ಪಿರಿಯಾಪಟ್ಟಣ: ನರೇಗಾ ಯೋಜನೆಯ ಕೂಲಿ ದರವನ್ನು ಏಪ್ರಿಲ್ 1 ರಿಂದ 370 ರೂ. ಗೆ ಏರಿಕೆ ಮಾಡಲಾಗಿದ್ದು, ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ನರೇಗಾ ಯೋಜನೆಯಡಿ ದುಡಿಯುವ ಮೂಲಕ ಆರ್ಥಿಕವಾಗಿ ಸಬಲರಾಗಬೇಕು ಎಂದು ಸಹಾಯಕ ನಿರ್ದೇಶಕರಾದ ವಸಂತಲಕ್ಷ್ಮೀ ಸಲಹೆ ನೀಡಿದರು.
ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಇಂದು ಆಯೋಜಿಸಿದ್ದ “ಸ್ತ್ರೀ ಚೇತನ ವಿಶೇಷ ಅಭಿಯಾನ” ಕಾರ್ಯಕ್ರಮಕ್ಕೆ ಜಾಬ್ ಕಾರ್ಡ್ ವಿತರಣೆ ಮಾಡುವ ಮೂಲಕ ಚಾಲನೆ ನೀಡಿ ಮಾತನಾಡಿದರು.
ಮಹಾತ್ಮ ಗಾಂಧಿ ನರೇಗಾದಲ್ಲಿ ಶೇ.50ರಷ್ಟಿರುವ ಮಹಿಳಾ ಕೂಲಿ ಕಾರ್ಮಿಕರ ಸಂಖ್ಯೆಯನ್ನು ಶೇ.60ಕ್ಕೆ ಹೆಚ್ಚಿಸುವುದು ಅಭಿಯಾನದ ಉದ್ದೇಶವಾಗಿದೆ. ಮಾತ್ರವಲ್ಲದೆ, ಮೂರು ತಿಂಗಳು ಮಹಿಳಾ ಕೂಲಿ ಕಾರರಿಗೆ ನಿರಂತರ ಕೆಲಸ ಆದ್ಯತೆ ನೀಡುವುದಾಗಿದ್ದು, ಮಹಿಳಾ ಸಬಲೀಕರಣವನ್ನು ನರೇಗಾ ಯೋಜನೆ ಮೂಲಕ ಕೈಗೊಳ್ಳುವುದು ಸ್ತ್ರೀ ಚೇತನ ಅಭಿಯಾನದ ಉದ್ದೇಶವಾಗಿದೆ ಎಂದರು.
ಮಾನವ ಸರಪಳಿ ನಿರ್ಮಾಣ: ತಾಲ್ಲೂಕು ಪಂಚಾಯಿತಿ ಆವರಣದಲ್ಲಿ ಮಹಿಳೆಯರಿಂದ ಮಾನವ ಸರಪಳಿಯನ್ನು ನಿರ್ಮಿಸಿ ಸ್ತ್ರೀ ಚೇತನ ಅಭಿಯಾನ ಬ್ಯಾನರ್ ನೊಂದಿಗೆ ಏಕೀಕೃತ ಸಹಾಯವಾಣಿ ಸಂಖ್ಯೆ 8277506000 ಹಾಗೂ ಕೂಲಿ ದರ 370ರೂ. ಸಂಬಂಧಿಸಿದಂತೆ ಮಾಹಿತಿ ಪ್ರದರ್ಶನ ಮಾಡಲಾಯಿತು.
ರಾಯಚೂರು: ರಾಯಚೂರು ಪ್ರವಾಸದಲ್ಲಿದ್ದ ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಜಗದ್ಗುರು ಡಾ.ವಾಲ್ಮೀಕಿ ಪ್ರಸನ್ನಾನಂದ ಪುರಿ ಸ್ವಾಮೀಜಿಗೆ ಲಘು ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.…
ಚಾಮರಾಜನಗರ: ಕಳೆದ ಮೂರು ತಿಂಗಳಿನಿಂದಲೂ ಬಂದ್ ಆಗಿದ್ದ ನಾಗರಹೊಳೆ ಹಾಗೂ ಬಂಡೀಪುರ ಸಫಾರಿ ಆರಂಭಕ್ಕೆ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ.…
ಹಾಸನ: ಫ್ಯಾಕ್ಟರಿ ಕೆಲಸಕ್ಕೆ ಹೋಗಿದ್ದ ಯುವಕ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಹೊರವಲಯದ ಹನುಮಂತಪುರ ಬಳಿ ನಡೆದಿದೆ. 27 ವರ್ಷ…
ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ತಾಪಮಾನ ಹೆಚ್ಚಾಗಿದ್ದು, ಬಿಸಿಲ ಝಳ ಆರಂಭವಾಗಿದೆ. ಹಲವು ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ಏರಿಕೆಯಾಗುವ ಸಾಧ್ಯತೆಯಿದೆ. ಕರಾವಳಿ…
ಬೆಂಗಳೂರು: ಕರ್ನಾಟಕದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ರಾಜಕೀಯ ಜೀವನಕ್ಕೆ 50 ವರ್ಷಗಳು ತುಂಬಿದೆ. ಇಂದು ನಡೆಯುವ ಬಿಜೆಪಿ ರಾಜ್ಯ ಕಾರ್ಯಕಾರಿಣಿ…
ರಾಜ್ಯದಲ್ಲಿ ಪುರಸಭೆ, ನಗರಸಭೆ, ಮಹಾನಗರ ಪಾಲಿಕೆಗಳಲ್ಲಿ ಐದು ವರ್ಷಗಳಿಗೊಮ್ಮೆ ಆಸ್ತಿ ತೆರಿಗೆಯನ್ನು ಪರಿಷ್ಕರಣೆ ಮಾಡಬೇಕು ಎಂಬ ನಿಯಮವಿದ್ದರೂ ವರ್ಷಕ್ಕೊಮ್ಮೆ ಆಸ್ತಿ…