ಪಿರಿಯಾಪಟ್ಟಣ: ನರೇಗಾ ಯೋಜನೆಯ ಕೂಲಿ ದರವನ್ನು ಏಪ್ರಿಲ್ 1 ರಿಂದ 370 ರೂ. ಗೆ ಏರಿಕೆ ಮಾಡಲಾಗಿದ್ದು, ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ನರೇಗಾ ಯೋಜನೆಯಡಿ ದುಡಿಯುವ ಮೂಲಕ ಆರ್ಥಿಕವಾಗಿ ಸಬಲರಾಗಬೇಕು ಎಂದು ಸಹಾಯಕ ನಿರ್ದೇಶಕರಾದ ವಸಂತಲಕ್ಷ್ಮೀ ಸಲಹೆ ನೀಡಿದರು.
ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಇಂದು ಆಯೋಜಿಸಿದ್ದ “ಸ್ತ್ರೀ ಚೇತನ ವಿಶೇಷ ಅಭಿಯಾನ” ಕಾರ್ಯಕ್ರಮಕ್ಕೆ ಜಾಬ್ ಕಾರ್ಡ್ ವಿತರಣೆ ಮಾಡುವ ಮೂಲಕ ಚಾಲನೆ ನೀಡಿ ಮಾತನಾಡಿದರು.
ಮಹಾತ್ಮ ಗಾಂಧಿ ನರೇಗಾದಲ್ಲಿ ಶೇ.50ರಷ್ಟಿರುವ ಮಹಿಳಾ ಕೂಲಿ ಕಾರ್ಮಿಕರ ಸಂಖ್ಯೆಯನ್ನು ಶೇ.60ಕ್ಕೆ ಹೆಚ್ಚಿಸುವುದು ಅಭಿಯಾನದ ಉದ್ದೇಶವಾಗಿದೆ. ಮಾತ್ರವಲ್ಲದೆ, ಮೂರು ತಿಂಗಳು ಮಹಿಳಾ ಕೂಲಿ ಕಾರರಿಗೆ ನಿರಂತರ ಕೆಲಸ ಆದ್ಯತೆ ನೀಡುವುದಾಗಿದ್ದು, ಮಹಿಳಾ ಸಬಲೀಕರಣವನ್ನು ನರೇಗಾ ಯೋಜನೆ ಮೂಲಕ ಕೈಗೊಳ್ಳುವುದು ಸ್ತ್ರೀ ಚೇತನ ಅಭಿಯಾನದ ಉದ್ದೇಶವಾಗಿದೆ ಎಂದರು.
ಮಾನವ ಸರಪಳಿ ನಿರ್ಮಾಣ: ತಾಲ್ಲೂಕು ಪಂಚಾಯಿತಿ ಆವರಣದಲ್ಲಿ ಮಹಿಳೆಯರಿಂದ ಮಾನವ ಸರಪಳಿಯನ್ನು ನಿರ್ಮಿಸಿ ಸ್ತ್ರೀ ಚೇತನ ಅಭಿಯಾನ ಬ್ಯಾನರ್ ನೊಂದಿಗೆ ಏಕೀಕೃತ ಸಹಾಯವಾಣಿ ಸಂಖ್ಯೆ 8277506000 ಹಾಗೂ ಕೂಲಿ ದರ 370ರೂ. ಸಂಬಂಧಿಸಿದಂತೆ ಮಾಹಿತಿ ಪ್ರದರ್ಶನ ಮಾಡಲಾಯಿತು.
ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಶೀಘ್ರದಲ್ಲೇ ಒಳ್ಳೆಯ ಸ್ಥಾನ ಸಿಗಲಿದೆ ಎಂದು ಕುಣಿಗಲ್ ಶಾಸಕ ಡಾ.ರಂಗನಾಥ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ…
ಹುಬ್ಬಳ್ಳಿ: ಬೇಸಿಗೆಯ ಹಿನ್ನೆಲೆಯಲ್ಲಿ ರಣಬಿಸಿಲ ಝಳ ಹೆಚ್ಚಾಗಿದ್ದು, ಜನರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ. ಈ ಬಗ್ಗೆ ಆರೋಗ್ಯ ಸಚಿವ…
ಮೈಸೂರು: ಮೈಸೂರಿನ ಹಳೆ ಕೆಸರೆ ವರುಣ ನಾಲೆಯ ಅಂಡರ್ ಬ್ರಿಡ್ಜ್ ಬಳಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ಶವದ ಮೇಲೆ…
ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನ್ಕಕೆ ಸೂರ್ಯನ ಪ್ರತಾಪ ಹೆಚ್ಚಾಗುತ್ತಿದ್ದು, ಇಡೀ ಕರ್ನಾಟಕವೇ ಬಿಸಿಲಿನ ಕೆಂಡದಂತಾಗಿದೆ.. ಬಿಸಿಲಿನ ಝಳ ಹೆಚ್ಚಾಗಿರುವ ಕಾರಣ…
ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿಯ ಸೂತ್ರವನ್ನು ಹೆಣೆಯುವಲ್ಲಿ ಕರ್ನಾಟಕ ಸರ್ಕಾರ ಕೊನೆಗೂ ಯಶಸ್ವಿಯಾಗಿದೆ. ಪರಿಶಿಷ್ಟ ಜಾತಿಯ ಪಟ್ಟಿಯಲ್ಲಿರುವ ಬಲಗೈ, ಎಡಗೈಗೆ ತಲಾ…
ಪ್ರೊ.ಶಬ್ಬೀರ್ ಮುಸ್ತಾಫಾ ಜಿ.ಪಿ.ಬಸವರಾಜು ಸಮುದಾಯದ ನಂಬಿಕೆಯನ್ನು ಉಳಿಸಿಕೊಳ್ಳಬೇಕಾದದ್ದು ಕಾಂಗ್ರೆಸ್ ಪಕ್ಷದ ಹೊಣೆ ಭಾರತದಂಥ ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಚುನಾವಣೆ ಎನ್ನುವುದು ನಿರಂತರ…