ಮೈಸೂರು

ಮತಯಾಚನೆ ಕೊನೆ ದಿನ : ಬಿಡುವಿಲ್ಲದ ಪ್ರಚಾರ ನಡೆಸಿದ ಯದುವೀರ್‌

ಮೈಸೂರು : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಚುನಾವಣೆಗೆ ಬಹಿರಂಗ ಪ್ರಚಾರದ ಕೊನೆಯ ದಿನವಾದ ಬುಧವಾರ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಭರ್ಜರಿ ಪ್ರಚಾರ ನಡೆಸಿದರು.

ಬೆಳಿಗ್ಗೆಯಿಂದ ಬಹಿರಂಗ ಪ್ರಚಾರ ಅಂತ್ಯವಾಗುವ ತನಕವೂ ಬಿಡುವಿಲ್ಲದೆ ಪ್ರಚಾರ ನಡೆಸಿ ಮತಯಾಚನೆ ಮಾಡಿದರು.

ಕೃಷ್ಣರಾಜ, ನರಸಿಂಹರಾಜ ಕ್ಷೇತ್ರದ ವ್ಯಾಪ್ತಿಯಲ್ಲಿ ರೋಡ್ ಶೋ ನಡೆಸಿ ತಮ್ಮನ್ನು ಬೆಂಬಲಿಸುವಂತೆ ಮತದಾರರಲ್ಲಿ ಮನವಿ ಮಾಡಿದರು. ಎಂ.ಜಿ.ರಸ್ತೆಯ ರೈತರ ಮಾರುಕಟ್ಟೆಗೆ ತೆರಳಿದ ಯದುವೀರ್ ವ್ಯಾಪಾರಿಗಳಿಗೆ ಕರಪತ್ರ ನೀಡಿ ಬಿಜೆಪಿಗೆ ಮತ ನೀಡುವಂತೆ ಕೋರಿದರು.

ಯದುವೀರ್ ಕೈ ಮುಗಿದು ಬರುತ್ತಿದ್ದಂತೆ ಕೆಲ ಕ್ಷಣ ವ್ಯಾಪಾರ ಮಾಡುವುದನ್ನು ನಿಲ್ಲಿಸಿದ ವ್ಯಾಪಾರಿಗಳು ಪ್ರತಿಯಾಗಿ ನಮಸ್ಕಾರ ಮಾಡಿದರು.

ಈ ವೇಳೆ ಮಹಿಳೆಯೊಬ್ಬರು ಬೂದುಗುಂಬಳ ಕಾಯಿಯಿಂದ ದೃಷ್ಟಿ ತೆಗೆದು ಆಶೀರ್ವಾದ ಮಾಡಿದರು. ನಂತರ, ಮಡಿಕೇರಿ, ವಿರಾಜಪೇಟೆ ಪಟ್ಟಣದಲ್ಲಿ ರೋಡ್‌ಶೋ ನಡೆಸಿ ಮೈಸೂರಿಗೆ ಆಗಮಿಸಿದ ಯದುವೀರ್ ನರಸಿಂಹರಾಜ ಕ್ಷೇತ್ರದ ಹಲವು ಬಡಾವಣೆಗಳಲ್ಲಿ ಭರದಿಂದ ರೋಡ್ ಶೋ ನಡೆಸಿದರು.

ಲಿಂಗಾಯತರ ಬೀದಿಯಲ್ಲಿ ಪೂರ್ಣಕುಂಭ ಸ್ವಾಗತ ನೀಡಿ ಆರತಿ ಬೆಳಗಲಾಯಿತು. ನಂತರ ೧೦೦೮ ಗಣಪತಿ ದೇವಸ್ಥಾನ ಮಾರ್ಗ, ಒಡಿ ಬ್ಲಾಕ್, ಶಿವಾಜಿ ಮುಖ್ಯರಸ್ತೆಯ ಲಕ್ಷ್ಮೀ ವೆಂಕಟೇಶ್ವರ ದೇವಸ್ಥಾನ, ಉದಯಗಿರಿ ಗಣಪತಿ ದೇವಸ್ಥಾನದ ಮಾರ್ಗಗಳಲ್ಲಿ ಮತಯಾಚಿಸಿದರು.

