ಮೈಸೂರು : ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಬಡಜನರ ಕಲ್ಯಾಣಕ್ಕಾಗಿ ಸಾಕಷ್ಟು ಕಾರ್ಯಕ್ರಮಗಳನ್ನು ರೂಪಿಸುತ್ತವೆ. ಅಧಿಕಾರಿಗಳು ಪ್ರಾಮಾಣಿಕವಾಗಿ ಬದ್ಧತೆಯಿಂದ ಅವುಗಳನ್ನು ಅರ್ಹರಿಗೆ ತಲುಪಿಸುವ ಕೆಲಸ ಮಾಡಬೇಕು ಎಂದು ಉಕ್ಕು ಮತ್ತು ಬೃಹತ್ ಕೈಗಾರಿಕಾ ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಸಲಹೆ ನೀಡಿದರು.
ಶುಕ್ರವಾರ ನಗರದ ಜಿಲ್ಲಾ ಪಂಚಾಯತ್ ನ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಅಭಿವೃದ್ಧಿ ಹಾಗೂ ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ನೀವು ನಿಮ್ಮ ಕೈ ಕೆಳಗಿನ ಅಧಿಕಾರಿಗಳು ನೀಡಿರುವ ವರದಿಯನ್ನು ತಂದು ಸಭೆಯಲ್ಲಿ ಮಂಡಿಸಿದರಷ್ಟೇ ಸಾಲದು. ವಾರಕ್ಕೆ ಒಮ್ಮೆಯಾದರೂ ಕಚೇರಿ ಬಿಟ್ಟು ಗ್ರಾಮೀಣ ಪ್ರದೇಶಕ್ಕೆ ತೆರಳಿ ಬಡವರು, ರೈತರ ಸಂಕಷ್ಟಗಳನ್ನು ಅರಿಯಬೇಕು. ಆಗ ಮಾತ್ರ ನೀವು ಅವರಿಗೆ ಸಹಾಯ ಮಾಡಲು ಸಾಧ್ಯ ಎಂದು ಹೇಳಿದರು.
ಸ್ವಾತಂತ್ರ್ಯ ಬಂದು ಇಷ್ಟು ವರ್ಷಗಳಾದರೂ ಗ್ರಾಮೀಣ ಭಾಗದಲ್ಲಿ ಇನ್ನೂ ಕೂಡ ಸಾಕಷ್ಟು ಮಂದಿಗೆ ಮನೆ ಅಥವ ನಿವೇಶನವಿಲ್ಲ. ಇಂತಹ ವಾಸ್ತವಗಳನ್ನು ಅಧಿಕಾರಿಗಳು ಖುದ್ದು ಸ್ಥಳಕ್ಕೆ ತೆರಳಿ ತಿಳಿಯಬೇಕು. ಮೈಸೂರು ಮುಖ್ಯಮಂತ್ರಿಗಳ ತವರು ಜಿಲ್ಲೆ. ರಾಜರ ಕೊಡುಗೆ ಸಾಕಷ್ಟಿದೆ. ಇಲ್ಲಿ ಹೆಚ್ಚಿನ ಅಭಿವೃದ್ಧಿಯಾಗಲು ಅಧಿಕಾರಿಗಳು ಸಹಕರಿಸಬೇಕು ಎಂದರು.
ಮೈಸೂರು ಕುಶಾಲನಗರ ರಾಷ್ಟ್ರೀಯ ಹೆದ್ದಾರಿ 275ನ ಭೂಮಿ ವಶಕ್ಕೆ ಪಡೆಯಲಾಗಿದೆಯೇ ಭೂಮಿ ಪಡೆಯಲು ತಕರಾರು ಇರುವ ಕಡೆ ಬಗೆಹರಿಸಿ ಪಡೆಯುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬ್ಯಾಂಕ್ಗಳು ಗ್ರಾಹಕರೊಂದಿಗೆ ಸೌಜನ್ಯಯುತವಾಗಿ ವರ್ತಿಸಬೇಕು. ಮೊದಲ ಬಾರಿ ಲೋನ್ ಪಡೆಯುವವರಿಗೆ ಸಿಬಿಲ್ ಸ್ಕೋರ್ ನೆಪ ಹೇಳಿ ಸತಾಯಿಸಬಾರದು. ರೈತರಿಗೆ ಯಾವುದಾದರೂ ಯೋಜನೆಯಡಿ ಪ್ರೋತ್ಸಾಹಧನ ಬಂದರೆ ಅದನ್ನು ಸಾಲದ ಬಡ್ಡಿಗೆ ವಜಾ ಮಾಡಿಕೊಳ್ಳಬಾರದು ಎಂದು ಲೀಡ್ ಬ್ಯಾಂಕ್ ಮೇನೇಜರ್ಗೆ ಸೂಚನೆ ನೀಡಿದರು.
ಹತ್ತಿ ಬೆಳೆ ಬೆಳೆಯುವ ರೈತರ ಸಂಖ್ಯೆ ಕಡಿಮೆ ಬರುತ್ತಿದೆ. ಮುಸುಕಿನ ಜೋಳದ ಬೇಳೆ ಹೆಚ್ಚು ಬೆಳೆಯುತ್ತಿದ್ದಾರೆ. ಒಂದೇ ಭೂಮಿಯಲ್ಲಿ ಪದೇ ಪದೇ ಹೆಚ್ಚಿನ ಮುಸುಕಿನ ಜೋಳ ಬೆಳೆಯುವುದರಿಂದ ಭೂಮಿ ಫಲವತ್ತತೆ ಕಳೆದುಕೊಳ್ಳುತ್ತದೆ ಈ ಬಗ್ಗೆ ರೈತರಿಗೆ ಅರಿವು ಮೂಡಿಸಬೇಕು ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರಿಗೆ ಸೂಚನೆ ನೀಡಿದರು.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…