ಮೈಸೂರು

ದಸರಾ ಸಾಂಸ್ಕೃತಿಕ ಉಪ ಸಮಿತಿಯಿಂದ ದಸರಾ ವೆಬ್ ಸೈಟ್ ಬಿಡುಗಡೆ

ಮೈಸೂರು : ನಾಡಹಬ್ಬ ದಸರಾ ಮಹೋತ್ಸವದ ಪ್ರಯುಕ್ತ ಹಮ್ಮಿಕೊಂಡಿರುವ ಎಲ್ಲಾ ಕಾರ್ಯಕ್ರಮಗಳನ್ನು ವ್ಯವಸ್ಥಿತವಾಗಿ ರೂಪಿಸಿ ಎಂದು ಡಾ. ಹೆಚ್ ಸಿ ಮಹದೇವಪ್ಪ ತಿಳಿಸಿದರು.

ಮೈಸೂರು ಅರಮನೆ ಮಂಡಳಿಯಲ್ಲಿ ಹಮ್ಮಿಕೊಂಡಿದ್ದ ದಸರಾ ಉಪ ಸಮಿತಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಈ ಬಾರಿ ಅತ್ಯಂತ ಸರಳವೂ ಹಾಗೂ ಅದ್ದೂರಿಯೂ ಅಲ್ಲದ ಸಾಂಪ್ರದಾಯಿಕ ದಸರಾವನ್ನು ಆಚರಿಸುತ್ತಿದ್ದು, ಸಾಂಪ್ರದಾಯಿಕ ದಸರಾ ಆಚರಣೆಗೆ ಬೇಕಾದ ಎಲ್ಲಾ ವ್ಯವಸ್ಥೆಗಳನ್ನು ಹಾಗೂ ಕಾರ್ಯಕ್ರಮಗಳನ್ನು ಕ್ರಮಬದ್ಧವಾಗಿ ಆಯೋಜಿಸಿ ಎಂದು ತಿಳಿಸಿದರು.

ಈಗಾಗಲೇ 18 ವಿವಿಧ ದಸರಾ ಉಪ ಸಮಿತಿಗಳನ್ನು ರಚಿಸಲಾಗಿದ್ದು, ಈ ಬಾರಿ ಹಿಂದಿನ ಅರಮನೆಯ ವೈಭವವನ್ನು ಮರಳಿ ತರುವ ನಿಟ್ಟಿನಲ್ಲಿ 250 (ಸೆರಮೊನಿ ಡ್ರೆಸ್) ಸಮವಸ್ತ್ರಗಳಿಗಾಗಿ ಟೆಂಡರ್ ಕರೆಯಲಾಗುವುದು. ಜಿಲ್ಲಾಮಟ್ಟದಲ್ಲಿ ರೈತ ದಸರಾವನ್ನು ಆಯೋಜಿಸಿ. ರೈತ ದಸರಾದಲ್ಲಿ ರೈತರಿಗೆ ಉಪಯೋಗವಾಗುವ ಮಣ್ಣಿನ ಫಲವತ್ತತೆ, ಮಿಶ್ರ ಬೆಳೆ, ಪರ್ಯಾಯ ಬೆಳೆ ಹಾಗೂ ಆರ್ಥಿಕ ಅಭಿವೃದ್ಧಿ, ಜಿಡಿಪಿ ಮುಂತಾದ ವಿಚಾರಗಳನ್ನು ಒಳಗೊಂಡ ವಿಚಾರ ಸಂಕಿರಣಗಳನ್ನು ಆಯೋಜಿಸಿ ಎಂದು ತಿಳಿಸಿದರು.

ಈ ವೇಳೆ ಸಾಂಸ್ಕೃತಿಕ, ಕ್ರೀಡಾ, ಲಲಿತಕಲಾ, ಕವಿಗೋಷ್ಠಿ, ಗ್ರಾಮೀಣ ದಸರಾ, ಯೋಗಾದಸರಾ ಮಹಿಳಾ ಹಾಗೂ ಮಕ್ಕಳ ದಸರಾ, ಆಹಾರ ಮೇಳ, ಚಲನ ಚಿತ್ರೋತ್ಸವ, ಯುವ ಸಂಭ್ರಮ ಹಾಗೂ ಯುವ ದಸರಾ ಸೇರಿದಂತೆ ವಿವಿಧ ದಸರಾ ಉಪ ಸಮಿತಿಗಳ ಅಧಿಕಾರಿಗಳೊಟ್ಟಿಗೆ/ಸದಸ್ಯರೊಟ್ಟಿಗೆ ಚರ್ಚಿಸಿದರು.

ನಂತರ ದಸರಾ ಸಾಂಸ್ಕೃತಿಕ ಉಪಸಮಿತಿಯ ವತಿಯಿಂದ ಪೋಸ್ಟರ್ ಬಿಡುಗಡೆ ಹಾಗೂ ದಸರಾ ವೆಬ್ ಸೈಟ್ ಗೆ ಚಾಲನೆ ನೀಡಲಾಯಿತು.

