ಹುಣಸೂರು: ಜಮೀನು ವಿವಾದ ಏರ್ಪಟ್ಟ ಪರಿಣಾಮ ಎರಡು ಕುಟುಂಬದ ನಡುವೆ ಮಾತಿನ ಚಕಮಕಿ ನಡೆದಿದ್ದು, ಕೊಲೆ ಬೆದರಿಕೆ ಹಾಕಿದ ಎಂಟು ಮಂದಿ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ಕೊಳಘಟ್ಟ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಸ್ವಾಮಿ, ವಸಂತ, ಅರ್ಜುನ, ಶಾಂತಮ್ಮ, ರವಿ, ಸಿದ್ದರಾಜು, ನಾಗರಾಜು ಹಾಗೂ ಸಿದ್ದಯ್ಯ ಎಂಬುವವರ ವಿರುದ್ಧ ಎಫ್ ಐಆರ್ ದಾಖಲಾಗಿದೆ.
ಕೊಳಘಟ್ಟ ಗ್ರಾಮದ ಸರ್ವೆ ನಂ.73ರ 4 ಎಕರೆ ಜಮೀನಿನ ವಿಚಾರದಲ್ಲಿ ರತ್ನಮ್ಮ ಹಾಗೂ ಸ್ವಾಮಿ ಎಂಬುವವರ ಕುಟುಂಬದ ನಡುವೆ ಜಗಳ ನಡೆದಿದೆ. ಈ ವೇಳೆ ರತ್ಮಮ್ಮ ಜಮೀನು ಸರ್ವೆ ನಡೆಸುವಂತೆ ಮನವಿ ಮಾಡಿದ್ದ ಹಿನ್ನೆಲೆಯಲ್ಲಿ ಗ್ರಾಮ ಲೆಕ್ಕಿಗ ಪರಿಶೀಲನೆ ನಡೆಸಲು ಜಮೀನಿಗೆ ಭೇಟಿ ನೀಡಿದ್ದರು. ಈ ವೇಳೆ ಸ್ಥಳಕ್ಕೆ ಬಂದ ಆರೋಪಿ ಸ್ವಾಮಿ ಸೇರಿದಂತೆ 8 ಮಂದಿ ಕ್ಯಾತೆ ತೆಗೆದು ಗಲಾಟೆ ನಡೆಸಿದ್ದಲ್ಲದೇ, ರತ್ನಮ್ಮ ಹಾಗೂ ಮಗ ವಿಶಾಂತ್ ಮೇಲೆ ಹಲ್ಲೆ ನಡೆಸಿ ಕೊಲೆ ಬೆದರಿಕೆ ಹಾಕಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಈ ಹಿನ್ನೆಲೆಯಲ್ಲಿ ರತ್ನಮ್ಮ ಬಿಳಿಕೆರೆ ಪೊಲೀಸ್ ಠಾಣೆಗೆ ದೂರು ನೀಡಿದ್ದು, ರತ್ನಮ್ಮರ ದೂರಿನ ಮೇರೆಗೆ ಎಂಟು ಮಂದಿ ವಿರುದ್ಧ ಎಫ್ಐಆರ್ ದಾಖಲಾಗಿದೆ.
ರಾಜ್ಯದ ಬಹಳಷ್ಟು ಜನರು ಆನ್ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…
ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…
ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…
ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…
ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ ಛತ್ತೀಸ್ಘಡದ ಭಿಲಾಯ್ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…