ಮೈಸೂರು

ಮೈಸೂರಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ : ಸಂಸದ ಯದುವೀರ್‌ ಆತಂಕ

ಮೈಸೂರು : ಸಾಂಸ್ಕೃತಿಕ ನಗರಿ, ಸ್ವಚ್ಚತೆ ನಗರಿ ಮೈಸೂರಿನಲ್ಲಿ ಇತ್ತೀಚಿಗೆ ತಲೆತಗ್ಗಿಸುವ ಕೆಲಸಗಳು ನಡೆಯುತ್ತಿವೆ. ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಆಡಳಿತ ಯಂತ್ರ ಕುಸಿಯುತ್ತಿದೆ ಎಂದು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಆತಂಕ ವ್ಯಕ್ತಪಡಿಸಿದರು.

ಶುಕ್ರವಾರ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಸರಾ ಮುಗಿದ ಬಳಿಕವೂ ಹಬ್ಬದ ವಾತಾವರಣ ಇದೆ. ಆದರೆ ಈಗ ಕಳೆದ ಎರಡು ದಿನಗಳಿಂದ ಹೀನಕೃತ್ಯಗಳು ನಡೆದಿವೆ. ಮೈಸೂರು ಇತಿಹಾಸ ಸ್ವಚ್ಛತೆ ಒಳ್ಳೆಯ ಆಡಳಿತಕ್ಕೆ ಹೆಸರುವಾಸಿಯಾಗಿದೆ. ಆದರೆ ಇತ್ತೀಚೆಗೆ ಕಾನೂನು ಆಡಳಿತ ಕುಸಿಯುತ್ತಿದೆ. ಈ ಹಿಂದೆ ಉದಯಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ಆಯಿತು. ನಂತರ 340 ಕೋಟಿ ಡ್ರಗ್ಸ್ ಪತ್ತೆಯಾಯಿತು. ಮಹಾರಾಷ್ಟ್ರ ಪೊಲೀಸರು ಇದನ್ನು ಕಂಡು ಹಿಡಿದರು. ಇದಾದ ಬಳಿಕ ಅರಮನೆ ಮುಂಭಾಗ ಮೊನ್ನೆ ಒಂದು ಕೊಲೆ ಆಗಿದೆ. ನಿನ್ನೆ ಚಿಕ್ಕ ಮಗು ಮೇಲೆ ಅತ್ಯಾಚಾರ ಕೊಲೆಯಾಗಿದೆ. ಬಲೂನ್ ಮಾರಾಟ ಮಾಡುವ ಮಗು ಮೇಲೆ ಹೀನ ಕೃತ್ಯ ಆಗಿದೆ ಎಂದು ಬೇಸರಿಸಿದರು.

ಇದನ್ನು ಓದಿ : ಯತೀಂದ್ರ ವಿರುದ್ಧ ಗಂಭೀರ ಆರೋಪ ಮಾಡಿದ ಪ್ರತಾಪ್‌ ಸಿಂಹ

ಮೈಸೂರಿನಲ್ಲಿ ಇಂತಹ ಘಟನೆಗಳು ಈ ಹಿಂದೆ ಆಗಿಲ್ಲ. ನಗರದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆ. ನಗರದ ಹೃದಯ ಭಾಗದಲ್ಲೇ ಇಂತಹ ಘಟನೆಗಳು ನಡೆದರೆ ಹೇಗೆ. ಕಿಡಿಗೇಡಿಗಳಿಗೆ ಯಾವುದೇ ರೀತಿಯ ಭಯ ಇಲ್ಲ. ಸಿಎಂ ಸಿದ್ದರಾಮಯ್ಯ ಚುನಾವಣೆಯಲ್ಲಿ ಇದು ನನ್ನ ತವರು ಅಂತಾರೆ. ಇಂತಹ ಘಟನೆಗಳನ್ನು ಆಗದಂತೆ ತಡೆಯಲು ಆಗುತ್ತಿಲ್ಲ ಎಂದು ಸರ್ಕಾರದ ವಿರುದ್ಧ ಕಿಡಿ ಕಾರಿದರು.

