ಮೈಸೂರು

ಚಿರತೆ-ಆನೆ ಕಾರ್ಯಪಡೆ ಸಿಬ್ಬಂದಿಗಳಿಗೆ ಎರಡನೇ ಹಂತದ ಕಾರ್ಯಗಾರ !

ಮೈಸೂರು : ಜಿಲ್ಲೆಯ ಸುತ್ತಾಮುತ್ತಾ ಹೆಚ್ಚಾಗುತ್ತಿರುವ ಚಿರತೆ, ಆನೆ ಹಾಗೂ ವನ್ಯಪ್ರಾಣಿಗಳ ಉಪಟಳ ನಿಯಂತ್ರಣಕ್ಕಾಗಿ ಮೈಸೂರು ವ್ಯಾಪ್ತಿಯಲ್ಲಿ ಚಿರತೆ ಕಾರ್ಯಪಡೆಯನ್ನು ಹಾಗೂ ಆನೆ ಕಾರ್ಯಪಡೆಯನ್ನು ರಚಿಸಲಾಗಿರುತ್ತದೆ ಎಂದು ಭಾ.ಅ.ಸೇ, ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮನೋಜ್ ಆರ್ ತಿಳಿಸಿದರು.

ನಗರದ ಇಲವಾಲದಲ್ಲಿರುವ ಅರಣ್ಯ ರಕ್ಷಕರ ತರಬೇತಿ ಕೇಂದ್ರಲ್ಲಿ ಏರ್ಪಡಿಸಿದ್ದ ಚಿರತೆ ಮತ್ತು ಆನೆಗಳನ್ನು ಸಂರಕ್ಷಣೆ ಮತ್ತು ನಿರ್ವಹಣೆ ಮಾಡುವ ಬಗ್ಗೆ, ಚಿರತೆ ಮತ್ತು ಆನೆ ಕಾರ್ಯಪಡೆಯಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿಗಳಿಗೆ 2ನೇ ಕಾರ್ಯಗಾರದಲ್ಲಿ ಮಾತನಾಡಿದ ಅವರು, ಸಿಬ್ಬಂದಿಗಳಿಗೆ ಮಾನವ-ವನ್ಯಪ್ರಾಣಿ ಸಂಘರ್ಷ ನಿಯಂತ್ರಣದಲ್ಲಿರುವ ಸವಾಲುಗಳು, ಸಿಬ್ಬಂದಿಗಳ ಕರ್ತವ್ಯ ಜವಾಬ್ದಾರಿ, ಶಿಸ್ತು, Team work ಮತ್ತು ಕಾರ್ಯಚರಣೆಗಳ ವೇಳೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಮಾಹಿತಿಗಳನ್ನು ನೀಡಿದರು.

ಅಲ್ಲದೇ ಕಾರ್ಯಗಾರಕ್ಕೆ ವಿಶೇಷ ಆಹ್ವಾನಿತರಾಗಿ ಆಗಮಿಸಿದ್ದ ಡಾ. ಚಂದ್ರಶೇಖರ್, Cauvery Multi Speciality Hospital ರವರು ಹೃದಯದ ಆರೋಗ್ಯ ಮತ್ತು ಜೀವನ ನಿರ್ವಹಣೆ ಬಗ್ಗೆ ಮಾಹಿತಿಗಳನ್ನು ನೀಡಿದರು.

ಕಾರ್ಯಗಾರದಲ್ಲಿ ಚಿರತೆ ಕಾರ್ಯಪಡೆಯ 45 ಸಂಖ್ಯೆ, ಆನೆ ಕಾರ್ಯಪಡೆಯ 32 ಸಂಖ್ಯೆ ಹೊರಗುತ್ತಿಗೆ ನೌಕರರು ಸೇರಿದಂತೆ 20 ಸಂಖ್ಯೆ ಮಂಚೂಣಿ ಸಿಬ್ಬಂದಿಗಳು ಭಾಗವಹಿಸಿದ್ದರು.

ಇದೇ ಸಂದರ್ಭದಲ್ಲಿ  ಆನೆ ಮತ್ತು ಚಿರತೆಗಳಿಗೆ ಸಂಬಂದಿಸಿದಂತೆ ಕ್ಷೇತ್ರಕಾರ್ಯ ನಿರ್ವಹಿಸುತ್ತಿರುವ ವಿವಿಧ ಸಂಪನ್ಮೂಲ ವ್ಯಕ್ತಿಗಳು ಮಾಹಿತಿ ನೀಡಿದರು ಹಾಗೂ Mock Drill ನಡೆಸಿದರು.

ಕಾರ್ಯಗಾರದ ಅಂತಿಮ ಘಟ್ಟದಲ್ಲಿ ಶ್ರೀ ಮಹಾದೇವಯ್ಯ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳು, ಹುಣಸೂರು ವಿಭಾಗ, ಹುಣಸೂರು ಇವರು ವಂದರ್ನಾಪಣೆ ಮಾಡುವ ಮೂಲಕ ಕಾರ್ಯಗಾರವನ್ನು ಮುಕ್ತಾಯಗೊಳಿಸಲಾಯಿತು.

