ಮೈಸೂರು

ಜಮೀನು ವಿವಾದ: ಜಮೀನನಲ್ಲೇ ಪರಸ್ಪರ ಬಡಿದಾಡಿಕೊಂಡ ಕುಟುಂಬಸ್ಥರು

ಮೈಸೂರು: ಜಿಲ್ಲೆಯ ಹುಣಸೂರು ತಾಲ್ಲೂಕಿನ ಹರಳಹಳ್ಳಿ ಗ್ರಾಮದಲ್ಲಿ ಜಮೀನು ವಿವಾದಕ್ಕಾಗಿ ಒಂದೇ ಮನೆಯ ಎರಡು ಗುಂಪುಗಳ ನಡುವೆ ಗಲಾಟೆ ನಡೆದು ಪರಸ್ಪರ ಬಡಿದಾಡಿಕೊಂಡಿದ್ದಾರೆ.

ಹುಣಸೂರು ತಾಲ್ಲೂಕಿನ ಹರಳಹಳ್ಳಿ ಗ್ರಾಮದಲ್ಲಿ ಏಪ್ರಿಲ್‌.9 ರಂದು ಘಟನೆ ನಡೆದಿದ್ದು, ಒಂದೇ ಕುಟುಂಬದಲ್ಲಿ ವಾಸವಾಗಿರುವ ಮೊದಲ ಹೆಂಡತಿ ಮಗ ಜಮೀನು ಉಳುಮೆ ಮಾಡುವುದನ್ನು ಪ್ರಶ್ನಿಸಿ ಎರಡನೇ ಹೆಂಡತಿ ಮಕ್ಕಳು ಆಕ್ಷೇಪ ವ್ಯಕ್ತಪಡಿಸಿ ಉಳುಮೆ ಮಾಡುತ್ತಿದ್ದ ಮಹೇಶ್ ಎಂಬಾತನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ.

ಈ ಹಲ್ಲೆಯಲ್ಲಿ ಎರಡನೇ ಹೆಂಡತಿಯ ಮಕ್ಕಳು ಮಹೇಶ್‌ ಎಂಬಾತನ ಬೆನ್ನಿಗೆ ಚಾಕುವಿನಿಂದ ಹಲ್ಲೆ ಮಾಡಿದ್ದಾರೆ. ಇದೇ ವೇಳೆ ಮಹೇಶ್‌ ಅವರ ಮಗಳು ದಿವ್ಯಗೆ ಗಂಭೀರ ಗಾಯವಾಗಿದೆ.

ಒಂದೇ ಕುಟುಂಬಸ್ಥರು ಜಮೀನಿನಲ್ಲಿ ಪರಸ್ಪರ ಬಡಿದಾಡಿಕೊಳ್ಳುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಘಟನೆಯ ಬಗ್ಗೆ ಹುಣಸೂರು ಗ್ರಾಮಾಂತರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ದೂರು ದಾಖಲಾಗಿದೆ. ಇನ್ನೂ ಹಲ್ಲೇ ಮಾಡಿದ ಆರು ಜನರಾದ ಭೈರೇಗೌಡ, ರಂಜಿತ್, ಪ್ರೇಮಮ್ಮ, ತೇಜಸ್ವಿನಿ, ರೇಣುಕಾ ಮತ್ತು ಪುಟ್ಟ ಲಕ್ಷ್ಮಮ್ಮ ಎಂಬುವರ ಮೇಲೆ ಎಫ್ಐಆರ್ ದಾಖಲಾಗಿದೆ.

ಅರ್ಚನ ಎಸ್‌ ಎಸ್

Recent Posts

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಕನ್ನಡ ಚಿತ್ರರಂಗವೂ ಅರಸು-ಸಿದ್ದರಾಮಯ್ಯ ಆಡಳಿತ ರಂಗವೂ

ವೈಡ್‌ ಆಂಗಲ್‌  ಬಾ.ನಾ.ಸುಬ್ರಹ್ಮಣ್ಯ  ಅತಿ ಹೆಚ್ಚು ಕಾಲ ನಾಡಿನ ಆಡಳಿತ ಚುಕ್ಕಾಣಿ ಹಿಡಿದಿದ್ದವರು ದೇವರಾಜ ಅರಸು. ಆ ದಾಖಲೆಯನ್ನು ಮೊನ್ನೆ…

1 min ago

ಇಂದು ಫಲಪುಷ್ಪ ಪ್ರದರ್ಶನದ ಮಧುರ ವಸ್ತ್ರೋತ್ಸವ

ಮಂಡ್ಯ: ಜಿಲ್ಲಾಡಳಿತ ಮತ್ತು ಮಂಡ್ಯ ಜಿಲ್ಲಾ ಪಂಚಾಯಿತಿ,ತೋಟಗಾರಿಕೆ ಇಲಾಖೆ ಮತ್ತು ಕೈಮಗ್ಗ ಮತ್ತು ಜವಳಿ ಇಲಾಖೆ ಸಹ ಯೋಗದಲ್ಲಿ ಫಲಪುಷ್ಪ…

6 mins ago

ಜನವರಿ.24ರಿಂದ ಮಂಜಿನ ನಗರಿಯಲ್ಲಿ ಫಲಪುಷ್ಪ ಪ್ರದರ್ಶನ

ನವೀನ್ ಡಿಸೋಜ ಗಮನ ಸೆಳೆಯಲಿದೆ ೧೮ ಅಡಿ ಎತ್ತರದ ಶ್ರೀ ಭಗಂಡೇಶ್ವರ ದೇವಸ್ಥಾನ ಕಲಾಕೃತಿ; ಹಲವು ವಿಭಿನ್ನತೆಯೊಂದಿಗೆ ಆಯೋಜನೆ ಮಡಿಕೇರಿ:…

15 mins ago

ನಗರ ಪಾಲಿಕೆಯಲ್ಲಿ ವೈದ್ಯ ಪದವಿ ಆರೋಗ್ಯಾಧಿಕಾರಿಗೆ ಕೊಕ್: ಇಂಜಿನಿಯರ್‌ಗೆ ಹೊಸ ಹುದ್ದೆ!

ಎಚ್.ಎಸ್.ದಿನೇಶ್‌ಕುಮಾರ್ ಸರ್ಕಾರದ ನಿರ್ಧಾರಕ್ಕೆ ಮಾಜಿ ಮಹಾಪೌರರು, ಮಾಜಿ ಸದಸ್ಯರ ವಿರೋಧ ಮೈಸೂರು: ಬಿಬಿಎಂಪಿ ಹೊರತುಪಡಿಸಿ ಮೈಸೂರು ನಗರಪಾಲಿಕೆ ಸೇರಿದಂತೆ ರಾಜ್ಯದ…

23 mins ago

ದಿಲ್ಲಿ ಗಣರಾಜ್ಯೋತ್ಸವ ಸ್ತಬ್ಧಚಿತ್ರ 2026 : ಕೃಷಿ ಮತ್ತು ತಂತ್ರಜ್ಞಾನದ ಸಮಾಗಮ

ಬೆಂಗಳೂರು : ಭಾರತವನ್ನು ಆತ್ಮನಿರ್ಭರ ರಾಷ್ಟ್ರವನ್ನಾಗಿಸುವ ದಿಶೆಯಲ್ಲಿ ಕರ್ನಾಟಕದಂತಹ ಸ್ವಾವಲಂಬಿ ರಾಜ್ಯಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಕೃಷಿಯಿಂದ ಕೈಗಾರಿಕೆವರೆಗೆ ಹಾಗೂ…

9 hours ago