನರಸೀಪುರ: ಟಿ.ನರಸೀಪುರದಲ್ಲಿರುವ ಕೆಎಸ್‌ಐಸಿ ಫಿಲೇಚರ್‌ ಫ್ಯಾಕ್ಟರಿ ಆವರಣದ ಐದು ಎಕರೆ ಜಾಗದಲ್ಲಿ ಕ್ರೀಡಾಂಗಣ ನಿರ್ಮಿಸುವ ಪ್ರಸ್ತಾವನೆಗೆ ವಿರೋಧ ವ್ಯಕ್ತವಾಗಿದೆ. ಇಂದು…

12 hours ago

ಕೇರಳ ಇನ್ನು ಮುಂದೆ ಕೇರಳಂ: ಹೆಸರು ಬದಲಾವಣೆಗೆ ಕೇಂದ್ರ ಸರ್ಕಾರ ಅಸ್ತು

ನವದೆಹಲಿ: ಕೇರಳ ರಾಜ್ಯದ ಹೆಸರನ್ನು ಅಧಿಕೃತವಾಗಿ ಕೇರಳಂ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಹಸಿರು ನಿಶಾನೆ…

12 hours ago