ಹುಣಸೂರು: ಕೂಲಿ ಕಾರ್ಮಿಕನ ಮೇಲೆ ಚಿರತೆ ದಾಳಿ ನಡೆಸಿ ತೀವ್ರವಾಗಿ ಗಾಯಗೊಳಿಸಿರುವ ಘಟನೆ ತಾಲ್ಲೂಕಿನ ಹನಗೋಡು ಹೋಬಳಿಯ ಕಣಗಾಲು ಗ್ರಾಮದ ಬಳಿಯ ಕಂಪ್ಲಾಪುರ ರಸ್ತೆಯಲ್ಲಿ ಶುಕ್ರವಾರ ಬೆಳಿಗ್ಗೆ ನಡೆದಿದೆ.
ತಾಲ್ಲೂಕಿನ ಕಣಗಾಲು ಗ್ರಾಮದ ಮಾದೇಶ್ ನಾಯಕ (೪೦ ವರ್ಷ) ಚಿರತೆ ದಾಳಿಯಿಂದ ಗಾಯಗೊಂಡವರು. ಇವರು ಎಂದಿನಂತೆ ಜಮೀನುಗಳಲ್ಲಿರುವ ಬೂರುಗದ ಮರಗಳಲ್ಲಿ ಮರಾಟ್ ಮೊಗ್ಗು ಸಂಗ್ರಹಿಸಲು ತೆರಳಿದ್ದ ವೇಳೆ ಹಿಂದಿನಿಂದ ಚಿರತೆ ದಾಳಿ ನಡೆಸಿ ಕುತ್ತಿಗೆಯನ್ನು ಹಿಡಿದಿದೆ. ಈ ವೇಳೆ ಆತ ಕಿರುಚಿಕೊಂಡಿದ್ದು, ಆತನ ಕೂಗಾಟ ಕೇಳಿದ ಅಕ್ಕಪಕ್ಕದ ಜಮೀನುಗಳಲ್ಲಿದ್ದ ರೈತರು ಸ್ಥಳಕ್ಕೆ ಆಗಮಿಸಿ ಕೂಗಾಟ ನಡೆಸಿದ್ದರಿಂದ ಹೆದರಿದ ಚಿರತೆ ಮಾದೇಶನನ್ನು ಬಿಟ್ಟು ಓಡಿಹೋಗಿದೆ.
ತಕ್ಷಣವೇ ಗಾಯಾಳುವನ್ನು ಹತ್ತಿರದ ಪಿರಿಯಾಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ ನಂತರ ಸಂಜೆ ವೇಳೆ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿದೆ. ಪಿರಿಯಾಪಟ್ಟಣ ಪ್ರಾದೇಶಿಕ ಅರಣ್ಯ ವಿಭಾಗದ ಡಿಆರ್ಎ-ಒ ಪಾರ್ವತಿ ಪಿರಿಯಾಪಟ್ಟಣ ಆಸ್ಪತ್ರೆಗೆ ಭೇಟಿ ನೀಡಿದ್ದರು. ಗಾಯಾಳುವಿನ ವೆಚ್ಚವನ್ನು ಇಲಾಖೆಯಿಂದಲೇ ಭರಿಸಲಾಗುವುದು ಎಂದು ಡಿಸಿಎಫ್ ಕಿರುಬನಾಥನ್ ತಿಳಿಸಿದ್ದಾರೆ.
