ಮೈಸೂರು

‘ನನ್ನ ನಗರ ನನ್ನ ಜವಾಬ್ದಾರಿ’ ಸಕ್ರಿಯ ನಾಗರಿಕತ್ವದ ಕೈಪಿಡಿ ಬಿಡುಗಡೆ

ಮೈಸೂರು: ನಗರದ ಗೋಕುಲಂ ೨ನೇ ಹಂತದಲ್ಲಿ ಎಸ್‌ಪಿಆರ್ ರೆಸ್ಟೋರೆಂಟ್‌ನಲ್ಲಿ ಜನಾಗ್ರಹ ಸಂಸ್ಥೆ ಸಿದ್ದಪಡಿಸಿರುವ ‘ನನ್ನ ನಗರ ನನ್ನ ಜವಾಬ್ದಾರಿ’ ಸಕ್ರಿಯ ನಾಗರಿಕತ್ವದ ಕೈಪಿಡಿಯನ್ನು ಮೈಸೂರು ವಾರ್ಡ್ ಸಮಿತಿ ಬಳಗದ ಆಶ್ರಯದಲ್ಲಿ ಬಿಡುಗಡೆಗೊಳಿಸಲಾಯಿತು.

ಜನಾಗ್ರಹ ಸಂಸ್ಥೆಯ ರಾಜ್ಯ ಮುಖ್ಯಸ್ಥ ಮಂಜುನಾಥ್ ಹಂಪಾಪುರ ಮಾತನಾಡಿ, ಸಕ್ರಿಯ ನಾಗರಿಕತ್ವದ ಕೈಪಿಡಿಯು ಸ್ಥಳೀಯ ಸರ್ಕಾರ ಮತ್ತು ನಾಗರಿಕರು ಹೇಗೆ ಸಮನ್ವಯದಿಂದ ಸ್ಥಳೀಯ ಮಟ್ಟದ ಕಸದ ಸಮಸ್ಯೆಯಿಂದ ಹಿಡಿದು ಹವಾಮಾನ ವೈಪರೀತ್ಯದಂತಹ ದೊಡ್ಡ ಸಮಸ್ಯೆಗಳನ್ನು ಸ್ಥಳೀಯ ಮಟ್ಟದಲ್ಲಿ ಯೋಜನೆಗಳನ್ನು ರೂಪಿಸುವುದರ ಮೂಲಕ ಹೇಗೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬಹುದು ಎನ್ನುವುದನ್ನು ತಿಳಿಸುತ್ತದೆ ಎಂದರು.

ಮೈಸೂರು ವಾರ್ಡ್ ಸಮಿತಿ ಬಳಗದ ಹಿರಿಯ ಸದಸ್ಯ ವೆಂಕಟೇಶ್ ಕರಾಡಿ ಮಾತನಾಡಿ, ಮೈಸೂರು ನಗರದ ವಸ್ತುಸ್ಥಿತಿ ನೋಡಿದರೆ ಈ ನನ್ನ ನಗರ ನನ್ನ ಜವಾಬ್ದಾರಿ ಸಕ್ರಿಯ ನಾಗರಿಕತ್ವದ ಕೈಪಿಡಿಯು ನಾಗರಿಕರಿಗೆ ಹೇಗೆ ನನ್ನ ನಗರದ ಅಭಿವೃದ್ಧಿಗೆ ಸರ್ಕಾರದ ಜೊತೆಗೆ ಕಾರ್ಯನಿರ್ವಹಿಸಬೇಕು.

ಹಾಗೆಯೇ ನಾಗರಿಕನಾಗಿ ನನ್ನ ನಗರದ ನನ್ನ ವಾರ್ಡ್‌ನಲ್ಲಿ ನನ್ನ ಕೊಡುಗೆ ಮತ್ತು ಜವಾಬ್ದಾರಿ ಏನು ಎಂಬುದನ್ನು ಸ್ವವಿವರವಾಗಿ ತಿಳಿಸುವಂತಹ ಒಂದು ಉತ್ತಮ ಪ್ರಯತ್ನವಾಗಿದೆ ಎಂದರು.

