ಮೈಸೂರು

ವಿಶ್ವಭಾಷೆ ಸಂಗೀತ ಕಲಿತು ಆನಂದದಿಂದಿರಿ : ಟಿ ಎಸ್ ಶ್ರೀವತ್ಸ

ಮೈಸೂರು: ನೋವನ್ನು ಮರೆಸುವ ಶಕ್ತಿ ಸಂಗೀತಕ್ಕಿದೆ. ವಿಶ್ವಭಾಷೆ ಸಂಗೀತವನ್ನರಿತವರು ಆನಂದದಿಂದ ಇರುವರು. ಎಲ್ಲರೂ ಸಂಗೀತ ಕಲಿತು ಆಸ್ವಾದಿಸಬೇಕು ಎಂದು ಶಾಸಕ ಟಿ ಎಸ್ ಶ್ರೀವತ್ಸ ಹೇಳಿದರು.

ನಗರದ ಹೂಟಗಳ್ಳಿ ಬಿ ಎನ್ ರಾವ್ ಸಭಾಂಗಣದಲ್ಲಿ ಕಲಾಭೂಮಿ ವತಿಯಿಂದ ಸ್ವರ ಸಂಭ್ರಮ ರಾಜ್ಯಮಟ್ಟದ ಕರೋಕೆ ಗಾಯನ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಅವರು ಮಾತನಾಡಿದರು.

ಸಾಂಸ್ಕೃತಿಕ ರಾಜಧಾನಿ ಮೈಸೂರು ಕಲಾವಿದರ ತವರೂರು. ಇದಕ್ಕೆ ಸಂಗೀತದ ಶಕ್ತಿಯೇ ಕಾರಣ, ಸಂಗೀತ ಅಭ್ಯಾಸದಿಂದ ಆರೋಗ್ಯ ವೃದ್ಧಿಸುತ್ತದೆ .ಶಂಖನಾದ ಶಾಸ್ವಕೋಶ ಶುದ್ಧಿ ಮಾಡುತ್ತದೆ ಎಂದು ಹೇಳಿದರು.

ಜನಪದ ಶೈಲಿಯ ಉತ್ತಮ ಆರೋಗ್ಯಕ್ಕೆ ಸಹಕಾರಿ ವೇದಮಂತ್ರ ಮೆದುಳಿಗೆ ಶಕ್ತಿ ಹೆಚ್ಚಿಸುತ್ತದೆ. ಹಿಂದೂಸ್ತಾನಿ ಕರ್ನಾಟಿಕ್ ಸಂಗೀತ ಪ್ರದರ್ಶನಕ್ಕೆ ವಿದೇಶಗಳಲ್ಲಿ ಗೌರವವಿದೆ. ಕಟ್ಟುನಿಟ್ಟಿನ ಸಂಗೀತ ಪ್ರಕಾರದಿಂದ ಆರೋಗ್ಯ ವೃದ್ಧಿಯಾಗುತ್ತದೆ. ಮಕ್ಕಳನ್ನು ಕಡ್ಡಾಯವಾಗಿ ಸಂಗೀತ ಶಾಲೆಗೆ ಸೇರಿಸಿದರೆ ಮುಂದಿನ ಅವರ ಭವಿಷ್ಯ ಉಜ್ವಲವಾಗಿರುತ್ತದೆ ಇಂದಿನ ಕಾಲದಲ್ಲಿ ಆಕಾಶವಾಣಿ ದೂರದರ್ಶನದಲ್ಲಿ ಸಂಗೀತ ಕಾರ್ಯಕ್ರಮಗಳು ಜನಸಾಮಾನ್ಯರು ಅವಲಂಬಿತರಾಗಿದ್ದರು ಅದು ಆರೋಗ್ಯದ ಮನಃಶಾಂತಿ ಹೆಚ್ಚಾಗಿ ಸಿಗುತ್ತದೆ ಎಂದು ಸ್ಮರಿಸಿದರು.

ಬಳಿಕ ಮಾತನಾಡಿದ ಸಂಗೀತ ನಿರ್ದೇಶಕರಾದ ಲಯ ಕೋಕಿಲ, ಶ್ರದ್ಧೆ ಮತ್ತು ಛಲದಿಂದ ಕಲೆಯನ್ನು ಕರಗತ ಮಾಡಿಕೊಳ್ಳಬೇಕು. ಯಾವುದೇ ಕಲೆಯ ಸ್ಪರ್ಧೆ ಹಾಗೂ ಪ್ರದರ್ಶನಕ್ಕೆ ಮುನ್ನ ಶ್ರದ್ಧೆ ಮತ್ತು ಛಲದಿಂದ ಅದನ್ನು ಕರಗತ ಮಾಡಿಕೊಳ್ಳುವ ಅವಿರತ ಪ್ರಯತ್ನ ಇರಬೇಕು ಎಂದು ಹೇಳಿದರು

ಕೊರೋಕೆ ಸ್ಪರ್ಧೆಯಲ್ಲಿ 50 ಹೆಚ್ಚು ಸ್ಪರ್ಧಿಗಳು ಸ್ಪರ್ಧೆಯಲ್ಲಿ ಭಾಗಿಯಾಗಿದ್ದರು.

