ಮೈಸೂರು

ಎಚ್.ಡಿ.ಕೋಟೆಯಲ್ಲಿ ಮತ್ತೊಂದು ಚಿರತೆ ಸೆರೆ

ಎಚ್.ಡಿ.ಕೋಟೆ: ಕಳೆದ ನಾಲ್ಕೈದು ದಿನಗಳ ಹಿಂದೆಯಷ್ಟೇ ಚಿರತೆಯೊಂದು ಸೆರೆಯಾಗಿದ್ದ ಜಾಗದಲ್ಲೇ ಈಗ ಮತ್ತೊಂದು ಚಿರತೆ ಸೆರೆಯಾಗಿದ್ದು, ಜನತೆ ಮತ್ತಷ್ಟು ಆತಂಕಕ್ಕೀಡಾಗಿದ್ದಾರೆ.

ಎಚ್.ಡಿ.ಕೋಟೆ ಪಟ್ಟಣದ ಹೌಸಿಂಗ್‌ ಬೋರ್ಡ್‌ ಬಡಾವಣೆಯ ಸಮೀಪದಲ್ಲಿರುವ ಗುರುಮಲ್ಲು ಎಂಬುವವರ ಜಮೀನಿನಲ್ಲಿ ಚಿರತೆಯೊಂದು ಸೆರೆಯಾಗಿದ್ದು, ಜನತೆಗೆ ಕೊಂಚ ನೆಮ್ಮದಿ ಸಿಕ್ಕಂತಾಗಿದೆ.

ಕಳೆದ ಕೆಲ ದಿನಗಳಿಂದ ಸಾಕುಪ್ರಾಣಿಗಳ ಮೇಲೆ ದಾಳಿ ನಡೆಸುತ್ತಿದ್ದ ಚಿರತೆಯನ್ನು ಸೆರೆ ಹಿಡಿಯುವಂತೆ ರೈತರು ಅರಣ್ಯ ಇಲಾಖೆಗೆ ದೂರು ನೀಡಿದ್ದರು.

ರೈತರ ದೂರಿನ ಮೇರೆಗೆ ಅರಣ್ಯ ಇಲಾಖೆ ಅಧಿಕಾರಿಗಳು ಬೋನು ಅಳವಡಿಸಿದ್ದರು. ಇಂದು ಬೆಳಿಗ್ಗೆ ನಾಯಿಯನ್ನು ತಿನ್ನಲು ಬಂದು ಚಿರತೆ ಬೋನಿಗೆ ಸೆರೆಯಾಗಿದೆ.

ಈ ಜಮೀನಿನಲ್ಲಿ ಇನ್ನೂ ಮೂರ್ನಾಲ್ಕು ಚಿರತೆಗಳಿದ್ದು, ಅವುಗಳನ್ನು ಸಹ ಸೆರೆ ಹಿಡಿಯುವಂತೆ ರೈತರು ಒತ್ತಾಯಿಸಿದ್ದಾರೆ.

ಬೋನಿಗೆ ಸೆರೆಯಾದ ಚಿರತೆಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಅರಣ್ಯಕ್ಕೆ ಬಿಡಲು ನಿರ್ಧಾರ ಮಾಡಿದ್ದಾರೆ.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಎಂಡಿಎ ಬಜೆಟ್‌ | ಮೈಸೂರು ಅಭಿವೃದ್ಧಿಗೆ ಒತ್ತು ; 799.90 ಕೋಟಿ ರೂ. ಸಂಪನ್ಮೂಲ ನಿರೀಕ್ಷೆ

ಮೈಸೂರು : ಮೈಸೂರು ಅಭಿವೃದ್ಧಿ ಪ್ರಾಧಿಕಾರ (MDA) ಈ ಬಾರಿಯ ಆರ್ಥಿಕ ವರ್ಷದ ಬಜೆಟ್‌ನಲ್ಲಿ ನಗರದ ಸಮಗ್ರ ಅಭಿವೃದ್ಧಿಗೆ ತೀವ್ರ…