ಮೈಸೂರು ವಾರ್ಡ್ ಸಮಿತಿ ಬಳಗದ ಸದಸ್ಯರಾದ ಮಾಳವಿಕಾ ಗುಬ್ಬಿವಾಣಿ, ರೇಣು ಅಗರ್‌ವಾಲ್, ಶಶಿಧರ್, ದಯಾನಂದ್ ಸಾಗರ್, ಪ್ರಭಾ ನಂದೀಶ್, ಗೀತಾ, ಲೀಲಾ ವೆಂಕಟೇಶ್, ಜೋಸೆಫ್ ರಾಬಿನ್, ಡಾ.ಜಿ.ಪಾಂಡುರಂಗ ಮೂರ್ತಿ, ರವಿಶಂಕರ್ ನಾರಾಯಣ, ಎಸ್.ವಾಸು, ಶ್ರೀಕಾಂತ್, ಶುಶ್ರುತ, ಕುಶಾಲಿ ಜೈನ್, ಕೆಂಪಣ್ಣ, ಶ್ವೇತಾ ಕೃಷ್ಣಸ್ವಾಮಿ ಇತರರು ಹಾಜರಿದ್ದರು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಪರಿಷತ್‌ ಚುನಾವಣೆಯಲ್ಲಿ ಕ್ರಾಸ್‌ ವೋಟ್‌ ಮಾಡಿದ ಶಾಸಕರು ಗೊತ್ತಿದೆ ; ಎಚ್‌.ಡಿ.ಕುಮಾರಸ್ವಾಮಿ

ಮೈಸೂರು : ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ನಡೆದ ಚುನಾವಣೆಯಲ್ಲಿ ಜಾ.ದಳದಿಂದ ಕ್ರಾಸ್ ವೋಟ್ ಮಾಡಿದ ನಾಲ್ಕು ಜನರು ಯಾರೆಂದು ಗೊತ್ತಿದೆ.…

4 hours ago

ಮಂಡ್ಯ | ಐವರು ಅಂತರ್‌ ಜಿಲ್ಲಾ ಕಳ್ಳರ ಬಂಧನ

ಮಂಡ್ಯ : ಜಿಲ್ಲೆಯ ವಿವಿಧೆಡೆ ನಡೆದ 21 ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿ 553 ಗ್ರಾಂ…

4 hours ago

ಜೂನ್‌ 21ರಂದು ನೀಟ್‌ ಮರುಪರೀಕ್ಷೆ ; ಮೈಸೂರು ಜಿಲ್ಲೆಯಲ್ಲಿ 7886 ಪರೀಕ್ಷಾರ್ಥಿಗಳ ನೋಂದಣಿ

ಮೈಸೂರು : ಜಿಲ್ಲೆಯಲ್ಲಿ ನೀಟ್ ಪರೀಕ್ಷೆಯನ್ನು ಯಾವುದೇ ಲೋಪ ಉಂಟಾಗದಂತೆ ವ್ಯವಸ್ಥಿತವಾಗಿ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಿ ಎಂದು ಅಪರ…

5 hours ago

ನೀಟ್‌ಗಾಗಿ ಟೆಲಿಗ್ರಾಂ ನಿಷೇಧ ; ಕೇಂದ್ರದ ನಿರ್ಧಾರ ಎತ್ತಿ ಹಿಡಿದ ಕೋರ್ಟ್‌

ಹೊಸದಿಲ್ಲಿ : ನೀಟ್‌-ಯುಜಿ 2026 ಮರುಪರೀಕ್ಷೆ ಹಿನ್ನೆಲೆ ಟೆಲಿಗ್ರಾಂನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ದೆಹಲಿ ಹೈಕೋರ್ಟ್ ಎತ್ತಿಹಿಡಿದಿದೆ.…

6 hours ago

ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ ; ಡಾ.ಎಚ್.ಸಿ.ಮಹದೇವಪ್ಪ

ಮೈಸೂರು : ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ. ಅತ್ತು-ಕರೆದು ಅಧಿಕಾರ ಪಡೆದಿಲ್ಲ. ನನ್ನ-ಸಿದ್ದರಾಮಯ್ಯರ ನಡುವೆ ಯಾವ ವೈಮನಸ್ಸು ಇಲ್ಲ.…

6 hours ago

ಮೈಸೂರು | ಠಾಣಾ ಮಟ್ಟದಲ್ಲಿ ರೌಡಿ ಪ್ರತಿಬಂಧಕ ದಳ ಸ್ಥಾಪನೆ

ಮೈಸೂರು : ನಗರದಲ್ಲಿ ರೌಡಿಗಳ ಚಟುವಟಿಕೆಯನ್ನು ಹತ್ತಿಕ್ಕಲು ಮುಂದಾಗಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು, ಸರ್ಕಾರದ ಆದೇಶದನ್ವಯ…

14 hours ago