ಮೈಸೂರು

ವಿಶ್ವಭಾಷೆ ಸಂಗೀತ ಕಲಿತು ಆನಂದದಿಂದಿರಿ : ಟಿ ಎಸ್ ಶ್ರೀವತ್ಸ

ಮೈಸೂರು: ನೋವನ್ನು ಮರೆಸುವ ಶಕ್ತಿ ಸಂಗೀತಕ್ಕಿದೆ. ವಿಶ್ವಭಾಷೆ ಸಂಗೀತವನ್ನರಿತವರು ಆನಂದದಿಂದ ಇರುವರು. ಎಲ್ಲರೂ ಸಂಗೀತ ಕಲಿತು ಆಸ್ವಾದಿಸಬೇಕು ಎಂದು ಶಾಸಕ ಟಿ ಎಸ್ ಶ್ರೀವತ್ಸ ಹೇಳಿದರು.

ನಗರದ ಹೂಟಗಳ್ಳಿ ಬಿ ಎನ್ ರಾವ್ ಸಭಾಂಗಣದಲ್ಲಿ ಕಲಾಭೂಮಿ ವತಿಯಿಂದ ಸ್ವರ ಸಂಭ್ರಮ ರಾಜ್ಯಮಟ್ಟದ ಕರೋಕೆ ಗಾಯನ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಅವರು ಮಾತನಾಡಿದರು.

ಸಾಂಸ್ಕೃತಿಕ ರಾಜಧಾನಿ ಮೈಸೂರು ಕಲಾವಿದರ ತವರೂರು. ಇದಕ್ಕೆ ಸಂಗೀತದ ಶಕ್ತಿಯೇ ಕಾರಣ, ಸಂಗೀತ ಅಭ್ಯಾಸದಿಂದ ಆರೋಗ್ಯ ವೃದ್ಧಿಸುತ್ತದೆ .ಶಂಖನಾದ ಶಾಸ್ವಕೋಶ ಶುದ್ಧಿ ಮಾಡುತ್ತದೆ ಎಂದು ಹೇಳಿದರು.

ಜನಪದ ಶೈಲಿಯ ಉತ್ತಮ ಆರೋಗ್ಯಕ್ಕೆ ಸಹಕಾರಿ ವೇದಮಂತ್ರ ಮೆದುಳಿಗೆ ಶಕ್ತಿ ಹೆಚ್ಚಿಸುತ್ತದೆ. ಹಿಂದೂಸ್ತಾನಿ ಕರ್ನಾಟಿಕ್ ಸಂಗೀತ ಪ್ರದರ್ಶನಕ್ಕೆ ವಿದೇಶಗಳಲ್ಲಿ ಗೌರವವಿದೆ. ಕಟ್ಟುನಿಟ್ಟಿನ ಸಂಗೀತ ಪ್ರಕಾರದಿಂದ ಆರೋಗ್ಯ ವೃದ್ಧಿಯಾಗುತ್ತದೆ. ಮಕ್ಕಳನ್ನು ಕಡ್ಡಾಯವಾಗಿ ಸಂಗೀತ ಶಾಲೆಗೆ ಸೇರಿಸಿದರೆ ಮುಂದಿನ ಅವರ ಭವಿಷ್ಯ ಉಜ್ವಲವಾಗಿರುತ್ತದೆ ಇಂದಿನ ಕಾಲದಲ್ಲಿ ಆಕಾಶವಾಣಿ ದೂರದರ್ಶನದಲ್ಲಿ ಸಂಗೀತ ಕಾರ್ಯಕ್ರಮಗಳು ಜನಸಾಮಾನ್ಯರು ಅವಲಂಬಿತರಾಗಿದ್ದರು ಅದು ಆರೋಗ್ಯದ ಮನಃಶಾಂತಿ ಹೆಚ್ಚಾಗಿ ಸಿಗುತ್ತದೆ ಎಂದು ಸ್ಮರಿಸಿದರು.

