ಮೈಸೂರು

ಚಿರತೆ-ಆನೆ ಕಾರ್ಯಪಡೆ ಸಿಬ್ಬಂದಿಗಳಿಗೆ ಎರಡನೇ ಹಂತದ ಕಾರ್ಯಗಾರ !

ಮೈಸೂರು : ಜಿಲ್ಲೆಯ ಸುತ್ತಾಮುತ್ತಾ ಹೆಚ್ಚಾಗುತ್ತಿರುವ ಚಿರತೆ, ಆನೆ ಹಾಗೂ ವನ್ಯಪ್ರಾಣಿಗಳ ಉಪಟಳ ನಿಯಂತ್ರಣಕ್ಕಾಗಿ ಮೈಸೂರು ವ್ಯಾಪ್ತಿಯಲ್ಲಿ ಚಿರತೆ ಕಾರ್ಯಪಡೆಯನ್ನು ಹಾಗೂ ಆನೆ ಕಾರ್ಯಪಡೆಯನ್ನು ರಚಿಸಲಾಗಿರುತ್ತದೆ ಎಂದು ಭಾ.ಅ.ಸೇ, ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮನೋಜ್ ಆರ್ ತಿಳಿಸಿದರು.

ನಗರದ ಇಲವಾಲದಲ್ಲಿರುವ ಅರಣ್ಯ ರಕ್ಷಕರ ತರಬೇತಿ ಕೇಂದ್ರಲ್ಲಿ ಏರ್ಪಡಿಸಿದ್ದ ಚಿರತೆ ಮತ್ತು ಆನೆಗಳನ್ನು ಸಂರಕ್ಷಣೆ ಮತ್ತು ನಿರ್ವಹಣೆ ಮಾಡುವ ಬಗ್ಗೆ, ಚಿರತೆ ಮತ್ತು ಆನೆ ಕಾರ್ಯಪಡೆಯಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿಗಳಿಗೆ 2ನೇ ಕಾರ್ಯಗಾರದಲ್ಲಿ ಮಾತನಾಡಿದ ಅವರು, ಸಿಬ್ಬಂದಿಗಳಿಗೆ ಮಾನವ-ವನ್ಯಪ್ರಾಣಿ ಸಂಘರ್ಷ ನಿಯಂತ್ರಣದಲ್ಲಿರುವ ಸವಾಲುಗಳು, ಸಿಬ್ಬಂದಿಗಳ ಕರ್ತವ್ಯ ಜವಾಬ್ದಾರಿ, ಶಿಸ್ತು, Team work ಮತ್ತು ಕಾರ್ಯಚರಣೆಗಳ ವೇಳೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಮಾಹಿತಿಗಳನ್ನು ನೀಡಿದರು.

ಅಲ್ಲದೇ ಕಾರ್ಯಗಾರಕ್ಕೆ ವಿಶೇಷ ಆಹ್ವಾನಿತರಾಗಿ ಆಗಮಿಸಿದ್ದ ಡಾ. ಚಂದ್ರಶೇಖರ್, Cauvery Multi Speciality Hospital ರವರು ಹೃದಯದ ಆರೋಗ್ಯ ಮತ್ತು ಜೀವನ ನಿರ್ವಹಣೆ ಬಗ್ಗೆ ಮಾಹಿತಿಗಳನ್ನು ನೀಡಿದರು.

ಕಾರ್ಯಗಾರದಲ್ಲಿ ಚಿರತೆ ಕಾರ್ಯಪಡೆಯ 45 ಸಂಖ್ಯೆ, ಆನೆ ಕಾರ್ಯಪಡೆಯ 32 ಸಂಖ್ಯೆ ಹೊರಗುತ್ತಿಗೆ ನೌಕರರು ಸೇರಿದಂತೆ 20 ಸಂಖ್ಯೆ ಮಂಚೂಣಿ ಸಿಬ್ಬಂದಿಗಳು ಭಾಗವಹಿಸಿದ್ದರು.

ಇದೇ ಸಂದರ್ಭದಲ್ಲಿ  ಆನೆ ಮತ್ತು ಚಿರತೆಗಳಿಗೆ ಸಂಬಂದಿಸಿದಂತೆ ಕ್ಷೇತ್ರಕಾರ್ಯ ನಿರ್ವಹಿಸುತ್ತಿರುವ ವಿವಿಧ ಸಂಪನ್ಮೂಲ ವ್ಯಕ್ತಿಗಳು ಮಾಹಿತಿ ನೀಡಿದರು ಹಾಗೂ Mock Drill ನಡೆಸಿದರು.

