ಮೈಸೂರು

ಬೈಕ್‌ನಲ್ಲಿ ತೆರಳುತ್ತಿದ್ದ ದಂಪತಿ ಮೇಲೆ ಚಿರತೆ ಅಟ್ಯಾಕ್: ಮಗು ಸೇರಿ ಮೂವರಿಗೆ ಗಂಭೀರ ಗಾಯ

ನಂಜನಗೂಡು: ಜಮೀನಿಗೆ ಬೈಕ್‌ನಲ್ಲಿ ಹೋಗುತ್ತಿದ್ದ ರೈತ ದಂಪತಿಗಳ ಮೇಲೆ ಚಿರತೆ ದಾಳಿ ನಡೆಸಿದ್ದು, ಮಗು ಸೇರಿದಂತೆ ಮೂವರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಚುಂಚನಹಳ್ಳಿ ಗ್ರಾಮದ ರೈತ ನಂಜುಂಡಸ್ವಾಮಿ ತನ್ನ ಪತ್ನಿ ಮತ್ತು ಮಗುವಿನೊಂದಿಗೆ ಚುಂಚನಹಳ್ಳಿ -ಕೋಣನೂರು ರಸ್ತೆ ಬಳಿ ಇರುವ ಜಮೀನಿಗೆ ಹೋಗುತ್ತಿದ್ದ ಸಂದರ್ಭದಲ್ಲಿ ಚಿರತೆ ಅಟ್ಯಾಕ್ ಮಾಡಿದೆ.

ಬೈಕ್‌ನಲ್ಲಿ ತೆರಳುತ್ತಿದ್ದ ರೈತನ ಮೇಲೆ ಚಿರತೆ ದಾಳಿ ನಡೆಸಿದೆ. ಇದರ ಪರಿಣಾಮ ಮಗು ಸಮೇತ ರೈತ ದಂಪತಿ ಬೈಕ್‌ನಿಂದ ಬಿದ್ದು ಗಂಭೀರ ಗಾಯಗಳಾಗಿವೆ. ಸ್ಥಳೀಯರು ಕೂಡಲೇ ತಗಡೂರಿನ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಯಿತು. ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಆಸ್ಪತ್ರೆಗೆ ದಾಖಸಿ ದಾಖಲಿಸಲಾಗಿದೆ.

ಚುಂಚನಹಳ್ಳಿ, ಕೋಣನೂರು, ಹನುಮನಪುರ ಗ್ರಾಮಗಳ ವ್ಯಾಪ್ತಿಯಲ್ಲಿ ಚಿರತೆಯ ಕಾಟ ಹೆಚ್ಚಾಗಿದ್ದು, ದಿನನಿತ್ಯ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದೆ. ಅಲ್ಲದೆ ಜಮೀನಿಗೆ ಹೋಗುವ ರೈತರ ಮೇಲು ದಾಳಿ ನಡೆಸಲು ಮುಂದಾಗುತ್ತಿದ್ದು, ಇಂದು ಜಮೀನಿಗೆ ತೆರಳುತ್ತಿದ್ದ ರೈತ ದಂಪತಿಗಳ ಮೇಲೆ ಚಿರತೆ ದಾಳಿ ನಡೆಸಿದ್ದು, ಕೂಡಲೇ ಚಿರತೆಯನ್ನು ಬೋನು ಇಟ್ಟು ಸೆರೆ ಹಿಡಿಯಬೇಕು. ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದು ರೈತ ಕಲ್ಯಾಣ ಸಂಘದ ರೈತರು ಒತ್ತಾಯಿಸಿದ್ದಾರೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಎರಡನೇ ಆಷಾಢ ಶುಕ್ರವಾರದ ಸಂಭ್ರಮ: ಲಕ್ಷ್ಮೀ ಅಲಂಕಾರದಲ್ಲಿ ಕಂಗೊಳಿಸುತ್ತಿರುವ ತಾಯಿ ಚಾಮುಂಡೇಶ್ವರಿ

ಮೈಸೂರು: ಆಷಾಢ ಮಾಸದ ಎರಡನೇ ಶುಕ್ರವಾರವಾದ ಇಂದು ನಾಡ ಅಧಿದೇವತೆ ನೆಲೆಸಿರುವ ಚಾಮುಂಡಿಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿ ಲಕ್ಷ್ಮೀ ಅಲಂಕಾರದಲ್ಲಿ ಕಂಗೊಳಿಸುತ್ತಿದ್ದಾಳೆ.…

15 hours ago

ಓದುಗರ ಪತ್ರ: ವಿದ್ಯಾರ್ಥಿಗಳ ಮೇಲೆ ಲಾಠಿ ಪ್ರಹಾರ ಖಂಡನೀಯ

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ದಿಲ್ಲಿಯಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆ ವೇಳೆ ಕೇಂದ್ರ ಸರ್ಕಾರದ ಕುಮ್ಮಕ್ಕು ಹಾಗೂ ಪೊಲೀಸರ…

18 hours ago

ಓದುಗರ ಪತ್ರ: ಗ್ರಂಥಪಾಲಕರಿಲ್ಲದ ಗ್ರಂಥಾಲಯಗಳು

ಕಳೆದ ೨೫ ವರ್ಷಗಳಿಂದ ರಾಜ್ಯದಲ್ಲಿ ೧೦ ಸಾವಿರ ಗ್ರಂಥಪಾಲಕ ಹುದ್ದೆಗಳನ್ನು ಭರ್ತಿ ಮಾಡದಿರುವುದು ಸರ್ಕಾರದ ಅಕ್ಷಮ್ಯ ನಿರ್ಲಕ್ಷ್ಯ. ೧,೨೦೦ ಸರ್ಕಾರಿ…

18 hours ago

ಓದುಗರ ಪತ್ರ: ಮುಚ್ಚಿರುವ ಪಿಎಚ್‌ಸಿ ಕೇಂದ್ರ ತೆರೆಯುವುದು ಎಂದು?

ಮೈಸೂರಿನ ಕುವೆಂಪು ನಗರದ ಎಂ ಬ್ಲಾಕ್‌ನಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರವು, ಕಳೆದ ಮೂರು ತಿಂಗಳಿಂದ ಮುಚ್ಚಿದೆ. ಇದಕ್ಕೆ ಕಾರಣ ತಿಳಿದಿಲ್ಲ.…

18 hours ago

ಇದು ನಮಿತ್ ಮಲ್ಹೋತ್ರ ‘ರಾಮಾಯಣ’ ದರ್ಶನ

 ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ  ‘ತಿಣಿಕಿದನು -ಣಿರಾಯ ರಾಮಾಯಣದ ಕವಿಗಳ ಭಾರದಲಿ ತಿಂ ತಿಣೀಯ ರಘುವರ ಚರಿತೆಯಲಿ ಕಾಲಿಡಲು ತೆರಪಿಲ್ಲ’ ಎಂದು…

18 hours ago

ಮಡಿಕೇರಿಯಲ್ಲಿ ಬಳಂಜಿಗಿಲ್ಲ ಬೇಡಿಕೆ

ಪುನೀತ್ ಜಿಲ್ಲೆಯಲ್ಲಿ ಕ್ಷೀಣಿಸಿದ ಮಳೆಯಿಂದ ಬೇಡಿಕೆ ಕುಸಿತ; ಕುಲಕಸುಬಿಗೆ ಹೊಡೆತ  ಮಡಿಕೇರಿ: ಜಿಲ್ಲೆಯಲ್ಲಿ ಧಾರಾಕಾರ ಮಳೆಯ ವಾತಾವರಣ ಇಲ್ಲದ ಕಾರಣ…

19 hours ago