ಮೈಸೂರು

ಕಬಿನಿಯಿಂದ ನೀರು ಬಿಡುಗಡೆ: ನದಿಪಾತ್ರದ ಜನತೆಯ ಸುರಕ್ಷತೆ ವಹಿಸಲು ಸೂಚನೆ; ಲಕ್ಷ್ಮೀಕಾಂತ ರೆಡ್ಡಿ

ಮೈಸೂರು: ಜಿಲ್ಲೆಯಾದ್ಯಂತ ಮಳೆ ಹೆಚ್ಚಾಗಿದ್ದು, ಈಗಾಗಲೇ ಕಬಿನಿ ಜಲಾಶಯದಿಂದ ಸುಮಾರು 70,000 ಕ್ಯೂಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ. ಅಲ್ಲದೆ ನುಗು ಡ್ಯಾಮ್ ನಿಂದಲೂ ನೀರನ್ನು ಹೊರ ಬಿಡಲಾಗುತ್ತಿದ್ದು, ಈ ನಿಟ್ಟಿನಲ್ಲಿ ನದಿ ಪಾತ್ರದ ಗ್ರಾಮಗಳ ಜನರ ಸುರಕ್ಷತೆಗೆ ಅಧಿಕಾರಿಗಳು ಮುಂಜಾಗ್ರತಾ ಕ್ರಮ ವಹಿಸಲು ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಜಿ. ಲಕ್ಷ್ಮೀ ಕಾಂತ ರೆಡ್ಡಿ ತಿಳಿಸಿದರು.

ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ವಿಪತ್ತು ನಿರ್ವಹಣಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಮುಂದಿನ ಶನಿವಾರದ ಒಳಗೆ ಕೆ.ಆರ್.ಎಸ್ ಜಲಾಶಯದಿಂದ ನೀರನ್ನು ಹೊರಬಿಡುವ ಸಂಭವವಿದ್ದು, ಟಿ.ನರಸೀಪುರ ತಾಲೂಕಿನ ನದಿ ಪಾತ್ರದ ಜನತೆ ಸುರಕ್ಷತೆ ಸೇರಿದಂತೆ ನಂಜನಗೂಡಿನ ನದಿ ಪಾತ್ರದ ಜನರ ಸುರಕ್ಷತೆಗಾಗಿ ಅಧಿಕಾರಿಗಳು ಅಗತ್ಯ ಕ್ರಮ ವಹಿಸಬೇಕು ಎಂದರು.

ಇಂದಿನಿಂದಲೇ ಅಧಿಕಾರಿಗಳು ಎಲ್ಲಾ ತಾಲೂಕುಗಳಿಗೆ ಭೇಟಿ ನೀಡಿ ಅಲ್ಲಿನ ಜನರಿಗೆ ಜಾಗೃತರಾಗಿ ಇರುವಂತೆ ಹಾಗೂ ನದಿಯ ಎರಡೂ ದಂಡೆಗಳಲ್ಲಿನ ಸಾರ್ವಜನಿಕರು ಹಾಗೂ ಜಾನುವಾರಿಗಳ ರಕ್ಷಣೆಗಾಗಿ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಅಧಿಕಾರಿಗಳು ಜಾಗೃತಿ ಮೂಡಿಸಬೇಕು ಎಂದು ತಿಳಿಸಬೇಕು.

ಅತಿಯಾದ ಮಳೆಯಿಂದ ಹಾನಿ ಉಂಟಾಗಿ ಯಾವುದೇ ಅಚಾತುರ್ಯ ಹಾಗೂ ಪ್ರಾಣಹಾನಿಗಳು ಸಂಭವಿಸದಂತೆ ಮೊದಲೇ ಪರಿಸ್ಥಿತಿಯನ್ನು ಅರಿತು ಅಲ್ಲಿನ ಜನರನ್ನು ಕಾಳಜಿ ಕೇಂದ್ರಕ್ಕೆ ಕಳುಹಿಸಲು ಅಗತ್ಯ ಕ್ರಮ ವಹಿಸಬೇಕು. ಕಾಳಜಿ ಕೇಂದ್ರಗಳಲ್ಲಿ ಜನರಿಗೆ ಬೇಕಾಗುವಂತಹ ಎಲ್ಲ ಮೂಲಭೂತ ಸೌಕರ್ಯಗಳನ್ನು ಒದಗಿಸಿ ಉತ್ತಮ ಆಹಾರ, ಶುದ್ಧ ಕುಡಿಯುವ ನೀರು ಹಾಗೂ ಪ್ರಾಥಮಿಕ ಆರೋಗ್ಯ ಚಿಕಿತ್ಸಾ ಸೌಲಭ್ಯವನ್ನು ಒದಗಿಸಬೇಕು. ಅದಕ್ಕೆ ಬೇಕಾಗುವಂತಹ ಕ್ರಮವನ್ನು ಹಿಂದಿನಿಂದಲೇ ಕೈಗೊಳ್ಳಬೇಕು ಎಂದು ತಿಳಿಸಿದರು.