ಕಾರ್ಯಗಾರದ ಅಂತಿಮ ಘಟ್ಟದಲ್ಲಿ ಶ್ರೀ ಮಹಾದೇವಯ್ಯ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳು, ಹುಣಸೂರು ವಿಭಾಗ, ಹುಣಸೂರು ಇವರು ವಂದರ್ನಾಪಣೆ ಮಾಡುವ ಮೂಲಕ ಕಾರ್ಯಗಾರವನ್ನು ಮುಕ್ತಾಯಗೊಳಿಸಲಾಯಿತು.

ಕಾರ್ಯಗಾರದಲ್ಲಿ ಡಾ.ಮಾಲತಿಪ್ರಿಯಾ ಎಂ. ಭಾ.ಅ.ಸೇ, ಅರಣ್ಯ ಸಂರಕ್ಷಣಾಧಿಕಾರಿಗಳು, ಮೈಸೂರು ವೃತ್ತ, ರವರು, ಡಾ. ಬಸವರಾಜ ಕೆ.ಎನ್.ಭಾ.ಅ.ಸೇ, ಉಪ ಅರಣ್ಯ ಸಂರಕ್ಷಣಾಧಿಕಾರಿಗಳು, ಮೈಸೂರು ವಿಬಾಗ,, ಶ್ರೀಮತಿ ಸೀಮಾ ಪಿ.ಎ. ಭಾ.ಅ.ಸೇ., ಹುಣಸೂರು ವಿಭಾಗ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳು ಹಾಗೂ ಇತರೆ ಸಿಬ್ಬಂದಿಗಳು ಭಾಗವಹಿಸಿದ್ದರು.

 

andolanait

Recent Posts

ರಸ್ತೆಗಳ ದಾರುಣತೆ: ಬೇಕಿದೆ ಇಲಾಖೆಗಳ ಸಮನ್ವಯತೆ

ಶ್ರೇಯಸ್ ದೇವನೂರು ಮಾದರಿ ಮೈಸೂರು ಉಳಿವಿಗೆ ಒಂದು ಸಮಗ್ರ ಸಭೆ, ದೀರ್ಘಕಾಲಿಕ ಯೋಜನೆ ಅಗತ್ಯ ಮೈಸೂರು - ಅರಮನೆಗಳ ನಗರ,…

2 hours ago

ಕೊಡಗು ‘ಜಿಲ್ಲೆಯಲ್ಲಿ ಜಲ್‌ಜೀವನ್ ಮಿಷನ್ ಯೋಜನೆ ಪ್ರಗತಿ’

ಪುನೀತ್ ಮಡಿಕೇರಿ ೪೫೭ ಕಾಮಗಾರಿಗಳ ಪೈಕಿ ೩೬೯ ಕಾಮಗಾರಿಗಳು ಪೂರ್ಣ ಮಡಿಕೇರಿ: ಕುಡಿಯುವ ನೀರಿನ ಗೃಹ ನಳ ನೀರು ಸಂಪರ್ಕ…

2 hours ago

ಪ್ರವಾಸಿಗರ ಆಕರ್ಷಣೆಗೆ ವರುಣ ಕೆರೆಗೆ ನವಸ್ಪರ್ಶ

ಕೆ.ಬಿ.ರಮೇಶನಾಯಕ ೧೫ ಕೋಟಿ ರೂಪಾಯಿ ವೆಚ್ಚದಲ್ಲಿ ಕೆರೆ ಸೌಂದರ್ಯೀಕರಣ  ಪ್ರವಾಸಿಗರ ಕಣ್ಮನ ಸೆಳೆಯಲು ಹತ್ತು ಹಲವು ಮನರಂಜನಾ ಚಟುವಟಿಕೆಗಳು ಮೈಸೂರಿನಿಂದ…

2 hours ago

ಮೈಸೂರು ಜಿಲ್ಲೆಯಲ್ಲಿ ಪಶು ಪಾಲನೆಗೆ ಪಶು ವೈದ್ಯರ ಬರ

ಹೆಚ್.ಎಸ್. ದಿನೇಶ್‌ಕುಮಾರ್ ಮೈಸೂರು ಜಿಲ್ಲೆಯಲ್ಲಿ ೨೭ ಮಂದಿ ಪಶು ವೈದ್ಯರ ಹುದ್ದೆ ಖಾಲಿ ಮೈಸೂರು: ಹಸು, ಎಮ್ಮೆ, ಕುರಿಗಳಂತಹ ಪ್ರಾಣಿಗಳು…

2 hours ago

ಸಿದ್ದಾಪುರ | ಕಾಡಾನೆ ದಾಳಿಗೆ ಓರ್ವ ಗಂಭೀರ

ಸಿದ್ದಾಪುರ : ಕಾಡಾನೆ ದಾಳಿಗೆ ಸಿಲುಕಿ ಬೆಳೆಗಾರರೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವಾಲ್ಕೂರು ತ್ಯಾಗತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಭ್ಯತ್‌ಮಂಗಲ…

12 hours ago