ಮೈಸೂರು

ದಸರಾ ಸಾಂಸ್ಕೃತಿಕ ಉಪ ಸಮಿತಿಯಿಂದ ದಸರಾ ವೆಬ್ ಸೈಟ್ ಬಿಡುಗಡೆ

ಮೈಸೂರು : ನಾಡಹಬ್ಬ ದಸರಾ ಮಹೋತ್ಸವದ ಪ್ರಯುಕ್ತ ಹಮ್ಮಿಕೊಂಡಿರುವ ಎಲ್ಲಾ ಕಾರ್ಯಕ್ರಮಗಳನ್ನು ವ್ಯವಸ್ಥಿತವಾಗಿ ರೂಪಿಸಿ ಎಂದು ಡಾ. ಹೆಚ್ ಸಿ ಮಹದೇವಪ್ಪ ತಿಳಿಸಿದರು.

ಮೈಸೂರು ಅರಮನೆ ಮಂಡಳಿಯಲ್ಲಿ ಹಮ್ಮಿಕೊಂಡಿದ್ದ ದಸರಾ ಉಪ ಸಮಿತಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಈ ಬಾರಿ ಅತ್ಯಂತ ಸರಳವೂ ಹಾಗೂ ಅದ್ದೂರಿಯೂ ಅಲ್ಲದ ಸಾಂಪ್ರದಾಯಿಕ ದಸರಾವನ್ನು ಆಚರಿಸುತ್ತಿದ್ದು, ಸಾಂಪ್ರದಾಯಿಕ ದಸರಾ ಆಚರಣೆಗೆ ಬೇಕಾದ ಎಲ್ಲಾ ವ್ಯವಸ್ಥೆಗಳನ್ನು ಹಾಗೂ ಕಾರ್ಯಕ್ರಮಗಳನ್ನು ಕ್ರಮಬದ್ಧವಾಗಿ ಆಯೋಜಿಸಿ ಎಂದು ತಿಳಿಸಿದರು.

ಈಗಾಗಲೇ 18 ವಿವಿಧ ದಸರಾ ಉಪ ಸಮಿತಿಗಳನ್ನು ರಚಿಸಲಾಗಿದ್ದು, ಈ ಬಾರಿ ಹಿಂದಿನ ಅರಮನೆಯ ವೈಭವವನ್ನು ಮರಳಿ ತರುವ ನಿಟ್ಟಿನಲ್ಲಿ 250 (ಸೆರಮೊನಿ ಡ್ರೆಸ್) ಸಮವಸ್ತ್ರಗಳಿಗಾಗಿ ಟೆಂಡರ್ ಕರೆಯಲಾಗುವುದು. ಜಿಲ್ಲಾಮಟ್ಟದಲ್ಲಿ ರೈತ ದಸರಾವನ್ನು ಆಯೋಜಿಸಿ. ರೈತ ದಸರಾದಲ್ಲಿ ರೈತರಿಗೆ ಉಪಯೋಗವಾಗುವ ಮಣ್ಣಿನ ಫಲವತ್ತತೆ, ಮಿಶ್ರ ಬೆಳೆ, ಪರ್ಯಾಯ ಬೆಳೆ ಹಾಗೂ ಆರ್ಥಿಕ ಅಭಿವೃದ್ಧಿ, ಜಿಡಿಪಿ ಮುಂತಾದ ವಿಚಾರಗಳನ್ನು ಒಳಗೊಂಡ ವಿಚಾರ ಸಂಕಿರಣಗಳನ್ನು ಆಯೋಜಿಸಿ ಎಂದು ತಿಳಿಸಿದರು.

ಈ ವೇಳೆ ಸಾಂಸ್ಕೃತಿಕ, ಕ್ರೀಡಾ, ಲಲಿತಕಲಾ, ಕವಿಗೋಷ್ಠಿ, ಗ್ರಾಮೀಣ ದಸರಾ, ಯೋಗಾದಸರಾ ಮಹಿಳಾ ಹಾಗೂ ಮಕ್ಕಳ ದಸರಾ, ಆಹಾರ ಮೇಳ, ಚಲನ ಚಿತ್ರೋತ್ಸವ, ಯುವ ಸಂಭ್ರಮ ಹಾಗೂ ಯುವ ದಸರಾ ಸೇರಿದಂತೆ ವಿವಿಧ ದಸರಾ ಉಪ ಸಮಿತಿಗಳ ಅಧಿಕಾರಿಗಳೊಟ್ಟಿಗೆ/ಸದಸ್ಯರೊಟ್ಟಿಗೆ ಚರ್ಚಿಸಿದರು.

ನಂತರ ದಸರಾ ಸಾಂಸ್ಕೃತಿಕ ಉಪಸಮಿತಿಯ ವತಿಯಿಂದ ಪೋಸ್ಟರ್ ಬಿಡುಗಡೆ ಹಾಗೂ ದಸರಾ ವೆಬ್ ಸೈಟ್ ಗೆ ಚಾಲನೆ ನೀಡಲಾಯಿತು.