ಕಾರ್ಯಗಾರದಲ್ಲಿ ಡಾ.ಮಾಲತಿಪ್ರಿಯಾ ಎಂ. ಭಾ.ಅ.ಸೇ, ಅರಣ್ಯ ಸಂರಕ್ಷಣಾಧಿಕಾರಿಗಳು, ಮೈಸೂರು ವೃತ್ತ, ರವರು, ಡಾ. ಬಸವರಾಜ ಕೆ.ಎನ್.ಭಾ.ಅ.ಸೇ, ಉಪ ಅರಣ್ಯ ಸಂರಕ್ಷಣಾಧಿಕಾರಿಗಳು, ಮೈಸೂರು ವಿಬಾಗ,, ಶ್ರೀಮತಿ ಸೀಮಾ ಪಿ.ಎ. ಭಾ.ಅ.ಸೇ., ಹುಣಸೂರು ವಿಭಾಗ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳು ಹಾಗೂ ಇತರೆ ಸಿಬ್ಬಂದಿಗಳು ಭಾಗವಹಿಸಿದ್ದರು.

 

andolanait

Recent Posts

ಅಧಿವೇಶನವನ್ನು ಒಂದು ವಾರ ವಿಸ್ತರಿಸಲು ಮನವಿ : ಸ್ಪೀಕರ್‌ಗೆ ಪತ್ರ ಬರೆದ ಪ್ರತಿಪಕ್ಷ ನಾಯಕ ಆರ್‌.ಅಶೋಕ

ಬೆಳಗಾವಿ : ಉತ್ತರ ಕರ್ನಾಟಕದ ಸಮಸ್ಯೆ, ಕಾನೂನು ಸುವ್ಯವಸ್ಥೆಯಲ್ಲಿ ಲೋಪ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಇನ್ನೂ ದೀರ್ಘ ಚರ್ಚೆ…

12 hours ago

ಮೊಟ್ಟೆಯಲ್ಲಿ ಕ್ಯಾನ್ಸರ್‌ ಅಂಶ : ವರದಿ ನೀಡಲು ಸೂಚಿಸಿದ ಆರೋಗ್ಯ ಇಲಾಖೆ

ಬೆಳಗಾವಿ : ಮೊಟ್ಟೆಯಲ್ಲಿ ಕ್ಯಾನ್ಸರ್‌ಕಾರಕ ಅಂಶವಿದೆ ಎಂಬ ವಿಚಾರದ ಹಿನ್ನೆಲೆಯಲ್ಲಿ ಪರೀಕ್ಷೆ ಮಾಡಿ ವರದಿ ನೀಡಲು ಇಲಾಖೆಗೆ ಸೂಚಿಸಲಾಗಿದೆ ಎಂದು…

13 hours ago

ಹವಾಮಾನ ವೈಪರೀತ್ಯ : ವಿಮಾನದಲ್ಲೇ ಸಿಲುಕಿದ್ದ ಕರ್ನಾಟಕದ 21 ಶಾಸಕರು ಮತ್ತು 7 ಸಚಿವರು

ಹೊಸದಿಲ್ಲಿ : ದಿಲ್ಲಿಯಲ್ಲಿ ಉಂಟಾದ ದಟ್ಟವಾದ ಹೊಗೆ ಹಾಗೂ ತೀವ್ರ ಹವಾಮಾನ ವೈಪರೀತ್ಯದಿಂದಾಗಿ ಕರ್ನಾಟಕದ 21 ಶಾಸಕರು ಮತ್ತು 7…

14 hours ago

ನ್ಯಾಷನಲ್‌ ಹೆರಾಲ್ಡ್‌ ಪ್ರಕರಣ : ದಿಲ್ಲಿ ಪೊಲೀಸರ ನೋಟಿಸ್‌ಗೆ ಕಾಲಾವಕಾಶ ಕೋರುವೆ ಎಂದ ಡಿಕೆಶಿ

ಹೊಸದಿಲ್ಲಿ : ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ನೋಟೀಸ್ʼಗೆ ಉತ್ತರ ನೀಡಲು ಕಾಲಾವಕಾಶ ಕೋರುವೆ ಎಂದು ಡಿಸಿಎಂ…

14 hours ago

ಆಕಸ್ಮಿಕ ಬೆಂಕಿ : ಯಮಹಾ ಬೈಕ್‌ ಸಾಗಿಸುತ್ತಿದ್ದ ಲಾರಿ ಭಸ್ಮ : ಸುಟ್ಟು ಕರಕಲಾದ 40ಬೈಕ್‌ಗಳು

ಬಳ್ಳಾರಿ : ನಗರದಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿ ಲಾರಿಯಲ್ಲಿ ಸಾಗಿಸುತ್ತಿದ್ದ ಯಮಹಾ ಕಂಪನಿಯ 40 ಬೈಕ್‌ಗಳು ಸಂಪೂರ್ಣವಾಗಿ ಸುಟ್ಟು…

14 hours ago

ಆಸ್ಟ್ರೇಲಿಯಾದಲ್ಲಿ ಉಗ್ರರ ದಾಳಿ : ದಿಲ್ಲಿ, ಬೆಂಗಳೂರಿನಲ್ಲಿ ಹೈ ಅಲರ್ಟ್‌

ಬೆಂಗಳೂರು : ಆಸ್ಪ್ರೇಲಿಯಾದ ಬೀಚ್‌ನಲ್ಲಿ ಭಾನುವಾರ ಮಧ್ಯಾಹ್ನ ಭೀಕರ ಗುಂಡಿನ ದಾಳಿ ನಡೆದಿದ್ದು, ಇಬ್ಬರು ಪೊಲೀಸರು ಸೇರಿದಂತೆ 12 ಮಂದಿ…

16 hours ago