ಮೈಸೂರು

ಎಚ್‌.ಡಿ.ಕೋಟೆ | ಮನೆಗೆ ಬಂದ ಚಿರತೆ!

ಮೆಟ್ಟಿಲುಗಳನ್ನು ಹತ್ತಿ ಓಡಾಡಿ, ಇಳಿದು ತೋಟಕ್ಕೆ ತೆರಳಿದ ಚಿರತೆ ; ಸ್ಥಳೀಯರಲ್ಲಿ ಆತಂಕ

ಎಚ್.ಡಿ.ಕೋಟೆ : ಕಾಡಂಚಿನ ಗ್ರಾಮಗಳಲ್ಲಿ ಕಾಣಿಸಿಕೊಳ್ಳುತ್ತಿದ್ದ ಚಿರತೆಗಳು ಈಗ ಪಟ್ಟಣ ಸಮೀಪವೇ ಕಾಣಿಸಿಕೊಳ್ಳುತ್ತಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.

ಪಟ್ಟಣ ಸಮೀಪದ ಬೆಳಗನಹಳ್ಳಿ ಗ್ರಾಮದ ರೈತ ಸೋಮಶೇಖರ್ ಗೌಡ ಅವರ ಮನೆಗೆ ಚಿರತೆ ಬಂದು ಮನೆಯ ಮೆಟ್ಟಿಲೇರಿ ರಾಜಾರೋಷವಾಗಿ ಓಡಾಡಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸ್ಥಳೀಯರಲ್ಲಿ ಭೀತಿ ಮೂಡಿಸಿದೆ.

ಶನಿವಾರ ರಾತ್ರಿ ತೋಟದ ಕಡೆಯಿಂದ ಬಂದ ಗಂಡು ಚಿರತೆ ಸೋಮಶೇಖರ್ ಗೌಡ ಅವರ ಮನೆಯ ಮೇಲೆ ಹೋಗಲು ನಿರ್ಮಿಸಿರುವ ಎರಡು ಅಂತಸ್ತಿನ ಮೆಟ್ಟಲುಗಳನ್ನು ಹತ್ತಿ , ನಂತರ ಇಳಿದು ಮತ್ತೆ ತೋಟದ ಕಡೆ ಹೋಗಿದೆ. ರಾತ್ರಿ ವೇಳೆ ಮನೆಯ ಸಮೀಪವೇ ಚಿರತೆ ಓಡಾಡಿರುವುದರಿಂದ ನಿವಾಸಿಗಳು ಆತಂಕಗೊಂಡು ಮನೆಯಿಂದ ಹೊರಗೆ ಬಂದಿಲ್ಲ.

ಇದನ್ನು ಓದಿ : ತಗ್ಗಲೂರು | ಬೋನಿಗೆ ಬಿದ್ದ ಚಿರತೆ ; ಗ್ರಾಮಸ್ಥರು ನಿರಾಳ

ಭಾನುವಾರ ಬೆಳಿಗ್ಗೆ ಎಂದಿನಂತೆ ಮನೆಯ ಮಾಲೀಕ ಸೋಮಶೇಖರ್ ಸಿಸಿ ಕ್ಯಾಮೆರಾವನ್ನು ಪರಿಶೀಲಿಸಿದಾಗ ಚಿರತೆ ರಾಜಾರೋಷವಾಗಿ ಮೆಟ್ಟಿಲುಗಳನ್ನು ಹತ್ತಿ ಮನೆಯ ಮೇಲ್ಭಾಗದಲ್ಲಿ ಓಡಾಡಿ ಕೆಳಗಿಳಿದಿರುವುದು ಕಂಡುಬಂದಿದೆ. ಇದರಿಂದ ರೈತರು ಮತ್ತು ಸಾರ್ವಜನಿಕರು ಮತ್ತಷ್ಟು ಆತಂಕಗೊಂಡಿದ್ದಾರೆ. ಚಿರತೆಯ ಚಲನವಲನಗಳನ್ನು ಗಮನಿಸಿದಾಗ, ಆ ವೇಳೆ ಮೇಕೆ, ನಾಯಿ, ಮನುಷ್ಯರು ಕಂಡಿದ್ದರೆ ಚಿರತೆ ದಾಳಿ ಮಾಡುತ್ತಿತ್ತು ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಈ ಭಾಗದಲ್ಲಿ ಚಿರತೆಗಳ ಹಾವಳಿ ಹೆಚ್ಚಾಗಿದ್ದು ಅರಣ್ಯ ಇಲಾಖೆಯವರು ಚಿರತೆಗಳನ್ನು ಸೆರೆಹಿಡಿಯಬೇಕು ಎಂದು ಆಗ್ರಹಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆಯವರು ಪರಿಶೀಲಿಸಿ ಚಿರತೆಯ ಸೆರೆಗೆ ಕಾರ್ಯಾಚರಣೆ ನಡೆಸಿ ಬೋನನ್ನು ಇಟ್ಟಿದ್ದಾರೆ. ಹಗಲು ಮತ್ತು ರಾತ್ರಿಯ ಸಂದರ್ಭದಲ್ಲಿ ರೈತರು ಮತ್ತು ಸಾರ್ವಜನಿಕರು ಎಚ್ಚರಿಕೆಯಿಂದ ಸಂಚರಿಸಬೇಕೆಂದು ಅರಣ್ಯ ಇಲಾಖೆಯವರು ಮನವಿ ಮಾಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಶೂಟೌಟ್ ಪ್ರಕರಣ | ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆ : ಸಿಎಂ ಡಿ.ಕೆ.ಶಿವಕುಮಾರ್

ವಸ್ತುಗಳು, ಬಂದೂಕು ಸೇರಿ ಸಾಕ್ಷಿಗಳು ಲಭ್ಯ ಬೆಂಗಳೂರು : ಹನೂರಿನಲ್ಲಿ ನಡೆದಿರುವ ಶೂಟೌಟ್ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ಆದೇಶ…

2 hours ago

ಮುಂದಿನ ಆಗಸ್ಟ್‌ ಒಳಗೆ ಮೇಕೆದಾಟುಗೆ ಶಂಕುಸ್ಥಾಪನೆ: ಸಚಿವ ಚಲುವರಾಯಸ್ವಾಮಿ

ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…

6 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ

ಮೈಸೂರು: ಮೂವರು ಬೇಟೆಗಾರರ ಎನ್‌ಕೌಂಟರ್‌ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…

7 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಚಿವ ಪುಟ್ಟರಂಗಶೆಟ್ಟಿ ಪ್ರತಿಕ್ರಿಯೆ

ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…

8 hours ago

ಕಾಡಿನಲ್ಲಿ ಗುಂಡಿನ ಮೊರೆತ: ಮೂವರು ಸ್ಥಳದಲ್ಲೇ ಸಾವು- ಉದ್ರಿಕ್ತರಿಂದ ಕಚೇರಿ ಪೀಠೋಪಕರಣ ಧ್ವಂಸ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…

8 hours ago

ಕಾವೇರಿ ಅಭಯಾರಣ್ಯದಲ್ಲಿ ಎನ್‌ಕೌಂಟರ್: ಅಕ್ರಮ ಬೇಟೆ ವೇಳೆ ಗುಂಡಿನ ದಾಳಿ, 3 ಮಂದಿ ಮೃತ್ಯು

ಮಹಾದೇಶ್‌ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…

8 hours ago