ಮೈಸೂರಿನಲ್ಲಿ ಲಾಲ್ ಬಾಗ್ ಮಾದರಿ ಸಸ್ಯೋದ್ಯಾನ

ಲಿಂಗಾಂಬುಧಿ ಬೊಟಾನಿಕಲ್ ಗಾರ್ಡನ್ ಶೀಘ್ರವೇ ಸಾರ್ವಜನಿಕರ ವೀಕ್ಷಣೆಗೆ ಮುಕ್ತಿ 

ಮೈಸೂರು: ಪ್ರವಾಸಿ ನಗರಿ ಮೈಸೂರಿನಲ್ಲಿ ಲಾಲ್ ಬಾಗ್ ಮಾದರಿಯ ಸಸ್ಯೋದ್ಯಾನ ಸದ್ಯವೇ ವೀಕ್ಷಣೆಗೆ ತೆರೆದುಕೊಳ್ಳಲಿದೆ. ರಾಮಕೃಷ್ಣನಗರದ ಲಿಂಗಾಂಬುಧಿ ಕೆರೆಯ ಸುಮಾರು 15ರಲ್ಲಿ ನಿರ್ಮಾಣಗೊಂಡಿರುವ ಲಿಂಗಾಂಬುಧಿ ಸಸ್ಯೋದ್ಯಾನ ವಾರದೊಳಗೆ ಸಾರ್ವಜನಿಕರ ಪ್ರವೇಶಕ್ಕೆ ಲಭ್ಯ. 

  ದಸರಾ ನಾಡಹಬ್ಬ ಸಂದರ್ಭದಲ್ಲಿ ಈ ಸಸ್ಯೋದ್ಯಾನವನ್ನು ಸಾರ್ವಜನಿಕರ ಪ್ರವೇಶಕ್ಕೆ ತೆರೆಯಲಾಯಿತು. ನಂತರ ಅಕಾಲಿಕ ಮಳೆಯ ಕಾರಣ ಮುಚ್ಚಲಾಗಿದೆ. ಇದೀಗ ವಾರದೊಳಗೆ ಸಾರ್ವಜನಿಕ ಪ್ರವೇಶಕ್ಕೆ ನೀಡಲಾಗುವುದು ಎಂದು ಮೈಸೂರು ಜಿಲ್ಲಾ ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಕೆ.ರುದ್ರೇಶ್ ಆಂದೋಲನ ಡಿಜಿಟಲ್‌ಗೆ ಮಾಹಿತಿ ನೀಡಲಾಗಿದೆ.

ಲಾಲ್‌ಬಾಗ್ ಮತ್ತು ಊಟದ ಮಾದರಿಯಲ್ಲಿ ಈ ಸಸ್ಯೋದ್ಯಾನ ನಿರ್ಮಾಣ ಮತ್ತು ಸಾಂಸ್ಕೃತಿಕ ನಗರದ ಮತ್ತೊಂದು ಪ್ರವಾಸಿ ತಾಣವಾಗುವ ನಿರೀಕ್ಷೆಯಿದೆ. 2011ರಲ್ಲಿ ಐದು ಹೊಸ ಬೊಟಾನಿಕಲ್ ಗಾರ್ಡನ್ ನಿರ್ಮಾಣಕ್ಕೆ ಸರ್ಕಾರ ಅನುಮೋದನೆ ನೀಡಿತ್ತು. ಅದರಲ್ಲಿ ಲಿಂಗಾಂಬುಧಿ ಬೊಟಾನಿಕಲ್‌ ಗಾರ್ಡನ್‌ ಕೂಡ ಒಂದು.

 

 ಮಹಾರಾಣಿ ಕೃಷ್ಣ ವಿಲಾಸ ಲಿಂಗರಾಜಮ್ಮಣ್ಣಿಯವರ ಸವಿನೆನಪಿಗಾಗಿ 1828 ರಲ್ಲಿ ಮುಮ್ಮಡಿ ಕೃಷ್ಣರಾಜ ಒಡೆಯರ್ ಅವರು ನಿರ್ಮಿಸಿದ ಲಿಂಗಾಂಬುಧಿ ಕೆರೆ ಮೈಸೂರಿನ ಅತಿ ದೊಡ್ಡ ಕೆರೆ ಎಂಬ ಹೆಗ್ಗಳಿಕೆಯನ್ನು ಹೊಂದಿದೆ. 

250 ಕೆರೆ ವಿಸ್ತೀರ್ಣದ ಪ್ರದೇಶದಲ್ಲಿ 100 ಮೀಸಲು ಅರಣ್ಯ ಪ್ರದೇಶವೆಂದು ಘೋಷಿಸಲಾಗಿದೆ. 2012ರಲ್ಲಿ ಇಲ್ಲಿ ಸಸ್ಯೋದ್ಯಾನ ಮಾಡುವ ಉದ್ದೇಶದಿಂದ 30 ಜಾಗವನ್ನು ತೋಟಗಾರಿಕೆ ಇಲಾಖೆಗೆ ಹಸ್ತಾಂತರಿಸಲಾಯಿತು. ಈ 30 ಜಾಗದಲ್ಲಿ 15 ರಲ್ಲಿ ಇರಿಸಲಾಗಿದೆ ಮನಮೋಹಕ ಸಸ್ಯವನ ಸ್ಥಾಪಿಸಲಾಗಿದೆ.

