ಹುಣಸೂರು: ಕೂಲಿ ಕಾರ್ಮಿಕನ ಮೇಲೆ ಚಿರತೆ ದಾಳಿ ನಡೆಸಿ ತೀವ್ರವಾಗಿ ಗಾಯಗೊಳಿಸಿರುವ ಘಟನೆ ತಾಲ್ಲೂಕಿನ ಹನಗೋಡು ಹೋಬಳಿಯ ಕಣಗಾಲು ಗ್ರಾಮದ ಬಳಿಯ ಕಂಪ್ಲಾಪುರ ರಸ್ತೆಯಲ್ಲಿ ಶುಕ್ರವಾರ ಬೆಳಿಗ್ಗೆ ನಡೆದಿದೆ.
ತಾಲ್ಲೂಕಿನ ಕಣಗಾಲು ಗ್ರಾಮದ ಮಾದೇಶ್ ನಾಯಕ (೪೦ ವರ್ಷ) ಚಿರತೆ ದಾಳಿಯಿಂದ ಗಾಯಗೊಂಡವರು. ಇವರು ಎಂದಿನಂತೆ ಜಮೀನುಗಳಲ್ಲಿರುವ ಬೂರುಗದ ಮರಗಳಲ್ಲಿ ಮರಾಟ್ ಮೊಗ್ಗು ಸಂಗ್ರಹಿಸಲು ತೆರಳಿದ್ದ ವೇಳೆ ಹಿಂದಿನಿಂದ ಚಿರತೆ ದಾಳಿ ನಡೆಸಿ ಕುತ್ತಿಗೆಯನ್ನು ಹಿಡಿದಿದೆ. ಈ ವೇಳೆ ಆತ ಕಿರುಚಿಕೊಂಡಿದ್ದು, ಆತನ ಕೂಗಾಟ ಕೇಳಿದ ಅಕ್ಕಪಕ್ಕದ ಜಮೀನುಗಳಲ್ಲಿದ್ದ ರೈತರು ಸ್ಥಳಕ್ಕೆ ಆಗಮಿಸಿ ಕೂಗಾಟ ನಡೆಸಿದ್ದರಿಂದ ಹೆದರಿದ ಚಿರತೆ ಮಾದೇಶನನ್ನು ಬಿಟ್ಟು ಓಡಿಹೋಗಿದೆ.
ತಕ್ಷಣವೇ ಗಾಯಾಳುವನ್ನು ಹತ್ತಿರದ ಪಿರಿಯಾಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ ನಂತರ ಸಂಜೆ ವೇಳೆ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿದೆ. ಪಿರಿಯಾಪಟ್ಟಣ ಪ್ರಾದೇಶಿಕ ಅರಣ್ಯ ವಿಭಾಗದ ಡಿಆರ್ಎ-ಒ ಪಾರ್ವತಿ ಪಿರಿಯಾಪಟ್ಟಣ ಆಸ್ಪತ್ರೆಗೆ ಭೇಟಿ ನೀಡಿದ್ದರು. ಗಾಯಾಳುವಿನ ವೆಚ್ಚವನ್ನು ಇಲಾಖೆಯಿಂದಲೇ ಭರಿಸಲಾಗುವುದು ಎಂದು ಡಿಸಿಎಫ್ ಕಿರುಬನಾಥನ್ ತಿಳಿಸಿದ್ದಾರೆ.
ಚಿಕಿತ್ಸೆಗೆ ಸ್ಪಂದಿಸದ ಇಲಾಖೆ: ಆದರೆ, ಗಾಯಾಳುವನ್ನು ಕೆ.ಆರ್.ಆಸ್ಪತ್ರೆಗೆ ಕಳುಹಿಸಿ ಕೈತೊಳೆದುಕೊಂಡಿರುವ ಅರಣ್ಯ ಸಿಬ್ಬಂದಿ ಜೊತೆಗೂ ಹೋಗಿಲ್ಲ, ಗಾಯಾಳು ಚಿಕಿತ್ಸೆಗಾಗಿ ಹಣವಿಲ್ಲದೆ ಪರದಾಡುತ್ತಿದ್ದು, ಅರಣ್ಯ ಇಲಾಖೆ ಹಣಕಾಸಿನ ನೆರವನ್ನೂ ನೀಡಿಲ್ಲವೆಂದು ಗಾಯಾಳು ಸಹೋದರ ತ್ಯಾಗರಾಜ್ ನೋವು ತೋಡಿ ಕೊಂಡಿದ್ದಾರೆ. ಈ ಬಗ್ಗೆ ಆರ್ಎಪ್ಓ ಪದ್ಮಶ್ರೀ ಅವರನ್ನು ಪ್ರಶ್ನಿಸಿದಾಗ ತಾವು ಹುಣಸೂರಿನಲ್ಲಿದ್ದು, ಸಿಬ್ಬಂದಿಯನ್ನು ಕಳುಹಿಸಿದ್ದು, ಗಾಯಾಳು ಸಹೋದರನ ಖಾತೆಗೆ ಹಣ ಹಾಕುವುದಾಗಿ ತಿಳಿಸಿದ್ದಾರೆ.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…