ಮೈಸೂರು

ಲ್ಯಾನ್ಸ್‌ಡೌನ್‌ ಕಟ್ಟಡ : ಸ್ಥಿತಿಗತಿ ಪರಿಶೀಲಿಸಿದ ಇಂಟಾಚ್ ತಂಡ

ಶೀರ್ಘ ಸುಪ್ರೀಂಗೆ ತಜ್ಞರ ವರದಿ

ಮೈಸೂರು: ಮಹಾರಾಜರ ಕಾಲದಲ್ಲಿ ನಿರ್ಮಾಣವಾಗಿದ್ದ ಪಾರಂಪರಿಕ ಕಟ್ಟಡಗಳಲ್ಲಿ ಒಂದಾಗಿರುವ ಲ್ಯಾನ್ಸ್‌ಡೌನ್ ಕಟ್ಟಡ ಪುನರ್ ನಿರ್ಮಾಣ ಅಥವಾ ಪುನರ್ ನವೀಕರಣಕ್ಕೆ ಸಂಬಂಧಿಸಿದಂತೆ ತೀರ್ಮಾನ ಕೈಗೊಳ್ಳಬೇಕಿರುವ ಕಾರಣ ಸುಪ್ರೀಂಕೋರ್ಟ್ ನಿರ್ದೇಶನದ ಮೇರೆಗೆ ಭಾರತೀಯ ರಾಷ್ಟ್ರೀಯ ಕಲೆ ಮತ್ತು ಸಾಂಸ್ಕೃತಿಕ ಪರಂಪರೆ ಟ್ರಸ್ಟ್(ಇಂಟಾಚ್) ತಂಡ ಲ್ಯಾನ್ಸ್‌ಡೌನ್ ಕಟ್ಟಡದ ಸ್ಥಿತಿಗತಿ ಕುರಿತು ಪರಿಶೀಲಿಸಿತು.

ಪಾರಂಪರಿಕ ಕಟ್ಟಡಗಳ ಸಂರಕ್ಷಣೆ ಮತ್ತು ನಿರ್ವಹಣೆಗೆ ಸಂಬಂಧಿಸಿದಂತೆ ಕೆಲಸ ಮಾಡುತ್ತಿರುವ ಇಂಟಾಚ್ ತಂಡ ಶುಕ್ರವಾರ ಮೈಸೂರಿಗೆ ಆಗಮಿಸಿ ಮೊದಲು ಲ್ಯಾನ್ಸ್‌ಡೌನ್ ಕಟ್ಟಡವನ್ನು ಪರಿಶೀಲಿಸಿ ಅಧ್ಯಯನ ನಡೆಸಿತು. ಇಂಟಾಚ್‌ನ ತಂಡದ ರಘುನಾಥ್ ಅವರ ನೇತೃತ್ವದಲ್ಲಿ ಮನೀಷ್, ಸಿದ್ದಾರ್ಥ, ಜೀತಾ, ಅಮೃತಾ ಅವರು ಕಟ್ಟಡವನ್ನು ಸಂಪೂರ್ಣವಾಗಿ ಪರಿಶೀಲಿಸಿದರು.

ಕಟ್ಟಡದ ಕೆಳಭಾಗ, ಮೆಟ್ಟಿಲುಗಳು, ಗೋಡೆಗಳು, ನೆಲಹಾಸಿನ ತಾರಸಿಯ ಫೋಟೋ ಮತ್ತು ವೀಡಿಯೋ ರೆಕಾರ್ಡ್ ಮಾಡಿಕೊಂಡರು. ನಂತರ, ಅಲ್ಲಲ್ಲಿ ಸುಣ್ಣದ ಗಾರೆಯಿಂದ ನಿರ್ಮಿಸಿದ್ದ ಕೆಲವು ಮಣ್ಣಿನ ಬಿಡಿಭಾಗಗಳನ್ನು ಸಂಗ್ರಹಿಸಿದರು.

