ಪಿರಿಯಾಪಟ್ಟಣ: ನರೇಗಾ ಯೋಜನೆಯ ಕೂಲಿ ದರವನ್ನು ಏಪ್ರಿಲ್ 1 ರಿಂದ 370 ರೂ. ಗೆ ಏರಿಕೆ ಮಾಡಲಾಗಿದ್ದು, ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ನರೇಗಾ ಯೋಜನೆಯಡಿ ದುಡಿಯುವ ಮೂಲಕ ಆರ್ಥಿಕವಾಗಿ ಸಬಲರಾಗಬೇಕು ಎಂದು ಸಹಾಯಕ ನಿರ್ದೇಶಕರಾದ ವಸಂತಲಕ್ಷ್ಮೀ ಸಲಹೆ ನೀಡಿದರು.
ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಇಂದು ಆಯೋಜಿಸಿದ್ದ “ಸ್ತ್ರೀ ಚೇತನ ವಿಶೇಷ ಅಭಿಯಾನ” ಕಾರ್ಯಕ್ರಮಕ್ಕೆ ಜಾಬ್ ಕಾರ್ಡ್ ವಿತರಣೆ ಮಾಡುವ ಮೂಲಕ ಚಾಲನೆ ನೀಡಿ ಮಾತನಾಡಿದರು.
ಮಹಾತ್ಮ ಗಾಂಧಿ ನರೇಗಾದಲ್ಲಿ ಶೇ.50ರಷ್ಟಿರುವ ಮಹಿಳಾ ಕೂಲಿ ಕಾರ್ಮಿಕರ ಸಂಖ್ಯೆಯನ್ನು ಶೇ.60ಕ್ಕೆ ಹೆಚ್ಚಿಸುವುದು ಅಭಿಯಾನದ ಉದ್ದೇಶವಾಗಿದೆ. ಮಾತ್ರವಲ್ಲದೆ, ಮೂರು ತಿಂಗಳು ಮಹಿಳಾ ಕೂಲಿ ಕಾರರಿಗೆ ನಿರಂತರ ಕೆಲಸ ಆದ್ಯತೆ ನೀಡುವುದಾಗಿದ್ದು, ಮಹಿಳಾ ಸಬಲೀಕರಣವನ್ನು ನರೇಗಾ ಯೋಜನೆ ಮೂಲಕ ಕೈಗೊಳ್ಳುವುದು ಸ್ತ್ರೀ ಚೇತನ ಅಭಿಯಾನದ ಉದ್ದೇಶವಾಗಿದೆ ಎಂದರು.
ಮಾನವ ಸರಪಳಿ ನಿರ್ಮಾಣ: ತಾಲ್ಲೂಕು ಪಂಚಾಯಿತಿ ಆವರಣದಲ್ಲಿ ಮಹಿಳೆಯರಿಂದ ಮಾನವ ಸರಪಳಿಯನ್ನು ನಿರ್ಮಿಸಿ ಸ್ತ್ರೀ ಚೇತನ ಅಭಿಯಾನ ಬ್ಯಾನರ್ ನೊಂದಿಗೆ ಏಕೀಕೃತ ಸಹಾಯವಾಣಿ ಸಂಖ್ಯೆ 8277506000 ಹಾಗೂ ಕೂಲಿ ದರ 370ರೂ. ಸಂಬಂಧಿಸಿದಂತೆ ಮಾಹಿತಿ ಪ್ರದರ್ಶನ ಮಾಡಲಾಯಿತು.
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…
ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…