ಮೈಸೂರು

ವನ್ಯಜೀವಿ ಛಾಯಾಗ್ರಹಕರಾಗುವ ಮೊದಲು ಕಾಡಿನ ಭಾಷೆ ಅರಿಯಿರಿ : ಕೃಪಾಕರ್‌ ಸೇನಾನಿ

ಮೈಸೂರು : ವನ್ಯಜೀವಿ ಛಾಯಾಗ್ರಹಣ ಹಾಗೂ ಸಾಕ್ಷ್ಯಚಿತ್ರ ತಯಾರಕರಾಗುವ ಮೊದಲು ಕಾಡಿನ ಭಾಷೆ ಅರಿತುಕೊಂಡಿರಬೇಕು ಎಂದು ವನ್ಯಜೀವಿ ಛಾಯಾಗ್ರಾಹಕರಾದ ಕೃಪಾಕರ್ ಸೇನಾನಿ ತಿಳಿಸಿದರು.

ಮಾನಸಗಂಗೋತ್ರಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ಆಯೋಜಿಸಿರುವ ‘ಪತ್ರಿಕೋದ್ಯಮದ ಉದಯೋನ್ಮುಖ ಪ್ರವೃತ್ತಿಗಳು’ ಕುರಿತು ನಡೆದ ೩ನೇ ದಿನದ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದ ಕೃಪಾಕರ್ ಸೇನಾನಿ ಅವರು ಮಾತನಾಡಿ, ಪತ್ರಿಕೋದ್ಯಮದ ಅತ್ಯಂತ ಪ್ರಮುಖ ಅಂಶವೆಂದರೆ ಪ್ರಶ್ನೆಗಳನ್ನು ಕೇಳುವುದು. ಅದರಲ್ಲೂ ಸರಿಯಾದ ಪ್ರಶ್ನೆಗಳನ್ನು ಕೇಳುವ ಮೂಲಕವೇ ನೈಜ ಮಾಹಿತಿಯನ್ನು ಹೊರತರಲು ಸಾಧ್ಯ ವನ್ಯಜೀವಿ ಛಾಯಾಗ್ರಹಣ ಹಾಗೂ ಸಾಕ್ಷ್ಯಚಿತ್ರ ತಯಾರಿಸಲು ಹೊರಟವರಿಗೆ ಕಾಡಿನ ಭಾಷೆ ಅರಿತುಕೊಳ್ಳುವುದೇ ಮೊದಲ ಅರ್ಹತೆ ಎಂದರು.

ವನ್ಯಜೀವಿ ಚಿತ್ರೀಕರಣದಲ್ಲಿ ಲೈಟ್, ಲೆನ್ಸ್ ಸೇರಿದಂತೆ ಅಗತ್ಯಉಪಕರಣಗಳ ಬಳಕೆ ಅಗತ್ಯ, ಅವುಗಳನ್ನು ಸಂದರ್ಭಕ್ಕೆ ತಕ್ಕಂತೆ ಬಳಸುವುದು ಹಾಗೂ ಅಭಿವೃದ್ಧಿ ಪಡಿಸಲಾದ ಉಪಕರಣಗಳ ಬಗ್ಗೆ ಮಾಹಿತಿ ಹೊಂದಿರಬೇಕು. ನಾವೂ ಕಾಲಕ್ಕೆ ತಕ್ಕಂತೆ ಹೊಂದಿಕೊಂಡು ಉನ್ನತ ತಂತ್ರಾಂಶಗಳನ್ನು ಅಳವಡಿಸಿಕೊಂಡು ಉತ್ತಮ ಸಾಕ್ಷ್ಯಾಚಿತ್ರಗಳನ್ನು ನಿರ್ಮಿಸಬೇಕು ಎಂದು ಸಲಹೆ ನೀಡಿದರು.

ಒಬ್ಬ ವನ್ಯಜೀವಿ ಚಿತ್ರನಿರ್ಮಾಪಕ ಎಲ್ಲಕ್ಕಿಂತ ಮೊದಲು ಕಾಡಿನ ಮೌನವನ್ನು ಆಲಿಸಬೇಕು. ನಂತರ ಆ ಮೌನಭಾಷೆಯನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸಬೇಕು. ಇದು ಚಿತ್ರೀಕರಣಕ್ಕೆ ಪೂರಕವಾದ ವಾತಾವರಣವನ್ನು ಕಲ್ಪಿಸಿಕೊಡುತ್ತದೆ ಎಂದು ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಬಳಿಕ ‘ವೈಲ್ಡ್‌ಲೈಫ್ ಡಾಕ್ಯುಮೆಂಟರಿ ಮೇಕಿಂಗ್’ ವಿಷಯ ಕುರಿತು ಕಾರ್ಯಾಗಾರ ನಡೆಸಿಕೊಟ್ಟರು.