ನಂತರ ಕೆ.ಎನ್.ಪುರದಲ್ಲಿ ಯದುವೀರ್ ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡು ವಾಲ್ಮೀಕಿ ಪುತ್ತಳಿ, ಕತ್ತಿ, ಗುರಾಣಿಯನ್ನು ನೀಡಿ ಸನ್ಮಾನಿಸಲಾಯಿತು. ಕ್ಯಾತಮಾರನಹಳ್ಳಿಯ ಪ್ರತಿಯೊಂದು ಬೀದಿಗಳಲ್ಲಿ ಪುಷ್ಪವೃಷ್ಟಿಗರೆಯಲಾಯಿತು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಅಯೋಧ್ಯೆ ರಾಮಮಂದಿರಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ

ಲಕ್ನೋ: ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಉತ್ತರ ಪ್ರದೇಶದ ರಾಜ್ಯಪಾಲರಾದ…

4 hours ago

ಮುಕ್ತಾಯ ಹಂತಕ್ಕೆ ತಲುಪಿದ ರಾಯ್‌ ಆತ್ಮಹತ್ಯೆ ಪ್ರಕರಣದ ತನಿಖೆ

ಬೆಂಗಳೂರು: ಉದ್ಯಮಿ ಸಿಜೆ ರಾಯ್‌ ಆತ್ಮಹತ್ಯೆ ಪ್ರಕರಣದ ತನಿಖೆ ಬಹುತೇಕ ಮುಕ್ತಾಯದ ಹಂತಕ್ಕೆ ಬಂದಿದ್ದು, ಮುಂದಿನ ವಾರದಲ್ಲಿ ತನಿಖಾ ತಂಡ…

4 hours ago

ರಾಮಚಂದ್ರರಾವ್‌ ರಾಸಲೀಲೆ ಪ್ರಕರಣ: ವಿಡಿಯೋ ಅಸಲಿ ಎಂದ ತನಿಖಾ ತಂಡ

ಬೆಂಗಳೂರು: ಕಚೇರಿಯಲ್ಲಿ ಮಹಿಳೆಯರೊಂದಿಗೆ ರಾಮಚಂದ್ರರಾವ್‌ ಅನುಚಿತ ವರ್ತನೆ ಕುರಿತ ವೈರಲ್‌ ವಿಡಿಯೋಗಳು ಅಸಲಿ ಎಂದು ತನಿಖಾ ತಂಡ ದೃಢಪಡಿಸಿದೆ. ಸಮವಸ್ತ್ರದಲ್ಲಿಯೇ…

4 hours ago

ಮಧ್ಯಪ್ರಾಚ್ಯದಲ್ಲಿ ಬಿಕ್ಕಟ್ಟು ಪರಿಹಾರಕ್ಕೆ ಯತ್ನ: ಮ್ಯಾಕ್ರನ್‌ ಜೊತೆ ಮೋದಿ ಮಾತುಕತೆ

ನವದೆಹಲಿ: ಮಧ್ಯ ಏಷ್ಯಾದಲ್ಲಿ ಬಿಕ್ಕಟ್ಟು ಪರಿಹಾರ ಮಾಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಫ್ರಾನ್ಸ್‌ ಅಧ್ಯಕ್ಷ ಎಮ್ಯಾನುಯೆಲ್‌ ಮ್ಯಾಕ್ರನ್‌ ಜೊತೆ…

4 hours ago

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಸಹೋದರಿ ನಿಧನ

ಹಾಸನ: ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಸಹೋದರಿ ಜವರಮ್ಮ ವಯೋಸಹಜ ಖಾಯಿಲೆಯಿಂದ ನಿಧನರಾಗಿದ್ದಾರೆ. ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು.…

7 hours ago

ರಾಜ್ಯದಲ್ಲಿ ಮತ್ತೆರಡು ದಿನ ಅಬ್ಬರಿಸಲಿದ್ದಾನೆ ವರುಣ

ಬೆಂಗಳೂರು: ಕರ್ನಾಟಕದ ಹಲವೆಡೆ ಮುಂದಿನ ಎರಡು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬೀದರ್‌, ಕಲಬುರ್ಗಿ,…

7 hours ago