ಮೈಸೂರಿನಲ್ಲಿ ಲಾಲ್ ಬಾಗ್ ಮಾದರಿ ಸಸ್ಯೋದ್ಯಾನ

ಲಿಂಗಾಂಬುಧಿ ಬೊಟಾನಿಕಲ್ ಗಾರ್ಡನ್ ಶೀಘ್ರವೇ ಸಾರ್ವಜನಿಕರ ವೀಕ್ಷಣೆಗೆ ಮುಕ್ತಿ 

ಮೈಸೂರು: ಪ್ರವಾಸಿ ನಗರಿ ಮೈಸೂರಿನಲ್ಲಿ ಲಾಲ್ ಬಾಗ್ ಮಾದರಿಯ ಸಸ್ಯೋದ್ಯಾನ ಸದ್ಯವೇ ವೀಕ್ಷಣೆಗೆ ತೆರೆದುಕೊಳ್ಳಲಿದೆ. ರಾಮಕೃಷ್ಣನಗರದ ಲಿಂಗಾಂಬುಧಿ ಕೆರೆಯ ಸುಮಾರು 15ರಲ್ಲಿ ನಿರ್ಮಾಣಗೊಂಡಿರುವ ಲಿಂಗಾಂಬುಧಿ ಸಸ್ಯೋದ್ಯಾನ ವಾರದೊಳಗೆ ಸಾರ್ವಜನಿಕರ ಪ್ರವೇಶಕ್ಕೆ ಲಭ್ಯ. 

  ದಸರಾ ನಾಡಹಬ್ಬ ಸಂದರ್ಭದಲ್ಲಿ ಈ ಸಸ್ಯೋದ್ಯಾನವನ್ನು ಸಾರ್ವಜನಿಕರ ಪ್ರವೇಶಕ್ಕೆ ತೆರೆಯಲಾಯಿತು. ನಂತರ ಅಕಾಲಿಕ ಮಳೆಯ ಕಾರಣ ಮುಚ್ಚಲಾಗಿದೆ. ಇದೀಗ ವಾರದೊಳಗೆ ಸಾರ್ವಜನಿಕ ಪ್ರವೇಶಕ್ಕೆ ನೀಡಲಾಗುವುದು ಎಂದು ಮೈಸೂರು ಜಿಲ್ಲಾ ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಕೆ.ರುದ್ರೇಶ್ ಆಂದೋಲನ ಡಿಜಿಟಲ್‌ಗೆ ಮಾಹಿತಿ ನೀಡಲಾಗಿದೆ.

ಲಾಲ್‌ಬಾಗ್ ಮತ್ತು ಊಟದ ಮಾದರಿಯಲ್ಲಿ ಈ ಸಸ್ಯೋದ್ಯಾನ ನಿರ್ಮಾಣ ಮತ್ತು ಸಾಂಸ್ಕೃತಿಕ ನಗರದ ಮತ್ತೊಂದು ಪ್ರವಾಸಿ ತಾಣವಾಗುವ ನಿರೀಕ್ಷೆಯಿದೆ. 2011ರಲ್ಲಿ ಐದು ಹೊಸ ಬೊಟಾನಿಕಲ್ ಗಾರ್ಡನ್ ನಿರ್ಮಾಣಕ್ಕೆ ಸರ್ಕಾರ ಅನುಮೋದನೆ ನೀಡಿತ್ತು. ಅದರಲ್ಲಿ ಲಿಂಗಾಂಬುಧಿ ಬೊಟಾನಿಕಲ್‌ ಗಾರ್ಡನ್‌ ಕೂಡ ಒಂದು.

 

 ಮಹಾರಾಣಿ ಕೃಷ್ಣ ವಿಲಾಸ ಲಿಂಗರಾಜಮ್ಮಣ್ಣಿಯವರ ಸವಿನೆನಪಿಗಾಗಿ 1828 ರಲ್ಲಿ ಮುಮ್ಮಡಿ ಕೃಷ್ಣರಾಜ ಒಡೆಯರ್ ಅವರು ನಿರ್ಮಿಸಿದ ಲಿಂಗಾಂಬುಧಿ ಕೆರೆ ಮೈಸೂರಿನ ಅತಿ ದೊಡ್ಡ ಕೆರೆ ಎಂಬ ಹೆಗ್ಗಳಿಕೆಯನ್ನು ಹೊಂದಿದೆ. 