ಚಿಕಿತ್ಸೆಗೆ ಸ್ಪಂದಿಸದ ಇಲಾಖೆ: ಆದರೆ, ಗಾಯಾಳುವನ್ನು ಕೆ.ಆರ್.ಆಸ್ಪತ್ರೆಗೆ ಕಳುಹಿಸಿ ಕೈತೊಳೆದುಕೊಂಡಿರುವ ಅರಣ್ಯ ಸಿಬ್ಬಂದಿ ಜೊತೆಗೂ ಹೋಗಿಲ್ಲ, ಗಾಯಾಳು ಚಿಕಿತ್ಸೆಗಾಗಿ ಹಣವಿಲ್ಲದೆ ಪರದಾಡುತ್ತಿದ್ದು, ಅರಣ್ಯ ಇಲಾಖೆ ಹಣಕಾಸಿನ ನೆರವನ್ನೂ ನೀಡಿಲ್ಲವೆಂದು ಗಾಯಾಳು ಸಹೋದರ ತ್ಯಾಗರಾಜ್ ನೋವು ತೋಡಿ ಕೊಂಡಿದ್ದಾರೆ. ಈ ಬಗ್ಗೆ ಆರ್ಎಪ್ಓ ಪದ್ಮಶ್ರೀ ಅವರನ್ನು ಪ್ರಶ್ನಿಸಿದಾಗ ತಾವು ಹುಣಸೂರಿನಲ್ಲಿದ್ದು, ಸಿಬ್ಬಂದಿಯನ್ನು ಕಳುಹಿಸಿದ್ದು, ಗಾಯಾಳು ಸಹೋದರನ ಖಾತೆಗೆ ಹಣ ಹಾಕುವುದಾಗಿ ತಿಳಿಸಿದ್ದಾರೆ.
ಚೆನ್ನೈ : ತಮಿಳುನಾಡು ರಾಜಕಾರಣದಲ್ಲಿ ತಮ್ಮದೇ ಆದ ಕ್ರೇಜ್ ಸೃಷ್ಟಿಸಿಕೊಂಡಿರುವ ಟಿವಿಕೆ ಪಕ್ಷದ ಅಧ್ಯಕ್ಷ, ನಟ ʼದಳಪತಿʼ ವಿಜಯ್ ಅವರನ್ನು…
ಮೈಸೂರು : ಜನರು ವಿಪರೀತ ಸೆಕೆಯಿಂದಾಗಿ ತತ್ತರಿಸಿ ಹೋಗಿರುವ ನಡುವೆ ಕೆಲ ಜಿಲ್ಲೆಗಳಲ್ಲಿ ಇಂದು(ಮಾರ್ಚ್.15) ಸಂಜೆ ಅಕಾಲಿಕವಾಗಿ ಮಳೆ ಸುರಿದು…
ಮಂಡ್ಯ : ಮಂಡ್ಯ ವಿಧಾನಸಭಾ ಕ್ಷೇತ್ರ ಅಭಿವೃದ್ಧಿಗೆ ಸಮಗ್ರ ಯೋಜನೆ ರೂಪಿಸಲಾಗಿದ್ದು, ಬಸರಾಳು ಭಾಗದ ಹೇಮಾವತಿ ನಾಲೆ ಅಭಿವೃದ್ಧಿಗೆ 350…
ಮಂಡ್ಯ : ನಾನು ಯಾವಾಗ ಮಾತನಾಡಿದರೂ ವಿವಾದ ಆಗುತ್ತೆ. ನನ್ನ ಮಾತಿನಿಂದ ನೋವಾಗಿದ್ದರೆ, ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರ ಕ್ಷಮೆ ಯಾಚಿಸುತ್ತೇನೆ…
ಎಚ್.ಡಿ.ಕೋಟೆ : ಎರಡು ಬೈಕುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸಾವಿಗೀಡಾಗಿರುವ ಘಟನೆ ತಾಲ್ಲೂಕಿನಲ್ಲಿ ನಡೆದಿದೆ. ತಾಲ್ಲೂಕಿನ ಹೆರಿಗೆ…
ಚಿತ್ರದುರ್ಗ : ಚಳ್ಳಕೆರೆ ಸಮೀಪದ ಹೆಗ್ಗೆರೆ ಗೇಟ್ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಪೊಲೀಸ್ ಅಧಿಕಾರಿಗಳು ಮೃತಪಟ್ಟಿದ್ದಾರೆ. ಇಬ್ಬರು…