ಯಾವ್ಯಾವ ಕಡೆಗಳಲ್ಲಿ ತೀರಾ ದುಸ್ಥಿತಿಯಲ್ಲಿದೆ, ಯಾವ ಕಡೆಗಳಲ್ಲಿ ಗಟ್ಟಿಮುಟ್ಟಾಗಿದೆ. ನವೀಕರಣ ಮಾಡುವುದಾದರೆ ಯಾವ ರೀತಿಯ ಕ್ರಮಗಳನ್ನು ಕೈಗೊಳ್ಳಬೇಕು ಎನ್ನುವ ಕುರಿತು ಪರಿಶೀಲಿಸಿದರು. ಕಟ್ಟಡದ ಮೊದಲನೇ ಅಂತಸ್ತಿನಲ್ಲಿ ಕೆಲವು ಮಳಿಗೆಗಳು ವಿಶಾಲವಾಗಿದ್ದು, ಮಳೆಯಿಂದ ಸೋರಿಕೆಯಾಗುತ್ತಿವೆ. ಈ ಮಳಿಗೆಗಳನ್ನು ಪುನರ್ ನಿರ್ಮಾಣ ಮಾಡಿದರೆ ಮೊದಲಿನಂತೆ ಮಾಡಬಹುದಾ ಎನ್ನುವುದರ ಬಗ್ಗೆ ತಜ್ಞರು ಪರಸ್ಪರ ಸಮಾಲೋಚನೆ ನಡೆಸಿ ವರದಿ ಮಾಡಿಕೊಂಡರು. ಕಟ್ಟಡವನ್ನು ಪುನರ್ ನವೀಕರಣ ಮಾಡಲು ಸಾಧ್ಯವೇ ಇಲ್ಲ ಎನ್ನುವುದಕ್ಕೆ ವರದಿ ಕೊಡಬೇಕಾದರೆ ಯಾವ್ಯಾವ ಅಂಶಗಳು ಪ್ರಮುಖ ಕಾರಣವಾಗಿದೆ ಎಂಬುದರ ಕುರಿತು ಮುಟ್ಟಿದರೆ ಮಣ್ಣು, ಗಾರೆ ಕಿತ್ತು ಬರುವಂತಹ ಸ್ಥಳಗಳ ಅವಶೇಷಗಳನ್ನು ಸಂಗ್ರಹಿಸಿದರಲ್ಲದೆ, ಕ್ಯಾಮರಾದಲ್ಲಿ ಸೆರೆ ಹಿಡಿದರು.

ನಗರಪಾಲಿಕೆ ಕಾರ್ಯಪಾಲಕ ಅಭಿಯಂತರ ಮಧುಸೂದನ್, ಸಹಾಯಕ ಕಾರ್ಯಪಾಲಕ ಅಭಿಯಂತರ ವೆಂಕಟೇಶ್ ಅವರು ಕಟ್ಟಡಕ್ಕೆ ಸಂಬಂಧಿಸಿದಂತೆ ತಜ್ಞರ ತಂಡಕ್ಕೆ ಪೂರ್ಣ ಮಾಹಿತಿ ನೀಡಿದರು.

ಶೀಘ್ರದಲ್ಲೇ ವರದಿ ಸಲ್ಲಿಕೆ: ಕಟ್ಟಡದ ಸ್ಥಿತಿಗತಿ ಕುರಿತು ಅಧ್ಯಯನ ನಡೆಸಿದ ಇಂಟಾಚ್ ತಂಡ ಶೀಘ್ರದಲ್ಲೇ ಸುಪ್ರೀಂಕೋರ್ಟ್‌ಗೆ ತನ್ನ ವರದಿಯನ್ನು ಸಲ್ಲಿಸಲಿದೆ. ಭಾರತೀಯ ಪುರಾತತ್ವ ಇಲಾಖೆಯ ತಜ್ಞರ ತಂಡ ಕೂಡ ಶೀಘ್ರವೇ ಮೈಸೂರಿಗೆ ಆಗಮಿಸಿ ಪರಿಶೀಲಿಸಲಿದೆ. ಪಾರಂಪರಿಕ ಕಟ್ಟಡದ ಸಂರಕ್ಷಣೆ ಮತ್ತು ನಿರ್ವಹಣೆ ಮಾಡುವುದರ ಕುರಿತಂತೆ ಭಾರತೀಯ ಪುರಾತತ್ವ ಇಲಾಖೆ ತಜ್ಞರು ಪರಿಶೀಲಿಸಿ ಪ್ರತ್ಯೇಕ ವರದಿ ಕೊಡಬೇಕಿದೆ. ಈ ಎರಡು ವರದಿಯನ್ನು ಆಧರಿಸಿ ಸುಪ್ರೀಂಕೋರ್ಟ್ ಅಂತಿಮ ತೀರ್ಮಾನಕ್ಕೆ ಬರಲಿದೆ.

ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸುಪ್ರೀಂ ಮೊರೆ
ಲ್ಯಾನ್ಸ್‌ಡೌನ್ ಕಟ್ಟಡವನ್ನು ನೆಲಸಮಗೊಳಿಸಿ ಪುನರ್ ನಿರ್ಮಾಣ ಮಾಡಲು ಕೈಗೊಂಡ ರಾಜ್ಯಸರ್ಕಾರದ ಕ್ರಮಕ್ಕೆ ಹೈಕೋರ್ಟ್ ಹಸಿರು ನಿಶಾನೆ ತೋರಿಸಿತ್ತು. ಕಟ್ಟಡ ಪುನರ್ ನಿರ್ಮಾಣಕ್ಕೆ ರಾಜ್ಯಸರ್ಕಾರ ೩೫.೯೫ ಕೋಟಿ ರೂ.ಅನುದಾನ ಮೀಸಲಿಟ್ಟು ಟೆಂಡರ್ ಪ್ರಕ್ರಿಯೆ ಶುರು ಮಾಡಿದಾಗಲೇ ಹೈಕೋರ್ಟ್ ತೀರ್ಪು ಪ್ರಶ್ನಿಸಿ ಕೆಲವರು ಸುಪ್ರೀಂಕೋರ್ಟ್ ಮೊರೆಹೋಗಿದ್ದರು.

ಹೀಗಾಗಿ, ಕಟ್ಟಡವನ್ನು ನೆಲಸಮ ಮಾಡುವುದು,ಪುನರ್ ನವೀಕರಣ ವಿಚಾರದಲ್ಲಿ ಮುಂದುವರಿಯದೆ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಹೇಳುವ ಜತೆಗೆ, ಇಂಟಾಚ್‌ನಿಂದ ಕಟ್ಟಡದ ಸ್ಥಿತಿಗತಿ, ಕಟ್ಟಡ ಸಂರಕ್ಷಣೆ ಕುರಿತಾಗಿ ಭಾರತೀಯ ಪುರಾತತ್ವ ಇಲಾಖೆಯ ತಜ್ಞರ ತಂಡ ಪರಿಶೀಲಿಸಿ ವರದಿ ಕೊಡುವಂತೆ ಸೂಚನೆ ನೀಡಿತ್ತು. ಈ ಸೂಚನೆ ಮೇರೆಗೆ ಮೈಸೂರಿಗೆ ಆಗಮಿಸಿದ ಇಂಟಾಚ್ ತಂಡ ಲ್ಯಾನ್ಸ್‌ಡೌನ್ ಕಟ್ಟಡದ ಸ್ಥಿತಿಯನ್ನು ನೋಡಿದ್ದು, ಶೀಘ್ರ ಮುಚ್ಚಿದ ಲಕೋಟೆಯೊಂದಿಗೆ ವರದಿ ಸಲ್ಲಿಸುವುದು ನಿಶ್ಚಿತವಾಗಿದೆ.

ಮಾಹಿತಿ ನೀಡದ ತಂಡ
ಸುಪ್ರೀಂಕೋರ್ಟ್ ಸೂಚನೆಯಂತೆ ಕಟ್ಟಡ ಪರಿಶೀಲನೆ ನಡೆಸಿ ವರದಿ ಕೊಡುತ್ತೇವೆ. ನಾವು ಏನನ್ನೂ ಹೇಳಲಾಗದು ಎಂದು ತಂಡದ ಮುಖ್ಯಸ್ಥ ರಘುನಾಥ್ ಹೇಳಿದರು.