250 ಕೆರೆ ವಿಸ್ತೀರ್ಣದ ಪ್ರದೇಶದಲ್ಲಿ 100 ಮೀಸಲು ಅರಣ್ಯ ಪ್ರದೇಶವೆಂದು ಘೋಷಿಸಲಾಗಿದೆ. 2012ರಲ್ಲಿ ಇಲ್ಲಿ ಸಸ್ಯೋದ್ಯಾನ ಮಾಡುವ ಉದ್ದೇಶದಿಂದ 30 ಜಾಗವನ್ನು ತೋಟಗಾರಿಕೆ ಇಲಾಖೆಗೆ ಹಸ್ತಾಂತರಿಸಲಾಯಿತು. ಈ 30 ಜಾಗದಲ್ಲಿ 15 ರಲ್ಲಿ ಇರಿಸಲಾಗಿದೆ ಮನಮೋಹಕ ಸಸ್ಯವನ ಸ್ಥಾಪಿಸಲಾಗಿದೆ.

ಅಳಿವಿನಂಚಿನಲ್ಲಿರುವ ಗಿಡ, ಮರಗಳು, ವಾಯು ವಿಹಾರಕ್ಕೆ ಅನುಕೂಲವಾಗುವಂತೆ ವಾಕಿಂಗ್ ಪಾಥ್, ವಿಶ್ರಾಂತಿ ಆಸನಗಳು, ಕಲ್ಲಿನ ಮಂಟಪ, ಸಸ್ಯಗಳ ಸಸ್ಯ ವಿಭಾಗ, ಬಿದಿರು ಬ್ಲಾಕ್, ಗುಲಾಬಿ ಗಾರ್ಡನ್, ಸಸ್ಯಾಲಯ, ಹಣ್ಣುಗಳ ಬ್ಲಾಕ್ ಹೀಗೆ ಹಲವು ವಿಭಾಗಗಳನ್ನು ಮಾಡಿದ್ದು ಎಲ್ಲಕ್ಕೂ ಪ್ರಾಮುಖ್ಯತೆ ಸಿಗುವಂತೆ ವ್ಯವಸ್ಥೆ ಮಾಡಲಾಗಿದೆ. 

ಅಳಿವಿನಂಚಿನಲ್ಲಿರುವ 350ಕ್ಕೂ ಅಧಿಕ ಪ್ರಭೇಧದ ಮರಗಿಡಗಳ ಜೊತೆಗೆ ಅಪರೂಪದ ಔಷಧ ಸಸ್ಯಗಳು, ಹೂವಿನ ಗಿಡಗಳು ಇಲ್ಲಿವೆ. ಹೊಂಗೆ, ಮಾವು, ಬಗನಿ, ಬಿಲ್ವಪತ್ರೆ, ನಾಗಸಂಪಿಗೆ, ನಂದಿಮರ, ಸಂಪಿಗೆ, ಸಾಗವಾನಿ, ಸುರಹೊನ್ನೆ, ಹಲಸು, ಶ್ರೀಗಂಧ, ರಾಮಪತ್ರೆ, ರುದ್ರಾಕ್ಷಿ, ಬೇವು, ಬೆಟ್ಟನೆಲ್ಲಿ, ಗುಲ್‌ ಮೊಹರ್‌, ದೇವದಾರಿ, ನಂದಿ ಸೇರಿದಂತೆ ದೇಶ, ವಿದೇಶಗಳಲ್ಲಿ ನೂರಾರು ಗಿಡ, ಮರಗಳಿಗೆ ಈ ಸಸ್ಯೋದ್ಯಾನ ಆಸರೆಯಾಗಲಿದೆ. ಕಳೆದ ನಾಲ್ಕು ವರ್ಷಗಳಿಂದ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಶ್ರಮವಹಿಸಿದ್ದಾರೆ.

ಚಿಟ್ಟೆ ಉದ್ಯಾನ

ಲಿಂಗಾಂಬುಧಿ ಕೆರೆಯಲ್ಲಿಯೇ ಚಿಟ್ಟೆ ಪಾರ್ಕ್ ಇದ್ದು ಇವುಗಳ ಆಕರ್ಷಣೆಗಾಗಿ ಹೂವು, ಹಣ್ಣಿನ ಗಿಡಗಳನ್ನು ಬೆಳೆಸಲಾಗುತ್ತಿದೆ. ಲಿಂಗಾಂಬುಧಿ ಕೆರೆಯಲ್ಲಿ ಆಶ್ರಯ ಪಡೆದಿರುವ ದೇಶ ವಿದೇಶಗಳ ವಲಸೆ ಪಕ್ಷಿಗಳಿಗೆ ಅನುಕೂಲವಾಗುವಂತೆ ಹಣ್ಣಿನ ಗಿಡಗಳನ್ನು ಬೆಳೆಸಲಾಗಿದೆ. ಉದ್ಯಾನವನದಲ್ಲಿ ನೀರು ಅನುಕೂಲವಾಗುವಂತೆ ಕೊಳದಲ್ಲಿ ನಿಲ್ಲುತ್ತದೆ, ಅದರ ಕೆಲಸ ಪ್ರಗತಿಯಲ್ಲಿದೆ. 