ವಿದ್ಯುತ್ ನಿಗಮದವರು ಗ್ರಾಮೀಣ ಪ್ರದೇಶದಲ್ಲಿ ಅತಿಯಾದ ಮಳೆ ಗಾಳಿಯಿಂದ ಮರಗಳು ಮುರಿದು ವಿದ್ಯುತ್ ಸಂಪರ್ಕ ಕಡಿತಗೊಳ್ಳುವ ಸಂದರ್ಭ ಉಂಟಾಗುತ್ತದೆ. ಇಂತಹ ಸನ್ನಿವೇಶಗಳು ಎದುರಾಗುವ ಮೊದಲೇ ಅವುಗಳಿಗೆ ಪರ್ಯಾಯವನ್ನು ಹುಡುಕಿ ಜನರಿಗೆ ಯಾವುದೇ ರೀತಿಯ ಸಮಸ್ಯೆ ಆಗದಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.

ನಗರ ಸ್ಥಳೀಯ ಸಂಸ್ಥೆಗಳು ಅತಿಯಾದ ಮಳೆ ಹಾಗೂ ಗಾಳಿಗೆ ಬೀಳುವ ಮರಗಳನ್ನು ಗುರುತಿಸಿ ಅವುಗಳನ್ನು ತಕ್ಷಣವೇ ತೆರವುಗೊಳಿಸಬೇಕು. ಅಲ್ಲದೆ ಹಲವಾರು ಕಡೆ ವಾಟರ್ ಬ್ಲಾಕಿಂಗ್ ಸಮಸ್ಯೆಗಳಿದ್ದು, ಅವುಗಳನ್ನು ಯಾವುದೇ ತಕ್ಷಣವೇ ಪರಿಹರಿಸಲು ನೈಟ್ ಟೀಮ್ ನೇಮಕ ಮಾಡಬೇಕು ಎಂದು ಸೂಚಿಸಿದರು.

ಈಗಾಗಲೇ ನಂಜನಗೂಡು, ಸರಗೂರು ತಾಲೂಕುಗಳಲ್ಲಿ ಅತಿಯಾದ ಮಳೆಯಿಂದಾಗಿ ಬ್ರಿಡ್ಜ್ ಗಿಂತಲೂ ಮೇಲೆ ನೀರು ಹರಿಯುತ್ತಿರುವುದರಿಂದ ಅಲ್ಲಿನ ಜನರಿಗೆ ಹಾನಿ ಉಂಟಾಗುವ ಸಂಭವವಿರುತ್ತದೆ. ಹಾಗಾಗಿ ಅಧಿಕಾರಿಗಳು ಸಾರ್ವಜನಿಕರು ಬ್ರಿಡ್ಜ್ ಪ್ರದೇಶದಲ್ಲಿ ಓಡಾಡದಂತೆ ಮಾಹಿತಿ ನೀಡಬೇಕು ಎಂದು ಸೂಚಿಸಿದರು.

ಕುಡಿಯುವ ನೀರನ್ನು ಸರಬರಾಜು ಮಾಡುವ ಮೊದಲು ಅದರ ಗುಣಮಟ್ಟವನ್ನು ಪ್ರತಿದಿನವೂ ಪರೀಕ್ಷಿಸಬೇಕು. ಈ ವಿಷಯವಾಗಿ ಅಧಿಕಾರಿಗಳು ಯಾವುದೇ ನಿರ್ಲಕ್ಷ ತೋರದೆ ಶುದ್ಧ ಕುಡಿಯುವ ನೀರನ್ನು ಸಾರ್ವಜನಿಕರಿಗೆ ಸರಬರಾಜು ಮಾಡಬೇಕು ಎಂದು ಹೇಳಿದರು.

ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಕಂದಾಯ ಇಲಾಖೆಯವರು ಮಳೆಹಾನಿ ಸಂಭವಿಸಿದ್ದಲ್ಲಿ ಅವುಗಳ ಬಗ್ಗೆ ತಕ್ಷಣವೇ ಮಾಹಿತಿ ನೀಡಿ ತ್ವರಿತ ಪರಿಹಾರ ದೊರಕಿಸಲು ಮುಂದಾಗಬೇಕು. ಕೃಷಿ ಹಾಗೂ ತೋಟಗಾರಿಕಾ ಬೆಳೆಗಳಲ್ಲಿ ಹಾನಿ ಉಂಟಾಗಿದ್ದರೆ, ಆ ಸ್ಥಳಕ್ಕೆ ಅಧಿಕಾರಿಗಳು ಖುದ್ದಾಗಿ ಭೇಟಿ ನೀಡಿ ಪರಿಶೀಲಿಸಿ ಪರಿಹಾರ ನೀಡಬೇಕು ಎಂದರು.

