ಮೈಸೂರು

ವನ್ಯಜೀವಿ ಛಾಯಾಗ್ರಹಕರಾಗುವ ಮೊದಲು ಕಾಡಿನ ಭಾಷೆ ಅರಿಯಿರಿ : ಕೃಪಾಕರ್‌ ಸೇನಾನಿ

ಮೈಸೂರು : ವನ್ಯಜೀವಿ ಛಾಯಾಗ್ರಹಣ ಹಾಗೂ ಸಾಕ್ಷ್ಯಚಿತ್ರ ತಯಾರಕರಾಗುವ ಮೊದಲು ಕಾಡಿನ ಭಾಷೆ ಅರಿತುಕೊಂಡಿರಬೇಕು ಎಂದು ವನ್ಯಜೀವಿ ಛಾಯಾಗ್ರಾಹಕರಾದ ಕೃಪಾಕರ್ ಸೇನಾನಿ ತಿಳಿಸಿದರು.

ಮಾನಸಗಂಗೋತ್ರಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ಆಯೋಜಿಸಿರುವ ‘ಪತ್ರಿಕೋದ್ಯಮದ ಉದಯೋನ್ಮುಖ ಪ್ರವೃತ್ತಿಗಳು’ ಕುರಿತು ನಡೆದ ೩ನೇ ದಿನದ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದ ಕೃಪಾಕರ್ ಸೇನಾನಿ ಅವರು ಮಾತನಾಡಿ, ಪತ್ರಿಕೋದ್ಯಮದ ಅತ್ಯಂತ ಪ್ರಮುಖ ಅಂಶವೆಂದರೆ ಪ್ರಶ್ನೆಗಳನ್ನು ಕೇಳುವುದು. ಅದರಲ್ಲೂ ಸರಿಯಾದ ಪ್ರಶ್ನೆಗಳನ್ನು ಕೇಳುವ ಮೂಲಕವೇ ನೈಜ ಮಾಹಿತಿಯನ್ನು ಹೊರತರಲು ಸಾಧ್ಯ ವನ್ಯಜೀವಿ ಛಾಯಾಗ್ರಹಣ ಹಾಗೂ ಸಾಕ್ಷ್ಯಚಿತ್ರ ತಯಾರಿಸಲು ಹೊರಟವರಿಗೆ ಕಾಡಿನ ಭಾಷೆ ಅರಿತುಕೊಳ್ಳುವುದೇ ಮೊದಲ ಅರ್ಹತೆ ಎಂದರು.

ವನ್ಯಜೀವಿ ಚಿತ್ರೀಕರಣದಲ್ಲಿ ಲೈಟ್, ಲೆನ್ಸ್ ಸೇರಿದಂತೆ ಅಗತ್ಯಉಪಕರಣಗಳ ಬಳಕೆ ಅಗತ್ಯ, ಅವುಗಳನ್ನು ಸಂದರ್ಭಕ್ಕೆ ತಕ್ಕಂತೆ ಬಳಸುವುದು ಹಾಗೂ ಅಭಿವೃದ್ಧಿ ಪಡಿಸಲಾದ ಉಪಕರಣಗಳ ಬಗ್ಗೆ ಮಾಹಿತಿ ಹೊಂದಿರಬೇಕು. ನಾವೂ ಕಾಲಕ್ಕೆ ತಕ್ಕಂತೆ ಹೊಂದಿಕೊಂಡು ಉನ್ನತ ತಂತ್ರಾಂಶಗಳನ್ನು ಅಳವಡಿಸಿಕೊಂಡು ಉತ್ತಮ ಸಾಕ್ಷ್ಯಾಚಿತ್ರಗಳನ್ನು ನಿರ್ಮಿಸಬೇಕು ಎಂದು ಸಲಹೆ ನೀಡಿದರು.

ಒಬ್ಬ ವನ್ಯಜೀವಿ ಚಿತ್ರನಿರ್ಮಾಪಕ ಎಲ್ಲಕ್ಕಿಂತ ಮೊದಲು ಕಾಡಿನ ಮೌನವನ್ನು ಆಲಿಸಬೇಕು. ನಂತರ ಆ ಮೌನಭಾಷೆಯನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸಬೇಕು. ಇದು ಚಿತ್ರೀಕರಣಕ್ಕೆ ಪೂರಕವಾದ ವಾತಾವರಣವನ್ನು ಕಲ್ಪಿಸಿಕೊಡುತ್ತದೆ ಎಂದು ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಬಳಿಕ ‘ವೈಲ್ಡ್‌ಲೈಫ್ ಡಾಕ್ಯುಮೆಂಟರಿ ಮೇಕಿಂಗ್’ ವಿಷಯ ಕುರಿತು ಕಾರ್ಯಾಗಾರ ನಡೆಸಿಕೊಟ್ಟರು.

