ಮೈಸೂರು

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಬಿವೈ ವಿಜಯೇಂದ್ರ

ಮೈಸೂರು: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರದಿಂದ ಯಾವುದೇ ಅಭಿವೃದ್ದಿ ಕೆಲಸಗಳು ನಡೆಯುತ್ತಿಲ್ಲ. ಇವರ ಆಡಳಿತದ ಅವಧಿಯಲ್ಲಿ ಅಹಿತಕರ ಘಟನೆಗಳು ನಡೆಯುತ್ತಿದ್ದು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.

ನಗರದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಅಹಿತಕರ ಘಟನೆಗಳು ನಡೆಯುತ್ತಿವೆ. ಗುಲ್ಬರ್ಗಾದಲ್ಲಿ ಬಾಲಕಿ ಮೇಲೆ ಅತ್ಯಾಚಾರ ಆಗಿದೆ. ಚಾಮರಾಜ ಪೇಟೆಯಲ್ಲಿ ಹಸುವಿನ ಕೆಚ್ಚಲು ಕೊಯ್ದ ಪ್ರಕರಣ, ನಂಜನಗೂಡಿನಲ್ಲಿ ಹಸುವಿನ ಬಾಲ ಕತ್ತರಿಸಿದ ಘಟನೆ, ಬೀದರ್‌ನಲ್ಲಿ ನಿನ್ನೆ ಹಣ ತುಂಬಲು ಬಂದಿದ್ದ ಎಸ್‌ಬಿಐ ಬ್ಯಾಂಕ್ ಸಿಬ್ಬಂದಿಗಳನ್ನ ಹತ್ಯೆ ಮಾಡಿದ್ದ ಘಟನೆ ಸೇರಿದಂತೆ ಇನ್ನು ಅನೇಕ ಘಟನೆಗಳು ನಡೆದಿವೆ. ಇಷ್ಟಾದರು ರಾಜ್ಯ ಕಾಂಗ್ರೆಸ್‌ ಸರ್ಕಾರ ದೇಶದ್ರೋಹಿಗಳನ್ನು ಮಟ್ಟ ಹಾಕುವ ಕೆಲಸ ಮಾಡುತ್ತಿಲ್ಲ. ತುಷ್ಠೀಕರಣ ನೀತಿ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿದರು.

ಜಾತಿಗಣತಿ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಸಿಎಂ ಸಿದ್ದರಾಮಯ್ಯ ಅವರು ಜಾತಿಗಣತಿ ವರದಿಯನ್ನು ರಾಜಕೀಯವಾಗಿ ಬಳಸಿಕೊಳ್ಳುತ್ತಿದ್ದಾರೆ. ಜಾತಿಗಣತಿ ವರದಿ ಸೋರಿಕೆ ಹಾಗಿದ್ದು, ಅವೈಜ್ಞಾನಿಕವಾಗಿದೆ. ಈ ಹಿನ್ನಲೆಯಲ್ಲಿ ಲಿಂಗಾಯತ ಹಾಗೂ ಒಕ್ಕಲಿಗ ಸಮುದಾಯ ವಿರೋಧ ಮಾಡುತ್ತಿವೆ. ಬೇರೆ ಜಾತಿಯವರಿಗೆ ನ್ಯಾಯ ಒದಗಿಸಿ ಆದರೆ ರಾಜಕೀಯ ಮಾಡಬೇಡಿ ಎಂದು ಹೇಳಿದರು.

ಯತ್ನಾಳ್‌ ಅವರ ಸವಾಲಿನ ಕುರಿತು ಮಾತನಾಡಿದ ಅವರು, ಯಡಿಯೂರಪ್ಪ ಅವರ ವಿರುದ್ದ ಮಾತನಾಡುವಾಗ ಎಚ್ಚರಿಕೆ ವಹಿಸಿ ಎಂದು ಅನೇಕ ನಾಯಕರಿಗೆ ಹೇಳಿದ್ದೆ. ಅವರ ವಿರುದ್ಧ ಮಾತನಾಡಿದರೆ ಕಾರ್ಯಕರ್ತರಿಗೆ ನೋವಾಗುತ್ತದೆ. ತಳಮಟ್ಟದಿಂದ ಯಡಿಯೂರಪ್ಪ ಬಿಜೆಪಿ ಪಕ್ಷ ಕಟ್ಟಿದ್ದಾರೆ ಎಂದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಮೇಕೆ.. ಡಿಕೆ !

ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…

18 hours ago

ಓದುಗರ ಪತ್ರ: ಮಂತ್ರಾಲಯ ಮಠದ ಕಾರ್ಯ ಜನಮೆಚ್ಚುವಂತಹದ್ದು

ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…

18 hours ago

ಓದುಗರ ಪತ್ರ: ಕಾವೇರಿ: ಶಾಶ್ವತ ಪರಿಹಾರ ಅಗತ್ಯ

ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…

18 hours ago

ಕಾಯಕಲ್ಪಕ್ಕೆ ಕಾದಿವೆ ನಿರ್ಲಕ್ಷಿತ ಸರ್ಕಾರಿ ಆಸ್ತಿಗಳು

ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…

18 hours ago

ಮೀಸಲಾತಿ ಸೌಲಭ್ಯಕ್ಕೆ ವಿರೋಧವೇಕೆ?

ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…

18 hours ago

ಬಿರುಕು ಬಿಡುತ್ತಿರುವ ಕೆರೆ ಕೋಡಿಯ ಗೋಡೆ

ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…

21 hours ago