ಮಕ್ಕಳಿಗೆ ಯಾವುದೇ ರೀತಿಯ ಹಾನಿ ಉಂಟಾಗದಂತೆ ತಡೆಯಲು ಶಿಥಿಲಗೊಂಡ ಶಾಲೆ ಹಾಗೂ ಅಂಗನವಾಡಿಗಳನ್ನು ಬೇರೆ ಕಡೆ ವರ್ಗಾವಣೆ ಮಾಡಬೇಕು ಎಂದು ಸಲಹೆ ನೀಡಿದರು.

ಸಭೆಯಲ್ಲಿ ಮೈಸೂರು ಮಹಾನಗರ ಪಾಲಿಕೆ ಆಯುಕ್ತ ಅಸಾದ್ ಉರ್ ರೆಹಮಾನ್ ಶರೀಫ್, ಅಪರ ಜಿಲ್ಲಾಧಿಕಾರಿ ಡಾ. ಪಿ.ಶಿವರಾಜು, ನಂಜನಗೂಡು, ಎಚ್ಡಿ ಕೋಟೆ, ಸರಗೂರು ತಾಲೂಕಿನ ತಹಶೀಲ್ದಾರರು ಸೇರಿದಂತೆ ಇನ್ನಿತರ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಕಾವೇರಿ ಕೊಳ್ಳದ ರೈತರಿಗೆ 4 ಕಟ್ಟು ನೀರು ; ಕಾವೇರಿ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಬೆಂಗಳೂರು : ಮುಂಗಾರು ಮಳೆ ಕೊರತೆ ಮತ್ತು ಕಾವೇರಿ ಜಲಾನಯನ ಪ್ರದೇಶದಲ್ಲಿ ಜಲಾಶಯಗಳಿಗೆ ನಿರೀಕ್ಷಿತ ಪ್ರಮಾಣದಲ್ಲಿ ನೀರು ಹರಿದುಬಾರದ ಹಿನ್ನೆಲೆಯಲ್ಲಿ,…

2 hours ago

ಮೈಸೂರು | ಭಾರತ್ ಜೋಡೋ ನೋಂದಣಿಗೆ ಚಾಲನೆ

ಮೈಸೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಮುಖ್ಯಮಂತ್ರಿಯವರು ಯುವ ಶಕ್ತಿ ರಾಷ್ಟ್ರ ಶಕ್ತಿ ಎಂಬ ಶೀರ್ಷಿಕೆಯಡಿ ಭಾರತ್…

3 hours ago

ಎಂಡಿಎ ಬದಲಿ ನಿವೇಶನ ಹಂಚಿಕೆ ರದ್ದುಪಡಿಸಿ ಸರ್ಕಾರ ಆದೇಶ

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (MDA) ನಿಯಮಗಳನ್ನು ಉಲ್ಲಂಘಿಸಿ ಮಾಡಲಾಗಿರುವ 50:50 ಬದಲಿ ನಿವೇಶನಗಳ ಹಂಚಿಕೆಗೆ ಸಂಬಂಧಿಸಿದಂತೆ ಏಕಸದಸ್ಯ…

3 hours ago

ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕುಷ ತನಿಖೆ : ಸಿ.ಎಂ ಡಿ.ಕೆ.ಶಿವಕುಮಾರ್*

ಬೆಂಗಳೂರು : ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ…

6 hours ago

ಕ್ಯಾಪ್ಟನ್ ಅಭಿಮನ್ಯು ಆನೆಗೆ ರಾಜೋಚಿತ ಬೀಳ್ಕೊಡುಗೆ ನೀಡಿ : ಸಚಿವ ಖಂಡ್ರೆ

ಬೆಂಗಳೂರು : ಆರು ಬಾರಿ ಚಿನ್ನದಂಬಾರಿ ಹೊತ್ತ 60 ವರ್ಷದ ಕ್ಯಾಪ್ಟನ್ ಅರ್ಜುನ ಆನೆಗೆ ಈ ಬಾರಿ ದಸರಾ ಜಂಬೂಸವಾರಿಯಲ್ಲಿ…

8 hours ago

ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕುಷ ತನಿಖೆ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು: ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿ…

9 hours ago