ಬಳಿಕ ಮಾತನಾಡಿದ ಸಂಗೀತ ನಿರ್ದೇಶಕರಾದ ಲಯ ಕೋಕಿಲ, ಶ್ರದ್ಧೆ ಮತ್ತು ಛಲದಿಂದ ಕಲೆಯನ್ನು ಕರಗತ ಮಾಡಿಕೊಳ್ಳಬೇಕು. ಯಾವುದೇ ಕಲೆಯ ಸ್ಪರ್ಧೆ ಹಾಗೂ ಪ್ರದರ್ಶನಕ್ಕೆ ಮುನ್ನ ಶ್ರದ್ಧೆ ಮತ್ತು ಛಲದಿಂದ ಅದನ್ನು ಕರಗತ ಮಾಡಿಕೊಳ್ಳುವ ಅವಿರತ ಪ್ರಯತ್ನ ಇರಬೇಕು ಎಂದು ಹೇಳಿದರು

ಕೊರೋಕೆ ಸ್ಪರ್ಧೆಯಲ್ಲಿ 50 ಹೆಚ್ಚು ಸ್ಪರ್ಧಿಗಳು ಸ್ಪರ್ಧೆಯಲ್ಲಿ ಭಾಗಿಯಾಗಿದ್ದರು.

ಇದೇ ಸಂದರ್ಭದಲ್ಲಿ ಸ್ವರ ಸಂಭ್ರಮ ಕಾರ್ಯಕ್ರಮದ ಆಯೋಜಕರಾದ ನಟ, ನಿರ್ಮಾಪಕ ಹಾಗೂ ಕಲಾಭೂಮಿ ಪ್ರತಿಷ್ಠಾನದ ಅಧ್ಯಕ್ಷ ಆಸ್ಕರ್ ಕೃಷ್ಣ, ನಿರ್ದೇಶಕರಾದ ನಿಂಗರಾಜು, ಒಂದು ಹೆಜ್ಜೆ ರಕ್ತದಾನಿಗಳ ಬಳಗದ ಅಧ್ಯಕ್ಷ ರಕ್ತದಾನ ಮಂಜು , ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್ ಎಸ್ ಇ , ಬಿಜೆಪಿ ನಗರ ಉಪಾಧ್ಯಕ್ಷ ಜೋಗಿ ಮಂಜು, ಸಮೃದ್ಧಿ ವಾರ್ತೆ ಪತ್ರಿಕೆ ಸಂಸ್ಥಾಪಕರು ಸಹನಾ ಗೌಡ,ಮನೋರೋಗ ತಜ್ಞರಾದ ಡಾಕ್ಟರ್ ರೇಖಾ ಮನಶಾಂತಿ ಹಾಗೂ ಇನ್ನಿತರರು ಭಾಗವಹಿಸಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಹನೂರು: ಏಕಕಾಲದಲ್ಲೇ ಕಾಣಿಸಿಕೊಂಡ ಎರಡು ಚಿರತೆಗಳು

ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…

2 hours ago

ನಾಳೆಯೊಳಗೆ ಪ್ರಯಾಣಿಕರಿಗೆ ಮರುಪಾವತಿ ಮಾಡಿ: ಇಂಡಿಗೋ ಏರ್‌ಲೈನ್ಸ್‌ಗೆ ಗಡುವು ನೀಡಿದ ಕೇಂದ್ರ ಸರ್ಕಾರ

ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…

3 hours ago

ಡಿ.ಕೆ.ಶಿವಕುಮಾರ್‌ ಸಂಪುಟದಲ್ಲಿ ನನಗೆ ಸಚಿವ ಸ್ಥಾನ ಬೇಡ: ಮಾಜಿ ಸಚಿವ ಕೆ.ಎನ್.ರಾಜಣ್ಣ

ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…

3 hours ago

ನನ್ನನ್ನು ಹೆದರಿಸ್ತೀನಿ ಅಂದ್ರೆ ಅದು ಸಾಧ್ಯವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಹಾಸನ: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್‌ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…

4 hours ago

ಹೇಮಾವತಿ ಜಲಾಶಯದ ಬಳಿ ಉದ್ಯಾನವನ ನಿರ್ಮಿಸಲು ಸಿಎಂ ಸಿದ್ದರಾಮಯ್ಯ ಭರವಸೆ

ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…

4 hours ago

ಮೈಸೂರು| ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆ

ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…

4 hours ago