ಮೆಟ್ಟಿಲುಗಳನ್ನು ಹತ್ತಿ ಓಡಾಡಿ, ಇಳಿದು ತೋಟಕ್ಕೆ ತೆರಳಿದ ಚಿರತೆ ; ಸ್ಥಳೀಯರಲ್ಲಿ ಆತಂಕ
ಎಚ್.ಡಿ.ಕೋಟೆ : ಕಾಡಂಚಿನ ಗ್ರಾಮಗಳಲ್ಲಿ ಕಾಣಿಸಿಕೊಳ್ಳುತ್ತಿದ್ದ ಚಿರತೆಗಳು ಈಗ ಪಟ್ಟಣ ಸಮೀಪವೇ ಕಾಣಿಸಿಕೊಳ್ಳುತ್ತಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.
ಪಟ್ಟಣ ಸಮೀಪದ ಬೆಳಗನಹಳ್ಳಿ ಗ್ರಾಮದ ರೈತ ಸೋಮಶೇಖರ್ ಗೌಡ ಅವರ ಮನೆಗೆ ಚಿರತೆ ಬಂದು ಮನೆಯ ಮೆಟ್ಟಿಲೇರಿ ರಾಜಾರೋಷವಾಗಿ ಓಡಾಡಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸ್ಥಳೀಯರಲ್ಲಿ ಭೀತಿ ಮೂಡಿಸಿದೆ.
ಶನಿವಾರ ರಾತ್ರಿ ತೋಟದ ಕಡೆಯಿಂದ ಬಂದ ಗಂಡು ಚಿರತೆ ಸೋಮಶೇಖರ್ ಗೌಡ ಅವರ ಮನೆಯ ಮೇಲೆ ಹೋಗಲು ನಿರ್ಮಿಸಿರುವ ಎರಡು ಅಂತಸ್ತಿನ ಮೆಟ್ಟಲುಗಳನ್ನು ಹತ್ತಿ , ನಂತರ ಇಳಿದು ಮತ್ತೆ ತೋಟದ ಕಡೆ ಹೋಗಿದೆ. ರಾತ್ರಿ ವೇಳೆ ಮನೆಯ ಸಮೀಪವೇ ಚಿರತೆ ಓಡಾಡಿರುವುದರಿಂದ ನಿವಾಸಿಗಳು ಆತಂಕಗೊಂಡು ಮನೆಯಿಂದ ಹೊರಗೆ ಬಂದಿಲ್ಲ.
ಇದನ್ನು ಓದಿ : ತಗ್ಗಲೂರು | ಬೋನಿಗೆ ಬಿದ್ದ ಚಿರತೆ ; ಗ್ರಾಮಸ್ಥರು ನಿರಾಳ
ಭಾನುವಾರ ಬೆಳಿಗ್ಗೆ ಎಂದಿನಂತೆ ಮನೆಯ ಮಾಲೀಕ ಸೋಮಶೇಖರ್ ಸಿಸಿ ಕ್ಯಾಮೆರಾವನ್ನು ಪರಿಶೀಲಿಸಿದಾಗ ಚಿರತೆ ರಾಜಾರೋಷವಾಗಿ ಮೆಟ್ಟಿಲುಗಳನ್ನು ಹತ್ತಿ ಮನೆಯ ಮೇಲ್ಭಾಗದಲ್ಲಿ ಓಡಾಡಿ ಕೆಳಗಿಳಿದಿರುವುದು ಕಂಡುಬಂದಿದೆ. ಇದರಿಂದ ರೈತರು ಮತ್ತು ಸಾರ್ವಜನಿಕರು ಮತ್ತಷ್ಟು ಆತಂಕಗೊಂಡಿದ್ದಾರೆ. ಚಿರತೆಯ ಚಲನವಲನಗಳನ್ನು ಗಮನಿಸಿದಾಗ, ಆ ವೇಳೆ ಮೇಕೆ, ನಾಯಿ, ಮನುಷ್ಯರು ಕಂಡಿದ್ದರೆ ಚಿರತೆ ದಾಳಿ ಮಾಡುತ್ತಿತ್ತು ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
