ಮೈಸೂರು

ಎಚ್‌.ಡಿ.ಕೋಟೆ | ಮನೆಗೆ ಬಂದ ಚಿರತೆ!

ಮೆಟ್ಟಿಲುಗಳನ್ನು ಹತ್ತಿ ಓಡಾಡಿ, ಇಳಿದು ತೋಟಕ್ಕೆ ತೆರಳಿದ ಚಿರತೆ ; ಸ್ಥಳೀಯರಲ್ಲಿ ಆತಂಕ

ಎಚ್.ಡಿ.ಕೋಟೆ : ಕಾಡಂಚಿನ ಗ್ರಾಮಗಳಲ್ಲಿ ಕಾಣಿಸಿಕೊಳ್ಳುತ್ತಿದ್ದ ಚಿರತೆಗಳು ಈಗ ಪಟ್ಟಣ ಸಮೀಪವೇ ಕಾಣಿಸಿಕೊಳ್ಳುತ್ತಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.

ಪಟ್ಟಣ ಸಮೀಪದ ಬೆಳಗನಹಳ್ಳಿ ಗ್ರಾಮದ ರೈತ ಸೋಮಶೇಖರ್ ಗೌಡ ಅವರ ಮನೆಗೆ ಚಿರತೆ ಬಂದು ಮನೆಯ ಮೆಟ್ಟಿಲೇರಿ ರಾಜಾರೋಷವಾಗಿ ಓಡಾಡಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸ್ಥಳೀಯರಲ್ಲಿ ಭೀತಿ ಮೂಡಿಸಿದೆ.

ಶನಿವಾರ ರಾತ್ರಿ ತೋಟದ ಕಡೆಯಿಂದ ಬಂದ ಗಂಡು ಚಿರತೆ ಸೋಮಶೇಖರ್ ಗೌಡ ಅವರ ಮನೆಯ ಮೇಲೆ ಹೋಗಲು ನಿರ್ಮಿಸಿರುವ ಎರಡು ಅಂತಸ್ತಿನ ಮೆಟ್ಟಲುಗಳನ್ನು ಹತ್ತಿ , ನಂತರ ಇಳಿದು ಮತ್ತೆ ತೋಟದ ಕಡೆ ಹೋಗಿದೆ. ರಾತ್ರಿ ವೇಳೆ ಮನೆಯ ಸಮೀಪವೇ ಚಿರತೆ ಓಡಾಡಿರುವುದರಿಂದ ನಿವಾಸಿಗಳು ಆತಂಕಗೊಂಡು ಮನೆಯಿಂದ ಹೊರಗೆ ಬಂದಿಲ್ಲ.

ಇದನ್ನು ಓದಿ : ತಗ್ಗಲೂರು | ಬೋನಿಗೆ ಬಿದ್ದ ಚಿರತೆ ; ಗ್ರಾಮಸ್ಥರು ನಿರಾಳ

ಭಾನುವಾರ ಬೆಳಿಗ್ಗೆ ಎಂದಿನಂತೆ ಮನೆಯ ಮಾಲೀಕ ಸೋಮಶೇಖರ್ ಸಿಸಿ ಕ್ಯಾಮೆರಾವನ್ನು ಪರಿಶೀಲಿಸಿದಾಗ ಚಿರತೆ ರಾಜಾರೋಷವಾಗಿ ಮೆಟ್ಟಿಲುಗಳನ್ನು ಹತ್ತಿ ಮನೆಯ ಮೇಲ್ಭಾಗದಲ್ಲಿ ಓಡಾಡಿ ಕೆಳಗಿಳಿದಿರುವುದು ಕಂಡುಬಂದಿದೆ. ಇದರಿಂದ ರೈತರು ಮತ್ತು ಸಾರ್ವಜನಿಕರು ಮತ್ತಷ್ಟು ಆತಂಕಗೊಂಡಿದ್ದಾರೆ. ಚಿರತೆಯ ಚಲನವಲನಗಳನ್ನು ಗಮನಿಸಿದಾಗ, ಆ ವೇಳೆ ಮೇಕೆ, ನಾಯಿ, ಮನುಷ್ಯರು ಕಂಡಿದ್ದರೆ ಚಿರತೆ ದಾಳಿ ಮಾಡುತ್ತಿತ್ತು ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಈ ಭಾಗದಲ್ಲಿ ಚಿರತೆಗಳ ಹಾವಳಿ ಹೆಚ್ಚಾಗಿದ್ದು ಅರಣ್ಯ ಇಲಾಖೆಯವರು ಚಿರತೆಗಳನ್ನು ಸೆರೆಹಿಡಿಯಬೇಕು ಎಂದು ಆಗ್ರಹಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆಯವರು ಪರಿಶೀಲಿಸಿ ಚಿರತೆಯ ಸೆರೆಗೆ ಕಾರ್ಯಾಚರಣೆ ನಡೆಸಿ ಬೋನನ್ನು ಇಟ್ಟಿದ್ದಾರೆ. ಹಗಲು ಮತ್ತು ರಾತ್ರಿಯ ಸಂದರ್ಭದಲ್ಲಿ ರೈತರು ಮತ್ತು ಸಾರ್ವಜನಿಕರು ಎಚ್ಚರಿಕೆಯಿಂದ ಸಂಚರಿಸಬೇಕೆಂದು ಅರಣ್ಯ ಇಲಾಖೆಯವರು ಮನವಿ ಮಾಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಚಿರಕನಹಳ್ಳಿ ; ಬೋನಿಗೆ ಬಿದ್ದ ಹುಲಿ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…

9 hours ago

ವೆನಿಜುವೆಲಾ ಭೂಕಂಪ ; ಮೃತರ ಸಂಖ್ಯೆ 235ಕ್ಕೆ ಏರಿಕೆ

ಮುಂದುವರಿದ ರಕ್ಷಣಾ ಕಾರ್ಯಾಚರಣೆ ವೆನಿಜುವೆಲಾ : ವೆನಿಜುವೆಲಾದ ಉತ್ತರ ಭಾಗದಲ್ಲಿ ಬುಧವಾರ ಸಂಜೆ ಸಂಭವಿಸಿದ ಸತತ ಎರಡು ಪ್ರಬಲ ಭೂಕಂಪಗಳ…

10 hours ago

ಡಿಕೆಶಿ ಜೊತೆಗಿನ ಬಾಂಧ್ಯವ : ಧರ್ಮಸ್ಥಳದಲ್ಲಿ ವಿಜಯೇಂದ್ರ ಹೇಳಿದಿಷ್ಟು

ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ…

12 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 26, ಶುಕ್ರವಾರ  

14 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಕನ್ನಡಕ್ಕೊಂದು ಒಟಿಟಿ, ʼಗರುಡ ಪುರಾಣʼ ಇತ್ಯಾದಿ

‘ವೆನ್ ಯು ವಾಂಟ್ ಟು ಡು ಸಮ್‌ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್‌ಇಟ್’ ಇದು ಅತ್ಯಂತ ಪ್ರಚಲಿತವಿರುವ…

14 hours ago

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…

1 day ago