Mysore
23
broken clouds

Social Media

ಮಂಗಳವಾರ, 28 ಏಪ್ರಿಲ 2026
Light
Dark

ಶಿಕ್ಷಕರ ನೇಮಕಾತಿ ಸಿಬಿಐ, ಇಡಿ ತನಿಖೆಯಾಗಲಿ

ಮೈಸೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ ಶಿಕ್ಷಕರ ನೇಮಕಾತಿಯಲ್ಲಿ ಅಕ್ರಮವೆಸಗಿದ್ದಾರೆ ಎಂದು ಆರೋಪ ಮಾಡಿದ್ದಾರೆ. ಬೊಮ್ಮಾಯಿ ಅವರಿಗೆ ರಾಜಕೀಯ ಇಚ್ಛಾಸಕ್ತಿ ಇದ್ದರೆ ಸಿಬಿಐ ಅಥವಾ ಇಡಿಯಿಂದ ಅಕ್ರಮದ ತನಿಖೆ ನಡೆಸಲಿ ಎಂದು ಕೆಪಿಸಿಸಿ ವಕ್ತಾರ ಎಚ್.ಎ.ವೆಂಕಟೇಶ್ ಒತ್ತಾಯಿಸಿದರು.

ನಗರದ ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬೀದರ್ ಲಿ   ನಡೆದ ಜನಸಂಕಲ್ಪ ಯಾತ್ರೆಯಲ್ಲಿ ಬೊಮ್ಮಾಯಿ ಅವರು ಸಿದ್ದರಾಮಯ್ಯ ವಿರುದ್ಧ ಇಲ್ಲಸಲ್ಲದ ಆರೋಪ ಮಾಡಿದ್ದಾರೆ. ರಾಹುಲ್‍ಗಾಂಧಿಗೆ ಅಕ್ರಮದ ವರದಿ ಕಳುಹಿಸುತ್ತೇನೆ ಎಂದು ಹೇಳಿದ್ದಾರೆ. ಒಂದು ವೇಳೆ ಸಿದ್ದರಾಮಯ್ಯ ಅವರು ಅಕ್ರಮವೆಸಗಿದ್ದರೆ ಇದುವರೆಗೆ ಯಾಕೆ ತನಿಖೆ ಮಾಡಿಸಲಿಲ್ಲ? ರಾಹುಲ್ ಗಾಂಧಿಗೆ ಕಳುಹಿಸುವ ಉದ್ದೇಶವಾದರೂ ಏನು? ಕೇಂದ್ರ, ರಾಜ್ಯದಲ್ಲಿ ನಿಮ್ಮದೇ ಸರ್ಕಾರವಿದೆ. ಕೂಡಲೇ ತನಿಖೆ ನಡೆಸಿ ಸತ್ಯ ಹೊರಬರಲಿ ಎಂದು ಸವಾಲು ಹಾಕಿದರು.

ಭಾರತ್ ಜೋಡೋ ಯಾತ್ರೆಯ ಯಶಸ್ಸನ್ನು ಕಂಡು ಬಿಜೆಪಿಗೆ ನಡುಕ ಶುರುವಾಗಿದೆ. ರಾಹುಲ್‍ಗಾಂಧಿ ಬೇಲ್ ಮೇಲಿದ್ದಾರೆ ಎನ್ನುವವರು ಜೈಲಿಗೆ ಹೋಗಿ ಬಂದವರನ್ನು ಸಂಸದೀಯ ಮಂಡಳಿ ಸದಸ್ಯರನ್ನಾಗಿ ಮಾಡುತ್ತಾರೆ. ಅವರ ಮಗನಿಗೆ ರಾಜ್ಯ ಉಪಾಧ್ಯಕ್ಷ ಸ್ಥಾನ ನೀಡುತ್ತಾರೆ. ಇಂತಹವರಿಗೆ ಕಾಂಗ್ರೆಸ್ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಎಂದು ಟೀಕಿಸಿದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!