ಕಾರ್ಯಾಗಾರದಲ್ಲಿ ಮಾಧ್ಯಮ ವರದಿಗಾರ ರವಿ ಪಾಂಡವಪುರ, ದೂರದರ್ಶನದಲ್ಲಿ ಸ್ಕ್ರಿಪ್ಟ್ ಬರವಣಿಗೆ, ತಂತ್ರಾಂಶ ಬಳಕೆ, ವಿಶೇಷ ವರದಿ, ಗ್ರೌಂಡ್ ರಿಪೋರ್ಟ್, ವಿಷಯಗಳ ಗೌಪ್ಯತೆ, ಎದುರಾಗಬಹುದಾದ ಸವಾಲುಗಳ ನಿವಾರಣೆ ಇನ್ನಿತರ ವಿಚಾರಗಳ ಬಗ್ಗೆ ವಿವರಿಸಿದರು.

ವಿಭಾಗದ ಮುಖ್ಯಸ್ಥೆ ಪ್ರೊ.ಮಮತ, ಪ್ರಾಧ್ಯಾಪಕರಾದ ಪ್ರೊ.ನಿರಂಜನ, ಪ್ರೊ.ಸಿ.ಕೆ.ಪುಟ್ಟಸ್ವಾಮಿ, ಅತಿಥಿ ಉಪನ್ಯಾಸಕರಾದ ಡಾ.ಕುಮಾರ ಸ್ವಾಮಿ, ಡಾ.ಬಿ.ಸಿ.ಸಂಜಯ್, ಸಂಶೋಧಕರು, ವಿದ್ಯಾರ್ಥಿಗಳು ಹಾಗೂ ವಿಭಾಗದ ಬೋಧಕೇತರ ಸಿಬ್ಬಂದಿ ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ರಾಜಕೀಯ ಮೇಲಾಟ ನಿಲ್ಲಲಿ; ಸಾಮಾನ್ಯರ ವಿಷಯ ಚರ್ಚೆಯಾಗಲಿ

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣ ಕರ್ನಾಟಕ ರಾಜಕಾರಣದಲ್ಲಿ ಮತ್ತೊಮ್ಮೆ ಕೇಂದ್ರ ಬಿಂದುವಾಗಿದ್ದು,…

2 hours ago

ಪ್ರೇಮವೂ ಬಂಡಾಯದ ದನಿಯೇ – ಅಮೃತಾ ಪ್ರೀತಮ್

ರೇಣುಕಾ ನಿಡಗುಂದಿ ಮತ್ತೆ ಸಿಗುವೆ.. ಆದರೆ ಎಲ್ಲಿ? ಹೇಗೆ ನನಗೂ ತಿಳಿಯದು, ಈ ನಶ್ವರ ಲೋಕದ ಹಂಗು ಆತ್ಮಕ್ಕಿಲ್ಲ ನಾ…

2 hours ago

ನೀರಸವಾಯಿತು ರಾಜ್ಯ ವಿಧಾನಮಂಡಲ ಅಧಿವೇಶನ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಈ ಬಾರಿಯ ರಾಜ್ಯ ವಿಧಾನಮಂಡಲ ಅಧಿವೇಶನ ನಾಡಿನ ಜನರಿಗೆ ರವಾನಿಸಿರುವ ಸಂದೇಶ ಏನು? ಇಂತಹದೊಂದು…

3 hours ago

ಪ್ರಕೃತಿ ಪ್ರಿಯರನ್ನು ಸೆಳೆಯುತ್ತಿರುವ ಮೇದುರ ಜಲಪಾತ

ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ಪಶ್ಚಿಮ ಘಟ್ಟದ ಸಾಲಿನಲ್ಲಿ ಮಳೆಯ ಅಬ್ಬರ ಹೆಚ್ಚಾಗುತ್ತಿದ್ದಂತೆ ಕೊಡಗಿನ ಜಲಪಾತಗಳು ಮೈದುಂಬಿ ಹರಿಯುತ್ತಿದ್ದು, ಪ್ರಕೃತಿ ಸೌಂದರ್ಯಕ್ಕೆ…

3 hours ago

ಮಳೆ ಕೊರತೆ; ಹುಣಸೂರು ತಾಲ್ಲೂಕಿನಲ್ಲಿ ರೈತರಿಗೆ ಸಂಕಷ್ಟ

ಎಂ.ಯೋಗಾನಂದ ಬಿತ್ತನೆ ಮಾಡಿದ ಬೆಳೆಗಳು ಕೈ ಸೇರದೆ ಆತಂಕ, ಸೂಕ್ತ ಬೆಳೆ ನಷ್ಟ ಪರಿಹಾರಕ್ಕೆ ಆಗ್ರಹ ಹುಣಸೂರು: ತಾಲ್ಲೂಕಿನಲ್ಲಿ ಈ…

3 hours ago

ಸರ್ವರ್ ಸಮಸ್ಯೆ; ಪಡಿತರ ಪಡೆಯಲು ಪಡಿಪಾಟಲು

ಭೇರ್ಯ ಮಹೇಶ್ ಅವಳಿ ತಾಲ್ಲೂಕುಗಳಲ್ಲಿ ಸರ್ವರ್ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಲು ಆಗ್ರಹ  ಕೆ.ಆರ್.ನಗರ: ಕೇಂದ್ರ ಸರ್ಕಾರದ ನಿರ್ದೇಶನದಂತೆ ಆಗಸ್ಟ್…

3 hours ago