ಪ್ರಶಾಂತ್ ಎಸ್ ಮೈಸೂರು
ಎಚ್ ಡಿ ಕೋಟೆ : ಮಳೆಯ ಆರ್ಭಟದಿಂದ ಪಟ್ಟಣದ ವಡ್ಡರಗುಡಿ ಗ್ರಾಮಕ್ಕೆ ಹೋಗುವ ರಸ್ತೆ ಸಂಪೂರ್ಣ ಜಲಾವೃತಗೊಂಡಿದ್ದು ಸಾರ್ವಜನಿಕರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.
ನೆನ್ನೆ ಸುರಿದ ಬಾರಿ ಮಳೆಯಿಂದ ಹೆಬ್ಬಾಳ ಜಲಾಶಯ ಭರ್ತಿಯಾಗಿ ಕೋಡಿ ಬಿದ್ದ ಪರಿಣಾಮ ವಡ್ಡರಗುಡಿ ಸೇತುವೆ ಜಲಾವೃತಗೊಂಡು ಜನಸಾಮಾನ್ಯರ ಸಂಚಾರ ಸ್ಥಗಿತಗೊಂಡಿದೆ, ಹಲವು ತಿಂಗಳಿನಿಂದ ಸಾಕಷ್ಟು ಬಾರಿ ಜಲಾವೃತಗೊಳ್ಳುತ್ತಿರುವ ಈ ಸೇತುವೆಯಿಂದಾಗಿ ಇಲ್ಲಿನ ಜನರು ಸಮಸ್ಯೆಯನ್ನು ಎದುರಿಸುವಂತಾಗಿದೆ . ಅಲ್ಲದೇ ಸೇತುವೆಯ ಅಕ್ಕಪಕ್ಕದ ತಡೆಗೋಡೆಗಳು ಕೂಡ ಶಿಥಿಲ ವ್ಯವಸ್ಥೆಯಲ್ಲಿದೆ. ಈ ವಿಚಾರ ಕುರಿತು ಸಂಬಂಧಪಟ್ಟವರಿಗೆ ಮಾಹಿತಿ ನೀಡಿದರು ಸಮಸ್ಯೆ ಮಾತ್ರ ಪರಿಹಾರವಾಗಿಲ್ಲ . ಇನ್ನಾದರು ಈ ಸಮಸ್ಯೆ ತಪ್ಪಿಸಲು ಸಂಬಂಧಪಟ್ಟ ಅಧಿಕಾರಿಗಳು, ಜನಪ್ರತಿನಿಧಿಗಳು ಗಮನಹರಿಸುವರಾ ನೋಡಬೇಕಿದೆ.
ಪ್ರತಿಬಾರಿಯು ಮಳೆ ಬಂದಾಗ ಈ ಸಮಸ್ಯೆ ಆಗುತ್ತಲೇ ಇದೆ. ಅದರು ಸಂಬಂಧಪಟ್ಟವರು ಯಾರು ಕೂಡ ಇದರ ಬಗ್ಗೆ ಗಮನಹರಿಸುತ್ತಿಲ್ಲ. ನಾವು ಪ್ರತಿದಿನ ಕೂಲಿ ಕೆಲಸಕ್ಕೆ ಹೋಗುವುದು ಅದೇ ರಸ್ತೆಯಲ್ಲಿ ರಾತ್ರಿ ವೇಳೆಯು ಒಡಾಡುತ್ತೇವೆ. ಅಲ್ಲದೇ ಸೇತುವೆ ಬಳಿ ಒಂದು ಬೀದಿ ದೀಪ ಕೂಡ ಇಲ್ಲ. ಹೀಗಾಗಿ ಮಳೆ ಬಂದಾಗ ಸೇತುವೆ ಸಮಸ್ಯೆ, ಇಲ್ಲದಿದ್ದಾಗ ಬೀದಿ ದೀಪದ ಸಮಸ್ಯೆ. ಇಂತಹ ಸಮಸ್ಯೆಗಳನ್ನು ಎದುರಿಸುತ್ತಿದ್ದೇವೆ. ಇನ್ನಾದರು ಸಂಬಂಧಪಟ್ಟವರು ಸಮಸ್ಯೆಯನ್ನು ಗಮನಹರಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಬೇಕಿದೆ.
ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…
ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…
ಸರ್ಕಾರದ ಯಾವುದೇ ಯೋಜನೆ, ಕಾರ್ಯಕ್ರಮ, ಸವಲತ್ತು ಮೊದಲು ದಲಿತ, ದಮನಿತ, ಶೋಷಿತ ವರ್ಗಕ್ಕೆ ತಲುಪಬೇಕು. ಅವರು ಸಾಮಾಜಿಕವಾಗಿ, ಆರ್ಥಿಕವಾಗಿ ಮೇಲೆ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಿಡದಿ ಟೌನ್ ಶಿಪ್ ನಿರ್ಮಾಣ ಮಾಡುವ ಮೊದಲು ಮತ್ತೊಮ್ಮೆ ಅದರ ಸಾಧಕ ಬಾಧಕಗಳ ಬಗ್ಗೆ ಯೋಚಿಸಿ…
ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಭಕ್ತರು ನೀಡಿದ ಸಾವಿರಾರು ಕೋಟಿ ರೂಪಾಯಿ ದೇಣಿಗೆ ಹಣ, ಆಭರಣಗಳ ಕಳ್ಳತನ ಪ್ರಕರಣ ರಾಮಭಕ್ತರ ವಿಶ್ವಾಸವನ್ನು…
ಎಚ್.ಎಸ್.ದಿನೇಶ್ ಕುಮಾರ್ ಮೈಸೂರಿನ ಶ್ರೀರಾಂಪುರದ ಉದ್ಯಾನದಲ್ಲಿರುವ ಶೌಚಾಲಯದ ದುಸ್ಥಿತಿ ಮೈಸೂರು: ಜನರ ಲಕ್ಷಾಂತರ ರೂ. ತೆರಿಗೆ ಹಣವನ್ನು ವ್ಯಯಿಸಿ ಕಟ್ಟಿಸಿರುವ…