ಕಾರ್ಯಾಗಾರದಲ್ಲಿ ಮಾಧ್ಯಮ ವರದಿಗಾರ ರವಿ ಪಾಂಡವಪುರ, ದೂರದರ್ಶನದಲ್ಲಿ ಸ್ಕ್ರಿಪ್ಟ್ ಬರವಣಿಗೆ, ತಂತ್ರಾಂಶ ಬಳಕೆ, ವಿಶೇಷ ವರದಿ, ಗ್ರೌಂಡ್ ರಿಪೋರ್ಟ್, ವಿಷಯಗಳ ಗೌಪ್ಯತೆ, ಎದುರಾಗಬಹುದಾದ ಸವಾಲುಗಳ ನಿವಾರಣೆ ಇನ್ನಿತರ ವಿಚಾರಗಳ ಬಗ್ಗೆ ವಿವರಿಸಿದರು.

ವಿಭಾಗದ ಮುಖ್ಯಸ್ಥೆ ಪ್ರೊ.ಮಮತ, ಪ್ರಾಧ್ಯಾಪಕರಾದ ಪ್ರೊ.ನಿರಂಜನ, ಪ್ರೊ.ಸಿ.ಕೆ.ಪುಟ್ಟಸ್ವಾಮಿ, ಅತಿಥಿ ಉಪನ್ಯಾಸಕರಾದ ಡಾ.ಕುಮಾರ ಸ್ವಾಮಿ, ಡಾ.ಬಿ.ಸಿ.ಸಂಜಯ್, ಸಂಶೋಧಕರು, ವಿದ್ಯಾರ್ಥಿಗಳು ಹಾಗೂ ವಿಭಾಗದ ಬೋಧಕೇತರ ಸಿಬ್ಬಂದಿ ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಮೈಸೂರು ಸ್ಯಾಂಡಲ್‌ ಸೋಪ್‌ಗೆ ತಮನ್ನಾ ರಾಯಭಾರಿ ; ವಿಪಕ್ಷಗಳ ವಿರೋಧ

ಬೆಂಗಳೂರು : ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ ಲಿಮಿಟೆಡ್ (ಕೆಎಸ್‌ಡಿಎಲ್) ನ ಐತಿಹಾಸಿಕ ಬ್ರ್ಯಾಂಡ್ ಮೈಸೂರು ಸ್ಯಾಂಡಲ್ ಸೋಪ್‌ಗೆ ನಟಿ…

4 hours ago

ಮೈಸೂರಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ

ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿದ ಸಂಸದ ಯದುವೀರ್ ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರು ಈಗ ಅತ್ಯಂತ ವೇಗವಾಗಿ ಬೆಳೆಯುತ್ತಿರುವ…

4 hours ago

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಕ್ಕೆ ಅನುಮತಿ ಸುಳಿವು

ಕುನ್ಹಾ ಆಯೋಗದ ವರದಿ ಆಧರಿಸಿ ಕ್ರಮ : ಪರಮೇಶ್ವರ್ ಬೆಂಗಳೂರು : ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಾವಳಿಗಳನ್ನು ನಡೆಸಲು…

4 hours ago

ಬಜೆಟ್‌ ದಿನಾಂಕ ಸದ್ಯದಲ್ಲೇ ನಿಗದಿ : ಸಿಎಂ

ಬೆಂಗಳೂರು : ವಿವಿಧ ಇಲಾಖೆಗಳೊಂದಿಗೆ ಸಭೆಗಳನ್ನು ನಡೆಸಲಾಗುತ್ತಿದ್ದು, ಆಯವ್ಯಯದ ದಿನಾಂಕವನ್ನು ಸದ್ಯದಲ್ಲಿಯೇ ತಿಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬುಧವಾರ…

5 hours ago

T20 World Cup : ಡಬಲ್‌ ಸೂಪರ್‌ ಓವರ್‌ : 2 ಬಾರಿ ಟೈ ಆದ ಪಂದ್ಯದಲ್ಲಿ ಹರಿಣಗಳ ಮೇಲುಗೈ

ಅಹಮದಾಬಾದ್ : ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಬುಧವಾರ ಅಪ್ಘಾನಿಸ್ತಾನ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಲೀಗ್ ಪಂದ್ಯವು ಎರಡು…

5 hours ago

ಮುಂದುವರೆದ ಡ್ರಗ್ಸ್‌ ಸಮರ : ಮಾದಕ ವಸ್ತು ವಶಕ್ಕೆ ; ಐವರ ಬಂಧನ

ಮೈಸೂರು : ನಗರದಲ್ಲಿ ಮಾದಕ ವಸ್ತು ಅಕ್ರಮ ಮಾರಾಟ ಮತ್ತು ಸಾಗಾಟದ ಮೇಲೆ ಸಿಸಿಬಿ ಮತ್ತು ಮಂಡಿ ಠಾಣಾ ಪೊಲೀಸರಿಂದ…

6 hours ago