ಮೈಸೂರು

ದಸರಾ ಸಾಂಸ್ಕೃತಿಕ ಉಪ ಸಮಿತಿಯಿಂದ ದಸರಾ ವೆಬ್ ಸೈಟ್ ಬಿಡುಗಡೆ

ಮೈಸೂರು : ನಾಡಹಬ್ಬ ದಸರಾ ಮಹೋತ್ಸವದ ಪ್ರಯುಕ್ತ ಹಮ್ಮಿಕೊಂಡಿರುವ ಎಲ್ಲಾ ಕಾರ್ಯಕ್ರಮಗಳನ್ನು ವ್ಯವಸ್ಥಿತವಾಗಿ ರೂಪಿಸಿ ಎಂದು ಡಾ. ಹೆಚ್ ಸಿ ಮಹದೇವಪ್ಪ ತಿಳಿಸಿದರು.

ಮೈಸೂರು ಅರಮನೆ ಮಂಡಳಿಯಲ್ಲಿ ಹಮ್ಮಿಕೊಂಡಿದ್ದ ದಸರಾ ಉಪ ಸಮಿತಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಈ ಬಾರಿ ಅತ್ಯಂತ ಸರಳವೂ ಹಾಗೂ ಅದ್ದೂರಿಯೂ ಅಲ್ಲದ ಸಾಂಪ್ರದಾಯಿಕ ದಸರಾವನ್ನು ಆಚರಿಸುತ್ತಿದ್ದು, ಸಾಂಪ್ರದಾಯಿಕ ದಸರಾ ಆಚರಣೆಗೆ ಬೇಕಾದ ಎಲ್ಲಾ ವ್ಯವಸ್ಥೆಗಳನ್ನು ಹಾಗೂ ಕಾರ್ಯಕ್ರಮಗಳನ್ನು ಕ್ರಮಬದ್ಧವಾಗಿ ಆಯೋಜಿಸಿ ಎಂದು ತಿಳಿಸಿದರು.

ಈಗಾಗಲೇ 18 ವಿವಿಧ ದಸರಾ ಉಪ ಸಮಿತಿಗಳನ್ನು ರಚಿಸಲಾಗಿದ್ದು, ಈ ಬಾರಿ ಹಿಂದಿನ ಅರಮನೆಯ ವೈಭವವನ್ನು ಮರಳಿ ತರುವ ನಿಟ್ಟಿನಲ್ಲಿ 250 (ಸೆರಮೊನಿ ಡ್ರೆಸ್) ಸಮವಸ್ತ್ರಗಳಿಗಾಗಿ ಟೆಂಡರ್ ಕರೆಯಲಾಗುವುದು. ಜಿಲ್ಲಾಮಟ್ಟದಲ್ಲಿ ರೈತ ದಸರಾವನ್ನು ಆಯೋಜಿಸಿ. ರೈತ ದಸರಾದಲ್ಲಿ ರೈತರಿಗೆ ಉಪಯೋಗವಾಗುವ ಮಣ್ಣಿನ ಫಲವತ್ತತೆ, ಮಿಶ್ರ ಬೆಳೆ, ಪರ್ಯಾಯ ಬೆಳೆ ಹಾಗೂ ಆರ್ಥಿಕ ಅಭಿವೃದ್ಧಿ, ಜಿಡಿಪಿ ಮುಂತಾದ ವಿಚಾರಗಳನ್ನು ಒಳಗೊಂಡ ವಿಚಾರ ಸಂಕಿರಣಗಳನ್ನು ಆಯೋಜಿಸಿ ಎಂದು ತಿಳಿಸಿದರು.

ಈ ವೇಳೆ ಸಾಂಸ್ಕೃತಿಕ, ಕ್ರೀಡಾ, ಲಲಿತಕಲಾ, ಕವಿಗೋಷ್ಠಿ, ಗ್ರಾಮೀಣ ದಸರಾ, ಯೋಗಾದಸರಾ ಮಹಿಳಾ ಹಾಗೂ ಮಕ್ಕಳ ದಸರಾ, ಆಹಾರ ಮೇಳ, ಚಲನ ಚಿತ್ರೋತ್ಸವ, ಯುವ ಸಂಭ್ರಮ ಹಾಗೂ ಯುವ ದಸರಾ ಸೇರಿದಂತೆ ವಿವಿಧ ದಸರಾ ಉಪ ಸಮಿತಿಗಳ ಅಧಿಕಾರಿಗಳೊಟ್ಟಿಗೆ/ಸದಸ್ಯರೊಟ್ಟಿಗೆ ಚರ್ಚಿಸಿದರು.

ನಂತರ ದಸರಾ ಸಾಂಸ್ಕೃತಿಕ ಉಪಸಮಿತಿಯ ವತಿಯಿಂದ ಪೋಸ್ಟರ್ ಬಿಡುಗಡೆ ಹಾಗೂ ದಸರಾ ವೆಬ್ ಸೈಟ್ ಗೆ ಚಾಲನೆ ನೀಡಲಾಯಿತು.

ಸಭೆಯಲ್ಲಿ ಕನ್ನಡ ಹಾಗೂ ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ, ಅಪರ ಮುಖ್ಯ ಕಾರ್ಯದರ್ಶಿಗಳಾದ ಮಂಜುಳಾ, ಜಿಲ್ಲಾಧಿಕಾರಿ ಡಾ. ಕೆ ವಿ ರಾಜೇಂದ್ರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ ಗಾಯತ್ರಿ, ಮೈಸೂರು ಮಹಾನಗರ ಪಾಲಿಕೆಯ ಆಯುಕ್ತ ಆಶಾದ್ ಊರ್ ರೆಹಮಾನ್ ಶರೀಫ್, ಕೆಡಿಪಿ ಸದಸ್ಯರಾದ ಯತೀಂದ್ರ ಸಿದ್ದರಾಮಯ್ಯ ಸೇರಿದಂತೆ ದಸರಾ ಉಪ ಸಮಿತಿಗಳ ನೋಡಲ್ ಅಧಿಕಾರಿಗಳು, ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

andolanait

Recent Posts

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

4 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

4 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

4 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

7 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

7 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ:  ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…

7 hours ago