Mysore
24
scattered clouds

Social Media

ಗುರುವಾರ, 05 ಫೆಬ್ರವರಿ 2026
Light
Dark

ಚಿರತೆ ಸೆರೆ | ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಮೈಸೂರು : ಅರಣ್ಯ ಇಲಾಖೆ ಇರಿಸಿದ ಬೋನಿನಲ್ಲಿ ನಾಲ್ಕು ವರ್ಷದ ಗಂಡು ಚಿರತೆ ಸೆರೆಯಾಗಿದೆ.

ಸರಗೂರು ತಾಲ್ಲೂಕಿನ ಎನ್.ಬೆಳತ್ತೂರು ಹಳೆ ಗೇಟ್ ಬಳಿ ರೈತ ಯೋಗೇಶ್ ಎಂಬವರ ಜಮೀನಿನ ಬಳಿ ಕಳೆದ 20 ದಿನಗಳ ಹಿಂದೆ ಅರಣ್ಯ ಇಲಾಖೆಯವರು ಚಿರತೆ ಸೆರೆ ಹಿಡಿಯಲು ಬೋನನ್ನು ಇರಿಸಿದ್ದರು. ಮಂಗಳವಾರ ತಡರಾತ್ರಿ ಬೋನಿಗೆ ಭಾರೀ ಗಾತ್ರದ ಗಂಡು ಚಿರತೆ ಸೆರೆಯಾಗಿದೆ.

ಎನ್.ಬೆಳ್ತೂರು ಹಳೆ ಗೇಟ್ ಸಮೀಪ ಇರುವ ಜಮೀನುಗಳಲ್ಲಿ ಹಲವಾರು ತಿಂಗಳಿಂದ ಈ ಚಿರತೆ, ಹಸುಗಳ ಮೇಲೆ ದಾಳಿ ಮಾಡಿ ಸುಮಾರು 37 ಹಸುಗಳನ್ನು ಕೊಂದು ಹಾಕಿತ್ತು. ಈ ಸಂಬಂಧ ಈ ಭಾಗದ ರೈತರು ಚಿರತೆ ಸೆರೆ ಹಿಡಿಯಬೇಕೆಂದು ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆಯವರು ಬೋನನ್ನು ಇರಿಸಿದ್ದರು.

ಸೆರೆಯಾದ ಚಿರತೆಗೆ ಡಾ.ರಮೇಶ್ ಅವರು ಅರಿವಳಿಕೆ ನೀಡಿದ್ದಾರೆ. ಚಿರತೆಗೆ ರೇಡಿಯೊ ಕಾಲರ್ ಅಳವಡಿಸಿ, ಅರಣ್ಯಕ್ಕೆ ಬಿಟ್ಟಿದ್ದೇವೆ ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ.

ಇದೇ ಸಂದರ್ಭದಲ್ಲಿ ಎಸಿಎಫ್ ಮಧು, ಆರ್‌ಎಫ್‌ಒ ಸಿದ್ದರಾಜು, ಚಿರತೆ ಕಾರ್ಯಪಡೆ ಸಿಬ್ಬಂದಿಗಳು, ಅರಣ್ಯ ಸಿಬ್ಬಂದಿಗಳು, ಹಾಜರಿದ್ದರು.

Tags:
error: Content is protected !!