ಮೈಸೂರು

‘ನನ್ನ ನಗರ ನನ್ನ ಜವಾಬ್ದಾರಿ’ ಸಕ್ರಿಯ ನಾಗರಿಕತ್ವದ ಕೈಪಿಡಿ ಬಿಡುಗಡೆ

ಮೈಸೂರು: ನಗರದ ಗೋಕುಲಂ ೨ನೇ ಹಂತದಲ್ಲಿ ಎಸ್‌ಪಿಆರ್ ರೆಸ್ಟೋರೆಂಟ್‌ನಲ್ಲಿ ಜನಾಗ್ರಹ ಸಂಸ್ಥೆ ಸಿದ್ದಪಡಿಸಿರುವ ‘ನನ್ನ ನಗರ ನನ್ನ ಜವಾಬ್ದಾರಿ’ ಸಕ್ರಿಯ ನಾಗರಿಕತ್ವದ ಕೈಪಿಡಿಯನ್ನು ಮೈಸೂರು ವಾರ್ಡ್ ಸಮಿತಿ ಬಳಗದ ಆಶ್ರಯದಲ್ಲಿ ಬಿಡುಗಡೆಗೊಳಿಸಲಾಯಿತು.

ಜನಾಗ್ರಹ ಸಂಸ್ಥೆಯ ರಾಜ್ಯ ಮುಖ್ಯಸ್ಥ ಮಂಜುನಾಥ್ ಹಂಪಾಪುರ ಮಾತನಾಡಿ, ಸಕ್ರಿಯ ನಾಗರಿಕತ್ವದ ಕೈಪಿಡಿಯು ಸ್ಥಳೀಯ ಸರ್ಕಾರ ಮತ್ತು ನಾಗರಿಕರು ಹೇಗೆ ಸಮನ್ವಯದಿಂದ ಸ್ಥಳೀಯ ಮಟ್ಟದ ಕಸದ ಸಮಸ್ಯೆಯಿಂದ ಹಿಡಿದು ಹವಾಮಾನ ವೈಪರೀತ್ಯದಂತಹ ದೊಡ್ಡ ಸಮಸ್ಯೆಗಳನ್ನು ಸ್ಥಳೀಯ ಮಟ್ಟದಲ್ಲಿ ಯೋಜನೆಗಳನ್ನು ರೂಪಿಸುವುದರ ಮೂಲಕ ಹೇಗೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬಹುದು ಎನ್ನುವುದನ್ನು ತಿಳಿಸುತ್ತದೆ ಎಂದರು.

ಮೈಸೂರು ವಾರ್ಡ್ ಸಮಿತಿ ಬಳಗದ ಹಿರಿಯ ಸದಸ್ಯ ವೆಂಕಟೇಶ್ ಕರಾಡಿ ಮಾತನಾಡಿ, ಮೈಸೂರು ನಗರದ ವಸ್ತುಸ್ಥಿತಿ ನೋಡಿದರೆ ಈ ನನ್ನ ನಗರ ನನ್ನ ಜವಾಬ್ದಾರಿ ಸಕ್ರಿಯ ನಾಗರಿಕತ್ವದ ಕೈಪಿಡಿಯು ನಾಗರಿಕರಿಗೆ ಹೇಗೆ ನನ್ನ ನಗರದ ಅಭಿವೃದ್ಧಿಗೆ ಸರ್ಕಾರದ ಜೊತೆಗೆ ಕಾರ್ಯನಿರ್ವಹಿಸಬೇಕು.

ಹಾಗೆಯೇ ನಾಗರಿಕನಾಗಿ ನನ್ನ ನಗರದ ನನ್ನ ವಾರ್ಡ್‌ನಲ್ಲಿ ನನ್ನ ಕೊಡುಗೆ ಮತ್ತು ಜವಾಬ್ದಾರಿ ಏನು ಎಂಬುದನ್ನು ಸ್ವವಿವರವಾಗಿ ತಿಳಿಸುವಂತಹ ಒಂದು ಉತ್ತಮ ಪ್ರಯತ್ನವಾಗಿದೆ ಎಂದರು.

ಮೈಸೂರು ವಾರ್ಡ್ ಸಮಿತಿ ಬಳಗದ ಸದಸ್ಯರಾದ ಮಾಳವಿಕಾ ಗುಬ್ಬಿವಾಣಿ, ರೇಣು ಅಗರ್‌ವಾಲ್, ಶಶಿಧರ್, ದಯಾನಂದ್ ಸಾಗರ್, ಪ್ರಭಾ ನಂದೀಶ್, ಗೀತಾ, ಲೀಲಾ ವೆಂಕಟೇಶ್, ಜೋಸೆಫ್ ರಾಬಿನ್, ಡಾ.ಜಿ.ಪಾಂಡುರಂಗ ಮೂರ್ತಿ, ರವಿಶಂಕರ್ ನಾರಾಯಣ, ಎಸ್.ವಾಸು, ಶ್ರೀಕಾಂತ್, ಶುಶ್ರುತ, ಕುಶಾಲಿ ಜೈನ್, ಕೆಂಪಣ್ಣ, ಶ್ವೇತಾ ಕೃಷ್ಣಸ್ವಾಮಿ ಇತರರು ಹಾಜರಿದ್ದರು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

3 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

7 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

9 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

10 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

11 hours ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

14 hours ago