ಮೈಸೂರು

ಉಪನ್ಯಾಸಕ, ಪತ್ರಕರ್ತ ಗೋವಿಂದ ಕುಲಕರ್ಣಿ ನಿಧನ

ಮೈಸೂರು: ವರುಣಾದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಇತಿಹಾಸ ಉಪನ್ಯಾಸಕ ಹಾಗೂ ಪತ್ರಕರ್ತ
ಗೋವಿಂದ ಕುಲಕರ್ಣಿ (55) ಭಾನುವಾರ ಬೆಳಿಗ್ಗೆ ತೀವ್ರ ಹೃದಯಾಘಾತದಿಂದ ನಿಧನರಾದರು.
ಅವರಿಗೆ ಪತ್ನಿ, ಪುತ್ರ, ಪುತ್ರಿ ಹಾಗೂ ಸಹೋದರ ಪತ್ರಕರ್ತ ಕೆ.ಎನ್.ರವಿ ಇದ್ದಾರೆ.

‘ಪ್ರಜಾವಾಣಿ’ಯ ವರುಣಾದ ಅರೆಕಾಲಿಕ ವರದಿಗಾರರಾಗಿಯೂ ಅವರು ಕಾರ್ಯ ನಿರ್ವಹಿಸುತ್ತಿದ್ದರು.
ಕೆಲ ಸಂಘ- ಸಂಸ್ಥೆಗಳ ಪದಾಧಿಕಾರಿಗಳಾಗಿ ದುಡಿದಿದ್ದ ಅವರು, ಕೆಲ ಕೃತಿಗಳನ್ನು ರಚಿಸಿದ್ದರು.

ಇತ್ತೀಚೆಗಷ್ಟೇ ಕುಲಕರ್ಣಿ ಅವರ ತಾಯಿ ನಿಧನರಾಗಿದ್ದರು. ಇದಕ್ಕೆ ಸಂಬಂಧಿಸಿದ ಧಾಮಿ೯ಕ ವಿಧಿ ವಿಧಾನಗಳನ್ನು ನೆರವೇರಿಸಲು ಕಾರಿನಲ್ಲಿ ಶ್ರೀರಂಗಪಟ್ಟಣಕ್ಕೆ ತೆರಳುವಾಗ ಹೃದಯಾಘಾತವಾಗಿ ಮೃತಪಟ್ಟರು.
ಅವರ ಅಂತ್ಯಕ್ರಿಯೆ ನಗರದ ಚಾಮುಂಡಿ ಬೆಟ್ಟದ ತಪ್ಪಲಿನ ಸ್ಮಶಾನದಲ್ಲಿ ಭಾನುವಾರ ನಡೆಯಿತು.

andolana

Recent Posts

ಭಾರತಿರಾಜ್‌ ಅಂತಿಮ ದರ್ಶನ ಪಡೆದ ರಜನಿ, ಕಮಲ್‌, ಸಿ.ಎಂ.ವಿಜಯ್‌

ಚೆನ್ನೈ : ತಮಿಳಿನ ಖ್ಯಾತ ನಿರ್ದೇಶಕ, ಪದ್ಮಶ್ರೀ ಭಾರತಿರಾಜ್ ನಿಧನಕ್ಕೆ ಹೆಸರಾಂತ ನಟರು ಕಂಬನಿ ಮಿಡಿದಿದ್ದಾರೆ. ಅವರ ಅಂತಿಮ ದರ್ಶನಕ್ಕೆ…

26 mins ago

ಎಚ್.ಸಿ.ಮಹದೇವಪ್ಪನವರಿಗೆ ಸಚಿವ ಸ್ಥಾನಕ್ಕೆ ದಲಿತ ಸಂಘಟನೆಗಳ ಆಗ್ರಹ

ವರುಣ : ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪನವರಿಗೆ ಸಚಿವ ಸ್ಥಾನ ನೀಡಬೇಕು ಎಂದು ವರುಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ದಲಿತ ಸಂಘಟನೆಗಳ…

34 mins ago

ಕೇಂದ್ರದ ಮೇಲೆ ಗೂಬೆ ಕೂರಿಸುವ ಕೆಲಸ ಬಿಟ್ಟು ಬೇರೇನೂ ಮಾಡಲಿಲ್ಲ ಸಿದ್ದರಾಮಯ್ಯ: ಟೀಕೆ

ಮೈಸೂರು : ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸಚಿವರು ಕೇಂದ್ರ ಸರ್ಕಾರದೊಂದಿಗೆ ಸೌಹಾರ್ದದಿಂದ ಸಂಪರ್ಕ ಸಾಧಿಸಿ ರಾಜ್ಯದ ಅಭಿವೃದ್ಧಿ…

47 mins ago

ರಾಜ್ಯಸಭಾ ಸ್ಥಾನ ಕೇಳಿಲ್ಲ, ಚರ್ಚೆಯೂ ನಡೆಸಿಲ್ಲ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ

ಬೆಂಗಳೂರು: ರಾಜ್ಯಸಭಾ ಸ್ಥಾನಕ್ಕೆ ಟಿಕೆಟ್‌ ತಪ್ಪಿದೆ ಎಂಬ ಕಾರಣದಿಂದ ನನ್ನ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ನಡುವಿನ ಸಂಬಂಧ…

4 hours ago

ಖ್ಯಾತ ತಮಿಳು ನಿರ್ದೇಶಕ, ನಟ ಭಾರತಿರಾಜ ನಿಧನ

ಚೆನ್ನೈ: ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ ಭಾರತಿರಾಜ ಇಂದು ವಿಧಿವಶರಾಗಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು. ಕೆಲ…

7 hours ago

ನೆಹರು ದಾಖಲೆ ಮುರಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರಿಂದು ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ದೀರ್ಘಕಾಲ ನಿರಂತರ ಅಧಿಕಾರ ನಡೆಸಿದ ಪ್ರಧಾನಿ ಎಂಬ ಹೊಸ…

7 hours ago