ಈ ಭಾಗದಲ್ಲಿ ಚಿರತೆಗಳ ಹಾವಳಿ ಹೆಚ್ಚಾಗಿದ್ದು ಅರಣ್ಯ ಇಲಾಖೆಯವರು ಚಿರತೆಗಳನ್ನು ಸೆರೆಹಿಡಿಯಬೇಕು ಎಂದು ಆಗ್ರಹಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆಯವರು ಪರಿಶೀಲಿಸಿ ಚಿರತೆಯ ಸೆರೆಗೆ ಕಾರ್ಯಾಚರಣೆ ನಡೆಸಿ ಬೋನನ್ನು ಇಟ್ಟಿದ್ದಾರೆ. ಹಗಲು ಮತ್ತು ರಾತ್ರಿಯ ಸಂದರ್ಭದಲ್ಲಿ ರೈತರು ಮತ್ತು ಸಾರ್ವಜನಿಕರು ಎಚ್ಚರಿಕೆಯಿಂದ ಸಂಚರಿಸಬೇಕೆಂದು ಅರಣ್ಯ ಇಲಾಖೆಯವರು ಮನವಿ ಮಾಡಿದ್ದಾರೆ.
ಬೆಂಗಳೂರು : ಕೃಷಿ ಕ್ಷೇತ್ರದ ಅಭಿವೃದ್ಧಿ-ರೈತರ ಕಲ್ಯಾಣದಲ್ಲಿ ಕರ್ನಾಟಕ ದೇಶದಲ್ಲೆ ಅತಿ ಹೆಚ್ಚಿನ ಸಾಧನೆ ಮಾಡಿದ ರಾಜ್ಯವಾಗಿದ್ದು, ಬೆಳೆ ವಿಮೆಯಲ್ಲಿ…
ಮೈಸೂರು : ವಿದೇಶದಲ್ಲಿ ಉದ್ಯೋಗ ಕೊಡಿಸುತ್ತೇನೆ ಎಂದು ನಂಬಿಸಿ ಕೆರಳ ಮೂಲದ ಇಬ್ಬರು ದುಷ್ಕರ್ಮಿಗಳು ನಗರದ ವಿದ್ಯಾರ್ಥಿಯೋರ್ವನಿಗೆ 1.80 ಕೋಟಿ…
ಕೊಲಂಬೊ : ಐಸಿಸಿ ಪುರುಷರ ಟಿ20 ವಿಶ್ವಕಪ್ 2026ರ ಹತ್ತನೇ ಆವೃತ್ತಿ ನಾಳೆ (ಫೆಬ್ರವರಿ 7) ಭಾರತ ಮತ್ತು ಶ್ರೀಲಂಕಾ…
ಚಾಮರಾಜನಗರ : ಅರಣ್ಯ ಭೂಮಿಯಲ್ಲಿ ನಿಯಮಬಾಹಿರವಾಗಿ ರೆಸಾರ್ಟ್, ಹೋಂ ಸ್ಟೇ, ವಾಣಿಜ್ಯ ಚಟುವಟಿಕೆಗಳು ನಡೆಯುತ್ತಿದ್ದರೆ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದು…
ಬೆಂಗಳೂರು : ವಿಆರ್ ಗ್ರೂಪ್ನ ಸಂಸ್ಥಾಪಕ ಹಾಗೂ ರಿಯಲ್ ಎಸ್ಟೇಟ್ ಉದ್ಯಮಿ ಅರವಿಂದ್ ವೆಂಕಟೇಶ್ ರೆಡ್ಡಿ ಅವರಿಗೆ ಕೊಲೆ ಬೆದರಿಕೆ…
ಮಂಗಳೂರು : ಯತೀಂದ್ರ ಸಿದ್ದರಾಮಯ್ಯ ಅವರೇ ಈಗ ನಮ್ಮ ಹೈಕಮಾಂಡ್. ಅವರು ಹೇಳಿದ ಮೇಲೆ ಮುಗಿಯಿತು. ಈ ಬಗ್ಗೆ ನನಗೆ…