Lakshmi Hebbalkar visits Chamundeshwari with her family
ಮೈಸೂರು : ಮೂರನೇ ಆಷಾಢ ಶುಕ್ರವಾರದ ಅಂಗವಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಕುಟುಂಬ ಸಮೇತ ಚಾಮುಂಡೇಶ್ವರಿ ದರ್ಶನ ಪಡೆದರು.
ಆಷಾಢ ಮಾಸವು ಬಹಳ ವಿಶೇಷವಾಗಿದ್ದು, ಶಕ್ತಿ ದೇವತೆಗಳ ಆರಾಧನೆಗೆ ಹೆಚ್ಚು ಮಹತ್ವ ನೀಡಿರುವ ಮಾಸವಾಗಿದೆ. ನಾಡಿನ ಒಳಿತಿಗಾಗಿ ವಿಶೇಷ ಪೂಜೆ ಸಲ್ಲಿಸಿದೆ. ರಾಜ್ಯದಲ್ಲಿ ಈ ವರ್ಷವೂ ಉತ್ತಮ ಮಳೆಯಾಗಿ ರೈತರ ಬದುಕು ಸಮೃದ್ಧಿಯಾಗಲಿ ಎಂದು ಪ್ರಾರ್ಥಿಸಲಾಯಿತು ಎಂದು ಸಚಿವರು ತಿಳಿಸಿದರು.
2023ರಲ್ಲಿ ಕರ್ನಾಟಕ ವಿಧಾನಸಭಾ ಚುನಾವಣೆಗೂ ಮುನ್ನ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೇರಲಿ ಎಂದು ಹರಕೆ ಹೊತ್ತುಕೊಂಡಿದ್ದರು. ಕಾಂಗ್ರೆಸ್ ಪಕ್ಷ ಕರ್ನಾಟಕದಲ್ಲಿ ಜಯಭೇರಿ ಬಾರಿಸಿ, ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಲಕ್ಷ್ಮೀ ಹೆಬ್ಬಾಳಕರ್ ಅವರು ಚಾಮುಂಡಿ ಬೆಟ್ಟಕ್ಕೆ ಬಂದು ಹರಕೆ ತೀರಿಸಿದ್ದರು. ಇದಾದ ಬಳಿಕ ಗೃಹಲಕ್ಷ್ಮಿ ಯೋಜನೆಯ ಉದ್ಘಾಟನಾ ಸಮಾರಂಭಕ್ಕೂ ಮುನ್ನ ಮೊದಲ ಕಂತಿನ ಮೊದಲ ಫಲಾನುಭವಿ ಮೊತ್ತವನ್ನು ತಾಯಿ ಚಾಮುಂಡೇಶ್ವರಿಗೆ ಸಚಿವರು ಅರ್ಪಿಸಿದ್ದರು. ಮೈಸೂರಿಗೆ ಬಂದಾಗಲೆಲ್ಲಾ ತಪ್ಪದೇ ಚಾಮುಂಡೇಶ್ವರಿ ತಾಯಿ ದರ್ಶನ ಪಡೆಯುವುದು ಸಚಿವರ ವಾಡಿಕೆಯಾಗಿದೆ.
ಈ ವೇಳೆ ಸಹೋದರ ಹಾಗೂ ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ್ ಹಟ್ಟಿಹೊಳಿ, ಪುತ್ರ ಮೃಣಾಲ್ ಹೆಬ್ಬಾಳಕರ್, ಸಚಿವರ ತಾಯಿ, ಸಹೋದರಿಯರು ಸೇರಿದಂತೆ ಹಲವು ಮಂದಿ ಉಪಸ್ಥಿತರಿದ್ದರು.
ವಾಷಿಂಗ್ಟನ್ : ಇರಾನ್ ತಪ್ಪು ವರ್ತನೆ ತೋರಿದರೆ ಮತ್ತೆ ಸೇನಾ ದಾಳಿ ಆರಂಭವಾಗಬಹುದು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್…
ಬೆಂಗಳೂರು : ಬಿರುಬೇಸಿಗೆಯಿಂದಾಗಿ ಬಳಲಿ ಬೆಂಡಾಗಿರುವ ಜನತೆಗೆ ಕೇಂದ್ರ ಹವಾಮಾನ ಇಲಾಖೆ ಸಿಹಿಸುದ್ದಿ ನೀಡಿದ್ದು, ಈ ಬಾರಿ ನಿಗದಿಗಿಂತ ಮುಂಚಿತವಾಗಿಯೇ…
ಬೆಟ್ಟದಪುರ : ಪಿರಿಯಾಪಟ್ಟಣ ತಾಲ್ಲೂಕಿನ ಬಿ.ಟಿ.ಎಂ. ಕೊಪ್ಪಲು ಗ್ರಾಮದಲ್ಲಿ ಮನೆಯ ಹಿಂದೆ ಕ್ರಿಕೆಟ್ ಆಡುತ್ತಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್ ತಗುಲಿ…
ಮೈಸೂರು : ಕಾಡುಪ್ರಾಣಿ ಬೇಟೆ ಹಾಗೂ ಅಕ್ರಮ ಮಾರಾಟಕ್ಕೆ ಯತ್ನಿಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ…
ಬೆಂಗಳೂರು : ಮೋಡ, ಕತ್ತಲೆ, ಮಳೆ... ಯಾವುದಕ್ಕೂ ಜಗ್ಗದ ಕಣ್ಣು ಹೊಂದಿರುವ ಭಾರತದ ಮೊದಲ ಖಾಸಗಿ ಉಪಗ್ರಹ ‘ದೃಷ್ಟಿ’ ಇಂದು…
ಬೆಂಗಳೂರು: ಹಾಸನ ಜಿಲ್ಲೆ ಯಸಳೂರು ವಲಯದಲ್ಲಿ ಕಳೆದ 2023 ಡಿಸೆಂಬರ್.4ರಂದು ಆನೆ ಸೆರೆ ಕಾರ್ಯಾಚರಣೆ ವೇಳೆ ವೀರಾವೇಶದಿಂದ ಹೋರಾಡಿ, ಪಶುವೈದ್ಯರು,…