ಅಳಿವಿನಂಚಿನಲ್ಲಿರುವ ಗಿಡ, ಮರಗಳು, ವಾಯು ವಿಹಾರಕ್ಕೆ ಅನುಕೂಲವಾಗುವಂತೆ ವಾಕಿಂಗ್ ಪಾಥ್, ವಿಶ್ರಾಂತಿ ಆಸನಗಳು, ಕಲ್ಲಿನ ಮಂಟಪ, ಸಸ್ಯಗಳ ಸಸ್ಯ ವಿಭಾಗ, ಬಿದಿರು ಬ್ಲಾಕ್, ಗುಲಾಬಿ ಗಾರ್ಡನ್, ಸಸ್ಯಾಲಯ, ಹಣ್ಣುಗಳ ಬ್ಲಾಕ್ ಹೀಗೆ ಹಲವು ವಿಭಾಗಗಳನ್ನು ಮಾಡಿದ್ದು ಎಲ್ಲಕ್ಕೂ ಪ್ರಾಮುಖ್ಯತೆ ಸಿಗುವಂತೆ ವ್ಯವಸ್ಥೆ ಮಾಡಲಾಗಿದೆ. 

ಅಳಿವಿನಂಚಿನಲ್ಲಿರುವ 350ಕ್ಕೂ ಅಧಿಕ ಪ್ರಭೇಧದ ಮರಗಿಡಗಳ ಜೊತೆಗೆ ಅಪರೂಪದ ಔಷಧ ಸಸ್ಯಗಳು, ಹೂವಿನ ಗಿಡಗಳು ಇಲ್ಲಿವೆ. ಹೊಂಗೆ, ಮಾವು, ಬಗನಿ, ಬಿಲ್ವಪತ್ರೆ, ನಾಗಸಂಪಿಗೆ, ನಂದಿಮರ, ಸಂಪಿಗೆ, ಸಾಗವಾನಿ, ಸುರಹೊನ್ನೆ, ಹಲಸು, ಶ್ರೀಗಂಧ, ರಾಮಪತ್ರೆ, ರುದ್ರಾಕ್ಷಿ, ಬೇವು, ಬೆಟ್ಟನೆಲ್ಲಿ, ಗುಲ್‌ ಮೊಹರ್‌, ದೇವದಾರಿ, ನಂದಿ ಸೇರಿದಂತೆ ದೇಶ, ವಿದೇಶಗಳಲ್ಲಿ ನೂರಾರು ಗಿಡ, ಮರಗಳಿಗೆ ಈ ಸಸ್ಯೋದ್ಯಾನ ಆಸರೆಯಾಗಲಿದೆ. ಕಳೆದ ನಾಲ್ಕು ವರ್ಷಗಳಿಂದ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಶ್ರಮವಹಿಸಿದ್ದಾರೆ.

ಚಿಟ್ಟೆ ಉದ್ಯಾನ

ಲಿಂಗಾಂಬುಧಿ ಕೆರೆಯಲ್ಲಿಯೇ ಚಿಟ್ಟೆ ಪಾರ್ಕ್ ಇದ್ದು ಇವುಗಳ ಆಕರ್ಷಣೆಗಾಗಿ ಹೂವು, ಹಣ್ಣಿನ ಗಿಡಗಳನ್ನು ಬೆಳೆಸಲಾಗುತ್ತಿದೆ. ಲಿಂಗಾಂಬುಧಿ ಕೆರೆಯಲ್ಲಿ ಆಶ್ರಯ ಪಡೆದಿರುವ ದೇಶ ವಿದೇಶಗಳ ವಲಸೆ ಪಕ್ಷಿಗಳಿಗೆ ಅನುಕೂಲವಾಗುವಂತೆ ಹಣ್ಣಿನ ಗಿಡಗಳನ್ನು ಬೆಳೆಸಲಾಗಿದೆ. ಉದ್ಯಾನವನದಲ್ಲಿ ನೀರು ಅನುಕೂಲವಾಗುವಂತೆ ಕೊಳದಲ್ಲಿ ನಿಲ್ಲುತ್ತದೆ, ಅದರ ಕೆಲಸ ಪ್ರಗತಿಯಲ್ಲಿದೆ. 

