ಮೈಸೂರು : ಅರಣ್ಯ ಇಲಾಖೆ ಇರಿಸಿದ ಬೋನಿನಲ್ಲಿ ನಾಲ್ಕು ವರ್ಷದ ಗಂಡು ಚಿರತೆ ಸೆರೆಯಾಗಿದೆ.
ಸರಗೂರು ತಾಲ್ಲೂಕಿನ ಎನ್.ಬೆಳತ್ತೂರು ಹಳೆ ಗೇಟ್ ಬಳಿ ರೈತ ಯೋಗೇಶ್ ಎಂಬವರ ಜಮೀನಿನ ಬಳಿ ಕಳೆದ 20 ದಿನಗಳ ಹಿಂದೆ ಅರಣ್ಯ ಇಲಾಖೆಯವರು ಚಿರತೆ ಸೆರೆ ಹಿಡಿಯಲು ಬೋನನ್ನು ಇರಿಸಿದ್ದರು. ಮಂಗಳವಾರ ತಡರಾತ್ರಿ ಬೋನಿಗೆ ಭಾರೀ ಗಾತ್ರದ ಗಂಡು ಚಿರತೆ ಸೆರೆಯಾಗಿದೆ.
ಎನ್.ಬೆಳ್ತೂರು ಹಳೆ ಗೇಟ್ ಸಮೀಪ ಇರುವ ಜಮೀನುಗಳಲ್ಲಿ ಹಲವಾರು ತಿಂಗಳಿಂದ ಈ ಚಿರತೆ, ಹಸುಗಳ ಮೇಲೆ ದಾಳಿ ಮಾಡಿ ಸುಮಾರು 37 ಹಸುಗಳನ್ನು ಕೊಂದು ಹಾಕಿತ್ತು. ಈ ಸಂಬಂಧ ಈ ಭಾಗದ ರೈತರು ಚಿರತೆ ಸೆರೆ ಹಿಡಿಯಬೇಕೆಂದು ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆಯವರು ಬೋನನ್ನು ಇರಿಸಿದ್ದರು.
ಸೆರೆಯಾದ ಚಿರತೆಗೆ ಡಾ.ರಮೇಶ್ ಅವರು ಅರಿವಳಿಕೆ ನೀಡಿದ್ದಾರೆ. ಚಿರತೆಗೆ ರೇಡಿಯೊ ಕಾಲರ್ ಅಳವಡಿಸಿ, ಅರಣ್ಯಕ್ಕೆ ಬಿಟ್ಟಿದ್ದೇವೆ ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ.
ಇದೇ ಸಂದರ್ಭದಲ್ಲಿ ಎಸಿಎಫ್ ಮಧು, ಆರ್ಎಫ್ಒ ಸಿದ್ದರಾಜು, ಚಿರತೆ ಕಾರ್ಯಪಡೆ ಸಿಬ್ಬಂದಿಗಳು, ಅರಣ್ಯ ಸಿಬ್ಬಂದಿಗಳು, ಹಾಜರಿದ್ದರು.
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…
ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…
ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…
ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…
ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್ಕೌಂಟರ್ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…