ಆಂದೋಲನ ಡೆಸ್ಕ್

Recent Posts

ಜೋಳದ ಫಸಲು ಕಾಯುವ ವೇಳೆ ಕಾಡಾನೆ ದಾಳಿ: ರೈತನಿಗೆ ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಜಮೀನಿನಲ್ಲಿ ಜೋಳದ ಪಸಲು ಕಾಯುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ…

47 mins ago

ಓದುಗರ ಪತ್ರ: ಸ್ವಾಗತಾರ್ಹ ತೀರ್ಪು!

ಅಧಿಕ ಸುಂಕ ಹೇರಿಕೆ ಚಟ ಬ್ರಹ್ಮಾಸ್ತ್ರವಾಗಿತ್ತು ಟ್ರಂಪಣ್ಣನಿಗೆ ವಿವಿಧ ದೇಶಗಳನು ನಿಯಂತ್ರಿಸಲು! ಆದರೀಗ ರದ್ದುಗೊಳಿಸಿದೆ ಅಮೆರಿಕದ ಸುಪ್ರೀಂ ಕೋರ್ಟ್ ಅಽಕ…

53 mins ago

ಓದುಗರ ಪತ್ರ: ಮಕ್ಕಳಿಗೆ ಮೊಬೈಲ್ ನಿಷೇಧದ ಚಿಂತನೆ: ಸ್ವಾಗತಾರ್ಹ

ರಾಜ್ಯದಲ್ಲಿ ೧೬ ವರ್ಷಕ್ಕಿಂತ ಕಡಿಮೆ ವಯಸ್ಸಿನ ವಿದ್ಯಾರ್ಥಿಗಳಲ್ಲಿ ಮೊಬೈಲ್ ಫೋನ್ ಬಳಕೆಯನ್ನು ನಿಷೇಧಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿರುವುದು ಸ್ವಾಗತಾರ್ಹ.…

59 mins ago

ಓದುಗರ ಪತ್ರ: ಮಕ್ಕಳು ಅಗತ್ಯವಿರುವಷ್ಟೇ ಮೊಬೈಲ್ ಬಳಸಲಿ

ಶಾಲಾ -ಕಾಲೇಜುಗಳಲ್ಲಿ, ವಿದ್ಯಾರ್ಥಿಗಳಿಗೆ ಮೊಬೈಲ್ ಬಳಕೆಯನ್ನು ನಿಷೇಧಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ಉಪಮುಖ್ಯಮಂತ್ರಿ, ಡಿ.ಕೆ.ಶಿವಕುಮಾರ್ ಅವರು ಹೇಳಿರುವುದು ಮಾಧ್ಯಮಗಳಲ್ಲಿ…

1 hour ago

ಓದುಗರ ಪತ್ರ: ಸಿಲ್ಕ್ ಫಿಲೇಚರ್ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣ ಕೈಬಿಡಿ

ಮೈಸೂರಿನಲ್ಲಿ ೧೯೧೨ರಲ್ಲಿ ಮಹಾರಾಜರಾದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಸ್ಥಾಪಿಸಿದ ರೇಷ್ಮೆ ಉದ್ಯಮವು ಜಾಗತಿಕ ಮಟ್ಟದಲ್ಲಿ ಮೈಸೂರು ಸಿಲ್ಕ್ ಸೀರೆ…

1 hour ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಲಕ್ಷಾಂತರ ತಂಗಿಯರ ಬದುಕನ್ನು ಹೊಲಿಯುವ ‘ಟೈಲರ್ ಅಣ್ಣʼ

ತಮಿಳುನಾಡಿನ ನಾಲ್ಕೂವರೆ ಲಕ್ಷಕ್ಕೂ ಹೆಚ್ಚು ಮಹಿಳೆಯರಿಗೆ ಸೆಲ್ವಕುಮಾರ್ ಹೊಲಿಗೆ ತರಬೇತಿ ಯೂಟ್ಯೂಬ್ ತೆರೆದು ಅದರಲ್ಲಿ ‘ಟೈಲರ್ ಬ್ರೋ’ ಎಂದು ಟೈಪಿಸಿದರೆ…

4 hours ago