ಪ್ರವೇಶ ಶುಲ್ಕ

ಮೊದಲ ಹಂತದಲ್ಲಿ ಸಾರ್ವಜನಿಕರಿಗೆ ಯಾವುದೇ ಪ್ರವೇಶ ಶುಲ್ಕ ವಿಧಿಸುವುದಿಲ್ಲ. ಆದರೆ ಮುಂದಿನ ದಿನಗಳಲ್ಲಿ ನಿರ್ವಹಣೆಗಾಗಿ ಪ್ರವೇಶ ಶುಲ್ಕ ನಿಗದಿಪಡಿಸುವುದು ಅನಿವಾರ್ಯ ಎಂದು ಇಲಾಖೆ ಉಪ ನಿರ್ದೇಶಕ ಕೆ.ರುದ್ರೇಶ್.

 

andolana

Recent Posts

ಮೈಸೂರು | ಮಳೆ ಅನಾಹುತ ಎದುರಿಸಲು ಚೆಸ್ಕಾಂ ಸನ್ನದ್ಧ

ಮೈಸೂರು : ಮಳೆಯ ಅನಾಹುತಗಳನ್ನು ಸಮರ್ಥವಾಗಿ ಎದುರಿಸಲು ಚೆಸ್ಕಾಂ ಕೂಡ ಸಿದ್ಧತೆ ಮಾಡಕೊಂಡಿದೆ. ಮೈಸೂರು ನಗರದ ಎಂಟು ಸಬ್ ಡಿವಿಸನ್‌ನಲ್ಲಿ…

9 hours ago

ಮತ್ತೆ ಗ್ರಾಹಕರಿಗೆ ಶಾಕ್ ; ಪೆಟ್ರೋಲ್, ಡೀಸೆಲ್ ದರ 95 ಪೈಸೆ ಹೆಚ್ಚಳ

ಹೊಸದಿಲ್ಲಿ : ಇರಾನ್ ಮೇಲಿನ ಯುದ್ಧದ ನಡುವೆಯೇ ಇಂಧನ ದರಗಳನ್ನು ಒಂದು ವಾರಕ್ಕೂ ಕಡಿಮೆ ಅವಧಿಯಲ್ಲಿ ಎರಡನೇ ಬಾರಿ ಕೇಂದ್ರ…

10 hours ago

2008ರಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್‌

ಸಾರ್ಥಕ ಸೇವೆಯ ಸಮರ್ಪಣೆ ಸಮಾವೇಶದಲ್ಲಿ ಡಿಸಿಎಂ ವಿಶ್ವಾಸ ತುಮಕೂರು: 2028ಕ್ಕೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದೇ ಬರುತ್ತದೆ.…

10 hours ago

ಹಕ್ಕು ಪತ್ರ ವಿತರಣೆಯಲ್ಲಿ ದಾಖಲೆ ನಿರ್ಮಾಣ ಮಾಡಿದ ಕಂದಾಯ ಇಲಾಖೆ

ತುಮಕೂರು : ರಾಜ್ಯ ಸರ್ಕಾರದ ಮೂರು ವರ್ಷಗಳ ಸಾಧನೆ-ಸಾರ್ಥಕ ಸೇವೆಗಳ ಸಮರ್ಪಣಾ ಸಮಾವೇಶದಲ್ಲಿ ಏಕಕಾಲಕ್ಕೆ ಕಂದಾಯ ಇಲಾಖೆಯಿಂದ ಅತ್ಯಧಿಕ ಹಕ್ಕು…

10 hours ago

ಸಂಶೋಧನೆಗೆ ಸಂಕಟ | ಶಿಷ್ಯವೇತನಕ್ಕೆ ಆಗ್ರಹಿಸಿ ಮೈ.ವಿ.ವಿ ಸಂಶೋಧಕರ ಪ್ರತಿಭಟನೆ

ಮೈಸೂರು : ಮೈಸೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಯ ಸಂಶೋಧಕರುಗಳಿಗೆ ಶಿಷ್ಯವೇತನ ನೀಡಬೇಕೆಂದು ಒತ್ತಾಯಿಸಿ ಶಿಷ್ಯವೇತನರಹಿತ ಸಂಶೋಧಕರ ಬಳಗದ ವತಿಯಿಂದ ಮೈಸೂರು ವಿ.ವಿ…

10 hours ago

ಪ್ರಶ್ನೆ ಪತ್ರಿಕೆ ಸೋರಿಕೆ | ನೀಟ್‌ ರದ್ದು, ವಿದ್ಯಾರ್ಥಿಗಳ ಆತಹತ್ಯೆಗೆ ಮೋದಿ ಕಾರಣ ; ಸಿಎಂ ಆರೋಪ

ತುಮಕೂರು : ನೀಟ್ ಪರೀಕ್ಷೆ ರದ್ದಾಗಿ 22 ಲಕ್ಷ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟ ಆಡಿ, ಹಲವು ವಿದ್ಯಾರ್ಥಿಗಳ ಆತಹತ್ಯೆಗೆ…

10 hours ago