ಇದೇ ಸಂದರ್ಭದಲ್ಲಿ ಸ್ವರ ಸಂಭ್ರಮ ಕಾರ್ಯಕ್ರಮದ ಆಯೋಜಕರಾದ ನಟ, ನಿರ್ಮಾಪಕ ಹಾಗೂ ಕಲಾಭೂಮಿ ಪ್ರತಿಷ್ಠಾನದ ಅಧ್ಯಕ್ಷ ಆಸ್ಕರ್ ಕೃಷ್ಣ, ನಿರ್ದೇಶಕರಾದ ನಿಂಗರಾಜು, ಒಂದು ಹೆಜ್ಜೆ ರಕ್ತದಾನಿಗಳ ಬಳಗದ ಅಧ್ಯಕ್ಷ ರಕ್ತದಾನ ಮಂಜು , ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್ ಎಸ್ ಇ , ಬಿಜೆಪಿ ನಗರ ಉಪಾಧ್ಯಕ್ಷ ಜೋಗಿ ಮಂಜು, ಸಮೃದ್ಧಿ ವಾರ್ತೆ ಪತ್ರಿಕೆ ಸಂಸ್ಥಾಪಕರು ಸಹನಾ ಗೌಡ,ಮನೋರೋಗ ತಜ್ಞರಾದ ಡಾಕ್ಟರ್ ರೇಖಾ ಮನಶಾಂತಿ ಹಾಗೂ ಇನ್ನಿತರರು ಭಾಗವಹಿಸಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಹನೂರಿನಲ್ಲಿ ಮೇವು-ನೀರಿಲ್ಲದೆ ಜಾನುವಾರುಗಳ ಪರದಾಟ: ಕಸ, ಪೇಪರ್ ತಿಂದು ಜೀವ ಉಳಿಸಿಕೊಳ್ಳುತ್ತಿರುವ ಮೂಕ ಪ್ರಾಣಿಗಳು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಹಲವು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಮಳೆಯ…

13 hours ago

ಬಂಡೀಪುರ ಸಫಾರಿ ವಾಹನಗಳಿಗೆ ಜಿಪಿಎಸ್ ಡ್ಯಾಶ್ ಕ್ಯಾಮರಾ ಅಳವಡಿಕೆ

ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೇಲುಕಾಮನಹಳ್ಳಿ ಸಫಾರಿ ಕೇಂದ್ರದ ವಾಹನಗಳಿಗೆ ಜಿಪಿಎಸ್ ಹಾಗೂ ಡ್ಯಾಶ್ ಕ್ಯಾಮ್‌ಗಳನ್ನು ಅಳವಡಿಸಲಾಗಿದೆ ಎಂದು…

13 hours ago

ಮೈಸೂರಿನಲ್ಲಿ ಯತೀಂದ್ರ ಮಹಾರಾಜನ ಏಕಚಕ್ರಾಧಿಪತ್ಯವಿದೆ: ಎಚ್.ವಿಶ್ವನಾಥ್ ವಾಗ್ದಾಳಿ

ಮೈಸೂರು: ಮೈಸೂರು ಜಿಲ್ಲೆಯಲ್ಲಿ ಸಚಿವ ಯತೀಂದ್ರ ಅವರ ಏಕಚಕ್ರಾಧಿಪತ್ಯ ನಡೆಯುತ್ತಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಎಚ್. ವಿಶ್ವನಾಥ್…

13 hours ago

ಜೈಲಿನಲ್ಲಿ ಮೊಬೈಲ್ ಬಳಕೆ ಆರೋಪ: ಪ್ರಜ್ವಲ್ ರೇವಣ್ಣ 2 ದಿನ ಪೊಲೀಸ್ ಕಸ್ಟಡಿಗೆ

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಅಕ್ರಮವಾಗಿ ಮೊಬೈಲ್ ಫೋನ್ ಬಳಸಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ…

14 hours ago

ತಮಿಳುನಾಡಿಗೆ ಪ್ರತಿದಿನ 6 ಸಾವಿರ ಕ್ಯೂಸೆಕ್ಸ್ ನೀರು ಹರಿಸುವಂತೆ CWRC ಶಿಫಾರಸು

ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾಗಿದೆ. ತಮಿಳುನಾಡಿಗೆ ಪ್ರತಿದಿನ 6 ಸಾವಿರ ಕ್ಯೂಸೆಕ್ಸ್‌ ಕಾವೇರಿ…

14 hours ago

ಓದುಗರ ಪತ್ರ: ಮನವಿಗೆ ಸ್ಪಂದಿಸಿದಕ್ಕಾಗಿ ಅಭಿನಂದನೆಗಳು

ಮೈಸೂರಿನ ವಿ.ವಿ.ಮೊಹಲ್ಲದ ೨ನೇ ಮುಖ್ಯರಸ್ತೆಯಲ್ಲಿರುವ (ಕ್ಲಬ್ ಹಿಂಭಾಗ) ವಾರ್ಡ್ ಸಂಖ್ಯೆ ೧೯ರ ವ್ಯಾಪ್ತಿಗೆ ಒಳಪಡುವ ಕನ್ಸರ್‌ವೆನ್ಸಿಯಲ್ಲಿ ಗಿಡ ಗಂಟಿಗಳು ಬೃಹದಾಕಾರವಾಗಿ…

22 hours ago