ಸಭೆಯಲ್ಲಿ ಕನ್ನಡ ಹಾಗೂ ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ, ಅಪರ ಮುಖ್ಯ ಕಾರ್ಯದರ್ಶಿಗಳಾದ ಮಂಜುಳಾ, ಜಿಲ್ಲಾಧಿಕಾರಿ ಡಾ. ಕೆ ವಿ ರಾಜೇಂದ್ರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ ಗಾಯತ್ರಿ, ಮೈಸೂರು ಮಹಾನಗರ ಪಾಲಿಕೆಯ ಆಯುಕ್ತ ಆಶಾದ್ ಊರ್ ರೆಹಮಾನ್ ಶರೀಫ್, ಕೆಡಿಪಿ ಸದಸ್ಯರಾದ ಯತೀಂದ್ರ ಸಿದ್ದರಾಮಯ್ಯ ಸೇರಿದಂತೆ ದಸರಾ ಉಪ ಸಮಿತಿಗಳ ನೋಡಲ್ ಅಧಿಕಾರಿಗಳು, ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

andolanait

Recent Posts

ಗಾಂಧಿ ಅಭಿಯಾನ ಅರಿವಿನ ಯಾನ : ತುಂಡು ಬಟ್ಟೆಯ ಫಕೀರ ಮತ್ತು ಇಂಗ್ಲೆಂಡ್ ಚಕ್ರವರ್ತಿ

ಡಾ. ಪ್ರಮೀಳಾದೇವಿ ಬಿ.ಕೆ ೧೯೩೧-೩೨ರಲ್ಲಿ ಗಾಂಧಿಜಿಯವರು ಉಪ್ಪಿನ ಸತ್ಯಾಗ್ರಹದ ನಂತರ ರೌಂಡ್ ಟೇಬಲ್ ಮಾತುಕತೆಗಾಗಿ ಇಂಗ್ಲೆಂಡಿಗೆ ಹೋದರು. ಈ ವೇಳೆಗಾಗಲೆ…

4 hours ago

ಗಾಂಧಿ ಅಭಿಯಾನ ಅರಿವಿನ ಯಾನ : ಚಾಮರಾಜನಗರ ಸೀಮೆಯಲ್ಲಿ ಗಾಂಧಿಯ ಪ್ರಭಾವ

ಚಾಮರಾಜನಗರ ಮೈಸೂರು ಜಿಯ ಒಂದು ಸಣ್ಣ ತಾಲ್ಲೂಕು ಕೇಂದ್ರವಾಗಿತ್ತು. ಸುಮಾರು ೯೦ ವರ್ಷಗಳ ಹಿಂದೆ ಸಣ್ಣ ಪಟ್ಟಣ. ೧೯೨೬ರಿಂದ ಇಲ್ಲಿಗೆ…

6 hours ago

ಇಂದು ಮೈಸೂರಿಗೆ ಮೋದಿ ಆಗಮನ : ವಿವೇಕ ಸ್ಮಾರಕ ಲೋಕಾರ್ಪಣೆ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಗೆ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭೇಟಿ ನೀಡುತ್ತಿದ್ದಾರೆ. ಸ್ವಾಮಿ ವಿವೇಕಾನಂದರ ಐತಿಹಾಸಿಕ…

6 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಹೊರದೇಶದ ಭಾಷೆಗಳನ್ನು ಕಲಿತೆ

ನೃತ್ಯ ಮುಂತಾದವುಗಳಲ್ಲಿ ನಾನು ನಡೆಸಿದ ಪ್ರಯೋಗಗಳಿಂದ ನಾನು ಉಚ್ಚೃಂಖಲ ಪ್ರವೃತ್ತಿಯುಳ್ಳವನಾಗಿದ್ದನೆಂದು ಯಾರೂ ತಿಳಿಯಬಾರದು. ಅದರಲ್ಲಿಯೂ ವಿವೇಕದ ಅಂಶ ಇದ್ದಿತೆಂಬುದು ವಾಚಕರಿಗೆ…

6 hours ago

ನಾಳೆ ಸಿಎಂ ಡಿ.ಕೆ.ಶಿವಕುಮಾರ್‌ರಿಂದ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು: ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಪ್ರಧಾನಿ…

21 hours ago

ದಯವಿಟ್ಟು ಕರ್ನಾಟಕ ಬಂದ್‌ ಕೈಬಿಡಿ: ಸಿಎಂ ಡಿಕೆಶಿ ನಮ್ರತೆಯ ಮನವಿ

ಬೆಂಗಳೂರು: ರಾಜ್ಯದ ಹಿತ ಕಾಪಾಡೋಕೆ ನಾವಿದ್ದೀವಿ. ದಯವಿಟ್ಟು ಬಂದ್‌ ಕೈಬಿಡಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸರ್ಕಾರದ ಪರವಾಗಿ ನಮ್ರತೆಯ ಮನವಿ…

21 hours ago