Lakshmi Hebbalkar visits Chamundeshwari with her family
ಮೈಸೂರು : ಮೂರನೇ ಆಷಾಢ ಶುಕ್ರವಾರದ ಅಂಗವಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಕುಟುಂಬ ಸಮೇತ ಚಾಮುಂಡೇಶ್ವರಿ ದರ್ಶನ ಪಡೆದರು.
ಆಷಾಢ ಮಾಸವು ಬಹಳ ವಿಶೇಷವಾಗಿದ್ದು, ಶಕ್ತಿ ದೇವತೆಗಳ ಆರಾಧನೆಗೆ ಹೆಚ್ಚು ಮಹತ್ವ ನೀಡಿರುವ ಮಾಸವಾಗಿದೆ. ನಾಡಿನ ಒಳಿತಿಗಾಗಿ ವಿಶೇಷ ಪೂಜೆ ಸಲ್ಲಿಸಿದೆ. ರಾಜ್ಯದಲ್ಲಿ ಈ ವರ್ಷವೂ ಉತ್ತಮ ಮಳೆಯಾಗಿ ರೈತರ ಬದುಕು ಸಮೃದ್ಧಿಯಾಗಲಿ ಎಂದು ಪ್ರಾರ್ಥಿಸಲಾಯಿತು ಎಂದು ಸಚಿವರು ತಿಳಿಸಿದರು.
2023ರಲ್ಲಿ ಕರ್ನಾಟಕ ವಿಧಾನಸಭಾ ಚುನಾವಣೆಗೂ ಮುನ್ನ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೇರಲಿ ಎಂದು ಹರಕೆ ಹೊತ್ತುಕೊಂಡಿದ್ದರು. ಕಾಂಗ್ರೆಸ್ ಪಕ್ಷ ಕರ್ನಾಟಕದಲ್ಲಿ ಜಯಭೇರಿ ಬಾರಿಸಿ, ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಲಕ್ಷ್ಮೀ ಹೆಬ್ಬಾಳಕರ್ ಅವರು ಚಾಮುಂಡಿ ಬೆಟ್ಟಕ್ಕೆ ಬಂದು ಹರಕೆ ತೀರಿಸಿದ್ದರು. ಇದಾದ ಬಳಿಕ ಗೃಹಲಕ್ಷ್ಮಿ ಯೋಜನೆಯ ಉದ್ಘಾಟನಾ ಸಮಾರಂಭಕ್ಕೂ ಮುನ್ನ ಮೊದಲ ಕಂತಿನ ಮೊದಲ ಫಲಾನುಭವಿ ಮೊತ್ತವನ್ನು ತಾಯಿ ಚಾಮುಂಡೇಶ್ವರಿಗೆ ಸಚಿವರು ಅರ್ಪಿಸಿದ್ದರು. ಮೈಸೂರಿಗೆ ಬಂದಾಗಲೆಲ್ಲಾ ತಪ್ಪದೇ ಚಾಮುಂಡೇಶ್ವರಿ ತಾಯಿ ದರ್ಶನ ಪಡೆಯುವುದು ಸಚಿವರ ವಾಡಿಕೆಯಾಗಿದೆ.
ಈ ವೇಳೆ ಸಹೋದರ ಹಾಗೂ ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ್ ಹಟ್ಟಿಹೊಳಿ, ಪುತ್ರ ಮೃಣಾಲ್ ಹೆಬ್ಬಾಳಕರ್, ಸಚಿವರ ತಾಯಿ, ಸಹೋದರಿಯರು ಸೇರಿದಂತೆ ಹಲವು ಮಂದಿ ಉಪಸ್ಥಿತರಿದ್ದರು.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…