ಸಭೆಯಲ್ಲಿ ಕನ್ನಡ ಹಾಗೂ ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ, ಅಪರ ಮುಖ್ಯ ಕಾರ್ಯದರ್ಶಿಗಳಾದ ಮಂಜುಳಾ, ಜಿಲ್ಲಾಧಿಕಾರಿ ಡಾ. ಕೆ ವಿ ರಾಜೇಂದ್ರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ ಗಾಯತ್ರಿ, ಮೈಸೂರು ಮಹಾನಗರ ಪಾಲಿಕೆಯ ಆಯುಕ್ತ ಆಶಾದ್ ಊರ್ ರೆಹಮಾನ್ ಶರೀಫ್, ಕೆಡಿಪಿ ಸದಸ್ಯರಾದ ಯತೀಂದ್ರ ಸಿದ್ದರಾಮಯ್ಯ ಸೇರಿದಂತೆ ದಸರಾ ಉಪ ಸಮಿತಿಗಳ ನೋಡಲ್ ಅಧಿಕಾರಿಗಳು, ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

andolanait

Recent Posts

ದರ್ಶನ್‌ ನೆನೆದು ಫಾರ್ಮ್‌ ಹೌಸ್‌ನಲ್ಲಿ ಸಂಕ್ರಾಂತಿ ಆಚರಿಸಿದ  ವಿಜಯಲಕ್ಷ್ಮಿ: ವಿಡಿಯೋ ನೋಡಿ ಅಭಿಮಾನಿಗಳು ಭಾವುಕ

ಮೈಸೂರು : ನಟ ದರ್ಶನ್‌ ಕುಟುಂಬ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಮಕರ ಸಂಕ್ರಾಂತಿಯನ್ನು ತಮ್ಮ ಫಾರ್ಮ್‌ ಹೌಸ್‌ನಲ್ಲಿ…

9 mins ago

ಅಕ್ಕಿ ತುಂಬಿದ ಲಾರಿ ಪಲ್ಟಿ : ಇಬ್ಬರ ಸಾವು

ಮಳವಳ್ಳಿ : ತಾಲೂಕಿನ ಕಿರುಗಾವಲು ಸಮೀಪ ಅಕ್ಕಿ ತುಂಬಿದ ಲಾರಿ ಒಂದು ಪಲ್ಟಿ ಹೊಡೆದು ಇಬ್ಬರು ಸಾವನ್ನಪ್ಪಿರುವ ಘಟನೆ ಗುರುವಾರ…

37 mins ago

ಸಂಕ್ರಾಂತಿ ಸಂಭ್ರಮ | ನಾಡಿನ ಜನತೆಗೆ ಶುಭ ಕೋರಿದ ಪ್ರಧಾನಿ ಮೋದಿ, ಖರ್ಗೆ, ಸಿಎಂ ಸಿದ್ದರಾಮಯ್ಯ

ಬೆಂಗಳೂರು : ನಾಡಿನೆಲ್ಲೆಡೆ ಮಕರ ಸಂಕ್ರಾಂತಿ ಹಬ್ಬದ ಸಡಗರ ಮನೆ ಮಾಡಿದೆ. ಹೊಸ ವರ್ಷದ ಮೊದಲ ಹಬ್ಬಕ್ಕೆ ಪ್ರಧಾನಿ ನರೇಂದ್ರ…

4 hours ago

ಕನಕಗುರು ಪೀಠದ ಸಿದ್ದರಾಮನಂದ ಸ್ವಾಮೀಜಿ ಹೃದಯಘಾತದಿಂದ ಸಾವು

ರಾಯಚೂರು : ದೇವದುರ್ಗ ತಿಂಥಣಿ ಬ್ರಿಜ್ಡ್ ಕಾಗಿನೆಲೆ ಕನಕಗುರುಪೀಠದ ಸಿದ್ದರಾಮನಂದ ಸ್ವಾಮೀಜಿ (50) ವಿಧಿವಶರಾಗಿದ್ದಾರೆ. ಇಂದು ಬೆಳಗಿನ ಜಾವ 3:30ರ…

4 hours ago

ಓದುಗರ ಪತ್ರ | ಸುಗ್ಗಿಯ ಹಬ್ಬ ಸಂಕ್ರಾಂತಿ

ಮನೆ ಮಂದಿ ಮಕ್ಕಳು ಕೂಡಿ ಕಣ ಹೊಕ್ಕಿ, ಹೊಲ ಗದ್ದೆಯೆಲ್ಲಾ ಬೆಳೆದ ಬೆಳೆ ಕೈಗೆ ಬಂದೈತಿ ನಗುವಿಂದ ಮಿಂದು ಸುಗ್ಗಿಯ…

5 hours ago

ಓದುಗರ ಪತ್ರ | ವನರಂಗದ ಬಯಲು ಮಂದಿರದ ಮೇಲ್ಭಾಗ ಮುಚ್ಚಲಿ

ಮೈಸೂರಿನ ಕರ್ನಾಟಕ ಕಲಾಮಂದಿರದಲ್ಲಿ ಪ್ರತಿ ವರ್ಷದಂತೆ ಈ ಬಾರಿಯೂ ಬಹುರೂಪಿ ನಾಟಕೋತ್ಸವ ನಡೆಯುತ್ತಿದೆ. ಸಿನಿಮಾ ವೀಕ್ಷಿಸಲು ಸಾರ್ವಜನಿಕರಿಗೆ ಉಚಿತ ಹಾಗೂ…

5 hours ago