ದಸರಾ ಪಾಸ್ ವಿಚಾರದಲ್ಲಿ ಗೊಂದಲ ಆಯಿತು. ಸಿಟ್ಟಿಂಗ್ ವ್ಯವಸ್ಥೆ ಕಡಿಮೆ ಮಾಡಿ ಪಾಸ್ ಹೆಚ್ಚು ಕೊಟ್ಟರು. ಪಾಸ್ ಇರೋರಿಗೂ ಅರಮನೆ ಒಳಗಡೆ ಬಿಡಲಿಲ್ಲ. ಇದು ಕೇವಲ ಕಾಂಗ್ರೆಸ್ ನಾಯಕರ ದಸರಾ ಆಯಿತು. ಜನ ಸಾಮಾನ್ಯರ ದಸರಾ ಆಗಲಿಲ್ಲ. ನಾಗರಿಕರಿಗೆ ಅನುಕೂಲ ಮಾಡಲಿಲ್ಲ. ಕೇವಲ ಉಳ್ಳವರ ದಸರಾ ದರ್ಬಾರ್ ಆಯಿತು ಎಂದು ಸರ್ಕಾರ ಹಾಗೂ ಜಿಲ್ಲಾಡಳಿತದ ವಿರುದ್ಧ ಯದುವೀರ್ ವಾಗ್ದಾಳಿ ನಡೆಸಿದರು.

ಆಂದೋಲನ ಡೆಸ್ಕ್

Recent Posts

ಜನವರಿ.24ರಿಂದ ಮಂಜಿನ ನಗರಿಯಲ್ಲಿ ಫಲಪುಷ್ಪ ಪ್ರದರ್ಶನ

ನವೀನ್ ಡಿಸೋಜ ಗಮನ ಸೆಳೆಯಲಿದೆ ೧೮ ಅಡಿ ಎತ್ತರದ ಶ್ರೀ ಭಗಂಡೇಶ್ವರ ದೇವಸ್ಥಾನ ಕಲಾಕೃತಿ; ಹಲವು ವಿಭಿನ್ನತೆಯೊಂದಿಗೆ ಆಯೋಜನೆ ಮಡಿಕೇರಿ:…

2 mins ago

ನಗರ ಪಾಲಿಕೆಯಲ್ಲಿ ವೈದ್ಯ ಪದವಿ ಆರೋಗ್ಯಾಧಿಕಾರಿಗೆ ಕೊಕ್: ಇಂಜಿನಿಯರ್‌ಗೆ ಹೊಸ ಹುದ್ದೆ!

ಎಚ್.ಎಸ್.ದಿನೇಶ್‌ಕುಮಾರ್ ಸರ್ಕಾರದ ನಿರ್ಧಾರಕ್ಕೆ ಮಾಜಿ ಮಹಾಪೌರರು, ಮಾಜಿ ಸದಸ್ಯರ ವಿರೋಧ ಮೈಸೂರು: ಬಿಬಿಎಂಪಿ ಹೊರತುಪಡಿಸಿ ಮೈಸೂರು ನಗರಪಾಲಿಕೆ ಸೇರಿದಂತೆ ರಾಜ್ಯದ…

10 mins ago

ದಿಲ್ಲಿ ಗಣರಾಜ್ಯೋತ್ಸವ ಸ್ತಬ್ಧಚಿತ್ರ 2026 : ಕೃಷಿ ಮತ್ತು ತಂತ್ರಜ್ಞಾನದ ಸಮಾಗಮ

ಬೆಂಗಳೂರು : ಭಾರತವನ್ನು ಆತ್ಮನಿರ್ಭರ ರಾಷ್ಟ್ರವನ್ನಾಗಿಸುವ ದಿಶೆಯಲ್ಲಿ ಕರ್ನಾಟಕದಂತಹ ಸ್ವಾವಲಂಬಿ ರಾಜ್ಯಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಕೃಷಿಯಿಂದ ಕೈಗಾರಿಕೆವರೆಗೆ ಹಾಗೂ…

9 hours ago

ಮ.ಬೆಟ್ಟ | ಪಾದಯಾತ್ರಿ ಮೇಲೆ ದಾಳಿ ಮಾಡಿದ್ದ ಚಿರತೆ ಸೆರೆ ; ನಿಟ್ಟುಸಿರು ಬಿಟ್ಟ ಯಾತ್ರಾರ್ಥಿಗಳು

ಹನೂರು : ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿಧಾಮ ವ್ಯಾಪ್ತಿಯ ತಾಳುಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ…

10 hours ago

ಸರ್ಕಾರಿ ಹುದ್ದೆ ಆಕಾಂಕ್ಷಿಗಳಿಗೆ ಗುಡ್‌ನ್ಯೂಸ್‌ : 5 ವರ್ಷ ವಯೋಮಿತಿ ಸಡಿಲಿಕೆಗೆ ಸಚಿವ ಸಂಪುಟ ಒಪ್ಪಿಗೆ!

ಬೆಂಗಳೂರು : ರಾಜ್ಯದ ಎಲ್ಲಾ ರೀತಿಯ ಸಿವಿಲ್ ಹುದ್ದೆಗಳಿಗೆ 2027ರ ಡಿಸೆಂಬರ್ 31ರವರೆಗೆ ಹೊರಡಿಸುವ ನೇಮಕಾತಿ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ಎಲ್ಲಾ…

11 hours ago