ಮೈಸೂರು

ಜಮೀನು ವಿವಾದ: ಜಮೀನನಲ್ಲೇ ಪರಸ್ಪರ ಬಡಿದಾಡಿಕೊಂಡ ಕುಟುಂಬಸ್ಥರು

ಮೈಸೂರು: ಜಿಲ್ಲೆಯ ಹುಣಸೂರು ತಾಲ್ಲೂಕಿನ ಹರಳಹಳ್ಳಿ ಗ್ರಾಮದಲ್ಲಿ ಜಮೀನು ವಿವಾದಕ್ಕಾಗಿ ಒಂದೇ ಮನೆಯ ಎರಡು ಗುಂಪುಗಳ ನಡುವೆ ಗಲಾಟೆ ನಡೆದು ಪರಸ್ಪರ ಬಡಿದಾಡಿಕೊಂಡಿದ್ದಾರೆ.

ಹುಣಸೂರು ತಾಲ್ಲೂಕಿನ ಹರಳಹಳ್ಳಿ ಗ್ರಾಮದಲ್ಲಿ ಏಪ್ರಿಲ್‌.9 ರಂದು ಘಟನೆ ನಡೆದಿದ್ದು, ಒಂದೇ ಕುಟುಂಬದಲ್ಲಿ ವಾಸವಾಗಿರುವ ಮೊದಲ ಹೆಂಡತಿ ಮಗ ಜಮೀನು ಉಳುಮೆ ಮಾಡುವುದನ್ನು ಪ್ರಶ್ನಿಸಿ ಎರಡನೇ ಹೆಂಡತಿ ಮಕ್ಕಳು ಆಕ್ಷೇಪ ವ್ಯಕ್ತಪಡಿಸಿ ಉಳುಮೆ ಮಾಡುತ್ತಿದ್ದ ಮಹೇಶ್ ಎಂಬಾತನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ.

ಈ ಹಲ್ಲೆಯಲ್ಲಿ ಎರಡನೇ ಹೆಂಡತಿಯ ಮಕ್ಕಳು ಮಹೇಶ್‌ ಎಂಬಾತನ ಬೆನ್ನಿಗೆ ಚಾಕುವಿನಿಂದ ಹಲ್ಲೆ ಮಾಡಿದ್ದಾರೆ. ಇದೇ ವೇಳೆ ಮಹೇಶ್‌ ಅವರ ಮಗಳು ದಿವ್ಯಗೆ ಗಂಭೀರ ಗಾಯವಾಗಿದೆ.

ಒಂದೇ ಕುಟುಂಬಸ್ಥರು ಜಮೀನಿನಲ್ಲಿ ಪರಸ್ಪರ ಬಡಿದಾಡಿಕೊಳ್ಳುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಘಟನೆಯ ಬಗ್ಗೆ ಹುಣಸೂರು ಗ್ರಾಮಾಂತರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ದೂರು ದಾಖಲಾಗಿದೆ. ಇನ್ನೂ ಹಲ್ಲೇ ಮಾಡಿದ ಆರು ಜನರಾದ ಭೈರೇಗೌಡ, ರಂಜಿತ್, ಪ್ರೇಮಮ್ಮ, ತೇಜಸ್ವಿನಿ, ರೇಣುಕಾ ಮತ್ತು ಪುಟ್ಟ ಲಕ್ಷ್ಮಮ್ಮ ಎಂಬುವರ ಮೇಲೆ ಎಫ್ಐಆರ್ ದಾಖಲಾಗಿದೆ.

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

3 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

3 hours ago

ಓದುಗರ ಪತ್ರ: ಕಾವೇರಿ:ಆದೇಶ ನಿಷ್ಪಕ್ಷಪಾತವಾಗಿರಲಿ

ಸಿಡಬ್ಲ್ಯುಆರ್‌ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್‌ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ…

3 hours ago

ಮಲ್ಟಿಪ್ಲೆಕ್ಸ್: ಪ್ರಾದೇಶಿಕ ಭಾಷಾ ಚಿತ್ರಗಳಿಗೆ ಮಾರಕ ಹಂಚಿಕಾ ಸೂತ್ರ

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಅದೇಕೋ ಏನೋ ಕರ್ನಾಟಕಕ್ಕೂ ಇಲ್ಲಿರುವ ಮಲ್ಟಿಪ್ಲೆಕ್‌ಳಿಗೂ ಆಗಿ ಬರುತ್ತಿಲ್ಲ ಎನಿಸುತ್ತದೆ. ಅದು ಚಿತ್ರೋದ್ಯಮಕ್ಕೆ ಮಾತ್ರವಲ್ಲ,…

3 hours ago

ಕಸ್ತೂರಿ ರಂಗನ್ ವರದಿ ವಿರೋಧಿಸಿ ಇಂದು ಪ್ರತಿಭಟನೆ

ಲಕ್ಷ್ಮೀಕಾಂತ್ ಕೊಮಾರಪ್ಪ ಸುದರ್ಶನ ಸರ್ಕಲ್‌ನಿಂದ ಗಾಂಧಿ ಮೈದಾನದವರೆಗೆ ಪ್ರತಿಭಟನಾ ಮೆರವಣಿಗೆ  ಸೋಮವಾರಪೇಟೆ: ಮಲೆನಾಡ ಭಾಗದ ರೈತರ ಬದುಕಿನ ಮೇಲೆ ತೂಗುಗತ್ತಿಯಂತೆ ಪರಿಣಮಿಸಿರುವ…

3 hours ago

ಚಾ.ನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಜೆ.ಯೋಗೇಶ್ ನೇಮಕ

ರಾಜೇಶ್ ಬೆಂಡರವಾಡಿ ಪ್ರಥಮ ಬಾರಿಗೆ ಇತರೆ ಹಿಂದುಳಿದ ವರ್ಗಕ್ಕೆ ಒಲಿದ ಡಿಸಿಸಿ ಅಧ್ಯಕ್ಷ ಸ್ಥಾನ  ಚಾಮರಾಜನಗರ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ…

4 hours ago