17 mins ago

ಮೈಸೂರು | 24 ಅಪರಾಧ ಪ್ರಕರಣ ಭೇಧಿಸಿದ ಪೊಲೀಸರು ; 20ಕ್ಕೂ ಹೆಚ್ಚು ಆರೋಪಿಗಳು ವಶಕ್ಕೆ

ಮೈಸೂರು : ಮನೆಗಳ್ಳತನ, ವಾಹನ ಕಳ್ಳತನ, ದರೋಡೆ ಸೇರಿದಂತೆ ಕಳೆದ ಎರಡು ತಿಂಗಳಲ್ಲಿ ಜಿಲ್ಲೆಯಲ್ಲಿ ನಡೆದಿದ್ದ 24 ಅಪರಾಧ ಪ್ರಕರಣಗಳನ್ನು…

1 hour ago

ʻಪಂಚ ಗ್ಯಾರಂಟಿʼಯಿಂದ ಮಹಿಳಾ ಸಬಲೀಕರಣ ಸಾಧ್ಯ : ಅರುಣ್ ಕುಮಾರ್

ಮೈಸೂರು : ರಾಜ್ಯ ಸರ್ಕಾರದ ʻಪಂಚ ಗ್ಯಾರಂಟಿʼ ಯೋಜನೆಗಳಿಂದ ಮಹಿಳಾ ಸಬಲೀಕರಣ ಸಾಧ್ಯವಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ…

1 hour ago

ಬೆಟ್ಟಳ್ಳಿ ಮಾರಮ್ಮನ ಜಾತ್ರೆ ; ಹನೂರಲ್ಲಿ 2 ದಿನ ಮದ್ಯ ಮಾರಾಟ ನಿಷೇಧ

ಹನೂರು : ಪಟ್ಟಣದಲ್ಲಿ ನಡೆಯಲಿರುವ ಶ್ರೀ ಬೆಟ್ಟಳ್ಳಿ ಮಾರಮ್ಮನ ಜಾತ್ರೆಯ ಪ್ರಯುಕ್ತ ಮುಂಜಾಗ್ರತಾ ಕ್ರಮವಾಗಿ ಎರಡು ದಿನಗಳ ಕಾಲ ಹನೂರು…

2 hours ago

ಕೆ.ಆರ್.ಆಸ್ಪತ್ರೆಯಲ್ಲಿ 100 ಹಾಸಿಗೆಯುಳ್ಳ ICU ಘಟಕ ಸ್ಥಾಪಿಸಿ : ಎಂಎಲ್‌ಸಿ ಕೆ.ಶಿವಕುಮಾರ್ ಮನವಿ

ಬೆಂಗಳೂರು : ಮಂಡ್ಯ, ಚಾಮರಾಜನಗರ, ಹೊಳೆನರಸೀಪುರದಿಂದ ಹೆಚ್ಚಿನ ಸಂಖ್ಯೆಯಲ್ಲಿ ರೋಗಿಗಳು ಬರುವ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ತುರ್ತು ಸೇವೆಗಳ ಅನುಕೂಲಕ್ಕಾಗಿ ಆಸ್ಪತ್ರೆಯಲ್ಲಿ…

2 hours ago

ಈವರೆಗೂ ಇರಾನ್‌ನಿಂದ 67 ಸಾವಿರ ಭಾರತೀಯರನ್ನು ಕರೆ ತಂದಿದ್ದೇವೆ: ಸಚಿವ ಜೈಶಂಕರ್‌

ನವದೆಹಲಿ: ಇರಾನ್-‌ಇಸ್ರೇಲ್‌ ಸಂಘರ್ಷದ ಹಿನ್ನೆಲೆಯಲ್ಲಿ ಇರಾನ್‌ನಲ್ಲಿ ಸಿಲುಕಿದ್ದ 67 ಸಾವಿರ ಭಾರತೀಯರನ್ನು ಕರೆ ತಂದಿದ್ದೇವೆ ಎಂದು ವಿದೇಶಾಂಗ ಸಚಿವ ಜೈಶಂಕರ್‌…

4 hours ago