ಪ್ರವೇಶ ಶುಲ್ಕ

ಮೊದಲ ಹಂತದಲ್ಲಿ ಸಾರ್ವಜನಿಕರಿಗೆ ಯಾವುದೇ ಪ್ರವೇಶ ಶುಲ್ಕ ವಿಧಿಸುವುದಿಲ್ಲ. ಆದರೆ ಮುಂದಿನ ದಿನಗಳಲ್ಲಿ ನಿರ್ವಹಣೆಗಾಗಿ ಪ್ರವೇಶ ಶುಲ್ಕ ನಿಗದಿಪಡಿಸುವುದು ಅನಿವಾರ್ಯ ಎಂದು ಇಲಾಖೆ ಉಪ ನಿರ್ದೇಶಕ ಕೆ.ರುದ್ರೇಶ್.

 

andolana

Recent Posts

ಮಕ್ಕಳ ಸಂಕಷ್ಟಕ್ಕೆ ಎಣೆಯಿಲ್ಲ

ಚಿರಂಜೀವಿ ಸಿ. ಹುಲ್ಲಹಳ್ಳಿ  ಮೈಸೂರು: ಸಂಕಷ್ಟದಲ್ಲಿರುವ ಮಕ್ಕಳಿಗೆ ತುರ್ತು ನೆರವು ನೀಡುವ ‘ಮಕ್ಕಳ ಸಹಾಯವಾಣಿ-೧೦೯೮’ಕ್ಕೆ ಜಿಲ್ಲೆಯಲ್ಲಿ ದೂರುಗಳ ಸುರಿಮಳೆಯಾಗುತ್ತಿದೆ. ಕಳೆದ…

2 hours ago

ಬೀದಿ ನಾಯಿಗಳ ಹಾವಳಿ; ಬಸವಳಿದ ಜನತೆ

ಚನ್ನೇಶ ಬಿ.ಇದರಮನಿ ಮೈಸೂರಿನ ಶ್ರೀರಾಂಪುರದಲ್ಲಿ ಆವರಿಸಿರುವ ಶ್ವಾನ ಭೀತಿ ಐದಾರು ಜನರಿಗೆ ಕಚ್ಚಿರುವ ನಾಯಿಗಳು; ಜನರ ಮನವಿಗೆ ಸ್ಪಂದಿಸದ ನಗರಪಾಲಿಕೆ:…

2 hours ago

ದರೋಡೆಗೆ ಪ್ರಶಸ್ತವಾಯಿತೇ ಬೈಪಾಸ್?

ಹೇಮಂತ್‌ಕುಮಾರ್ ಮಂಡ್ಯ: ಭೀಕರ ಅಪಘಾತಗಳ ಹೆಚ್ಚಳದಿಂದ ಕುಖ್ಯಾತಿ ಪಡೆದಿದ್ದ ಬೆಂಗಳೂರು-ಮೈಸೂರು ಹೆದ್ದಾರಿ-ಸರ್ವಿಸ್ ರಸ್ತೆಯು ಈಗ ದರೋಡೆಕೋರರ ತಾಣವಾಗಿ ಬದಲಾಗುತ್ತಿರುವುದು ಕಾರು,…

3 hours ago

ಹನೂರು| ಮೇಕೆ ಮೇಲೆ ಚಿರತೆ ದಾಳಿ: ಸ್ಥಳೀಯರಲ್ಲಿ ಮತ್ತಷ್ಟು ಆತಂಕ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆಮಹದೇಶ್ವರಬೆಟ್ಟ ಕಾಡಂಚಿನ ಇಂಡಿಗನತ್ತ–ನಾಗಮಲೆ ಗ್ರಾಮದಲ್ಲಿ ಚಿರತೆ ದಾಳಿಗೆ ಬಾಲಕ…

15 hours ago

ಮಲೆ ಮಹದೇಶ್ವರನ ಹುಂಡಿಯಲ್ಲಿ 2.16 ಕೋಟಿ ರೂ. ಸಂಗ್ರಹ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಗುರುವಾರ ಹುಂಡಿ…

15 hours ago