ಪ್ರಶಾಂತ್ ಎಸ್ ಮೈಸೂರು
ಎಚ್ ಡಿ ಕೋಟೆ : ಮಳೆಯ ಆರ್ಭಟದಿಂದ ಪಟ್ಟಣದ ವಡ್ಡರಗುಡಿ ಗ್ರಾಮಕ್ಕೆ ಹೋಗುವ ರಸ್ತೆ ಸಂಪೂರ್ಣ ಜಲಾವೃತಗೊಂಡಿದ್ದು ಸಾರ್ವಜನಿಕರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.
ನೆನ್ನೆ ಸುರಿದ ಬಾರಿ ಮಳೆಯಿಂದ ಹೆಬ್ಬಾಳ ಜಲಾಶಯ ಭರ್ತಿಯಾಗಿ ಕೋಡಿ ಬಿದ್ದ ಪರಿಣಾಮ ವಡ್ಡರಗುಡಿ ಸೇತುವೆ ಜಲಾವೃತಗೊಂಡು ಜನಸಾಮಾನ್ಯರ ಸಂಚಾರ ಸ್ಥಗಿತಗೊಂಡಿದೆ, ಹಲವು ತಿಂಗಳಿನಿಂದ ಸಾಕಷ್ಟು ಬಾರಿ ಜಲಾವೃತಗೊಳ್ಳುತ್ತಿರುವ ಈ ಸೇತುವೆಯಿಂದಾಗಿ ಇಲ್ಲಿನ ಜನರು ಸಮಸ್ಯೆಯನ್ನು ಎದುರಿಸುವಂತಾಗಿದೆ . ಅಲ್ಲದೇ ಸೇತುವೆಯ ಅಕ್ಕಪಕ್ಕದ ತಡೆಗೋಡೆಗಳು ಕೂಡ ಶಿಥಿಲ ವ್ಯವಸ್ಥೆಯಲ್ಲಿದೆ. ಈ ವಿಚಾರ ಕುರಿತು ಸಂಬಂಧಪಟ್ಟವರಿಗೆ ಮಾಹಿತಿ ನೀಡಿದರು ಸಮಸ್ಯೆ ಮಾತ್ರ ಪರಿಹಾರವಾಗಿಲ್ಲ . ಇನ್ನಾದರು ಈ ಸಮಸ್ಯೆ ತಪ್ಪಿಸಲು ಸಂಬಂಧಪಟ್ಟ ಅಧಿಕಾರಿಗಳು, ಜನಪ್ರತಿನಿಧಿಗಳು ಗಮನಹರಿಸುವರಾ ನೋಡಬೇಕಿದೆ.
ಪ್ರತಿಬಾರಿಯು ಮಳೆ ಬಂದಾಗ ಈ ಸಮಸ್ಯೆ ಆಗುತ್ತಲೇ ಇದೆ. ಅದರು ಸಂಬಂಧಪಟ್ಟವರು ಯಾರು ಕೂಡ ಇದರ ಬಗ್ಗೆ ಗಮನಹರಿಸುತ್ತಿಲ್ಲ. ನಾವು ಪ್ರತಿದಿನ ಕೂಲಿ ಕೆಲಸಕ್ಕೆ ಹೋಗುವುದು ಅದೇ ರಸ್ತೆಯಲ್ಲಿ ರಾತ್ರಿ ವೇಳೆಯು ಒಡಾಡುತ್ತೇವೆ. ಅಲ್ಲದೇ ಸೇತುವೆ ಬಳಿ ಒಂದು ಬೀದಿ ದೀಪ ಕೂಡ ಇಲ್ಲ. ಹೀಗಾಗಿ ಮಳೆ ಬಂದಾಗ ಸೇತುವೆ ಸಮಸ್ಯೆ, ಇಲ್ಲದಿದ್ದಾಗ ಬೀದಿ ದೀಪದ ಸಮಸ್ಯೆ. ಇಂತಹ ಸಮಸ್ಯೆಗಳನ್ನು ಎದುರಿಸುತ್ತಿದ್ದೇವೆ. ಇನ್ನಾದರು ಸಂಬಂಧಪಟ್ಟವರು ಸಮಸ್ಯೆಯನ್ನು ಗಮನಹರಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಬೇಕಿದೆ.
ಚೆನ್ನೈ: ರಾಜ್ಯದಲ್ಲಿ ಅಪ್ರಾಪ್ತ ವಯಸ್ಕರಲ್ಲಿ ಹೆಚ್ಚುತ್ತಿರುವ ಮದ್ಯ ಸೇವನೆಯನ್ನು ತಡೆಯಲು, ತಮಿಳುನಾಡು ಸರ್ಕಾರವು ಎಲ್ಲಾ ರೀತಿಯ ಮದ್ಯ ಖರೀದಿ ಮತ್ತು…
ಬೆಂಗಳೂರು: ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಿಗೆ ಪೂರ್ವ ಮುಂಗಾರು ಆರ್ಭಟ ಮುಂದುವರಿದಿದೆ. ನಾಳೆ ಮತ್ತಷ್ಟು ತೀವ್ರತೆ…
ಲಕ್ನೋ: ಉತ್ತರ ಪ್ರದೇಶದಾದ್ಯಂತ ಭಾರೀ ಮಳೆ ಮತ್ತು ಬಿರುಗಾಳಿಗೆ ಈವರೆಗೆ 104 ಜನರು ಸಾವನ್ನಪ್ಪಿದ್ದಾರೆ. ಮಳೆ ಹೊಡೆತಕ್ಕೆ 53 ಜನರಿಗೆ…
ಬೆಂಗಳೂರು: ಇದೇ ತಿಂಗಳ 24 ರಂದು ನಡೆಯಬೇಕಿದ್ದ ಎಂಬಿಎ, ಎಂಸಿಎ ಕೋರ್ಸ್ಗಳ ಪ್ರವೇಶ್ ಪರೀಕ್ಷೆಯನ್ನು ಜೂನ್.14ಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಮಿಳುನಾಡಿಗೆ ಭತ್ತ ತುಂಬಿಕೊಂಡು ಹೋಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ…
ಹನೂರು: ತಾಲ್ಲೂಕಿನ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂಬ ಹೆಗ್ಗಳಿಕೆ ಹೊಂದಿರುವ ಮಾರ್ಟಳ್ಳಿಯಲ್ಲಿ ಸದ್ಯ ಸ್ವಚ್ಛತೆ ಎಂಬುದು ಮರೀಚಿಕೆಯಾಗಿದೆ. ಗ್ರಾಮದ…