ಮೈಸೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ ಶಿಕ್ಷಕರ ನೇಮಕಾತಿಯಲ್ಲಿ ಅಕ್ರಮವೆಸಗಿದ್ದಾರೆ ಎಂದು ಆರೋಪ ಮಾಡಿದ್ದಾರೆ. ಬೊಮ್ಮಾಯಿ ಅವರಿಗೆ ರಾಜಕೀಯ ಇಚ್ಛಾಸಕ್ತಿ ಇದ್ದರೆ ಸಿಬಿಐ ಅಥವಾ ಇಡಿಯಿಂದ ಅಕ್ರಮದ ತನಿಖೆ ನಡೆಸಲಿ ಎಂದು ಕೆಪಿಸಿಸಿ ವಕ್ತಾರ ಎಚ್.ಎ.ವೆಂಕಟೇಶ್ ಒತ್ತಾಯಿಸಿದರು.
ನಗರದ ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬೀದರ್ ಲಿ ನಡೆದ ಜನಸಂಕಲ್ಪ ಯಾತ್ರೆಯಲ್ಲಿ ಬೊಮ್ಮಾಯಿ ಅವರು ಸಿದ್ದರಾಮಯ್ಯ ವಿರುದ್ಧ ಇಲ್ಲಸಲ್ಲದ ಆರೋಪ ಮಾಡಿದ್ದಾರೆ. ರಾಹುಲ್ಗಾಂಧಿಗೆ ಅಕ್ರಮದ ವರದಿ ಕಳುಹಿಸುತ್ತೇನೆ ಎಂದು ಹೇಳಿದ್ದಾರೆ. ಒಂದು ವೇಳೆ ಸಿದ್ದರಾಮಯ್ಯ ಅವರು ಅಕ್ರಮವೆಸಗಿದ್ದರೆ ಇದುವರೆಗೆ ಯಾಕೆ ತನಿಖೆ ಮಾಡಿಸಲಿಲ್ಲ? ರಾಹುಲ್ ಗಾಂಧಿಗೆ ಕಳುಹಿಸುವ ಉದ್ದೇಶವಾದರೂ ಏನು? ಕೇಂದ್ರ, ರಾಜ್ಯದಲ್ಲಿ ನಿಮ್ಮದೇ ಸರ್ಕಾರವಿದೆ. ಕೂಡಲೇ ತನಿಖೆ ನಡೆಸಿ ಸತ್ಯ ಹೊರಬರಲಿ ಎಂದು ಸವಾಲು ಹಾಕಿದರು.
ಭಾರತ್ ಜೋಡೋ ಯಾತ್ರೆಯ ಯಶಸ್ಸನ್ನು ಕಂಡು ಬಿಜೆಪಿಗೆ ನಡುಕ ಶುರುವಾಗಿದೆ. ರಾಹುಲ್ಗಾಂಧಿ ಬೇಲ್ ಮೇಲಿದ್ದಾರೆ ಎನ್ನುವವರು ಜೈಲಿಗೆ ಹೋಗಿ ಬಂದವರನ್ನು ಸಂಸದೀಯ ಮಂಡಳಿ ಸದಸ್ಯರನ್ನಾಗಿ ಮಾಡುತ್ತಾರೆ. ಅವರ ಮಗನಿಗೆ ರಾಜ್ಯ ಉಪಾಧ್ಯಕ್ಷ ಸ್ಥಾನ ನೀಡುತ್ತಾರೆ. ಇಂತಹವರಿಗೆ ಕಾಂಗ್ರೆಸ್ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಎಂದು ಟೀಕಿಸಿದರು.
ಶೇಷಾದ್ರಿ ಗಂಜೂರು ದೆಹಲಿಯ ಜಂತರ್ ಮಂತರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿಯ ಪ್ರತಿಭಟನೆಯಲ್ಲಿ ಬಳಕೆ ಯಾದ ‘ಅಸಭ್ಯ ಭಾಷೆ’ ಅದರಲ್ಲೂ ಹುಡುಗಿಯರು…
ಅಕ್ಷತಾ ಆಗಸ್ಟ್ ೨೧, ಕೇರಳದ ಕೋಝಿಕ್ಕೋಡ್ನ ಖಾಸಗಿ ಶಾಲೆಯ ವಿದ್ಯಾರ್ಥಿಗಳು ಓಣಂ ಹಬ್ಬದ ಆಚರಣೆಗೆ ಅಣಿಯಾಗುತ್ತಿದ್ದರು. ಅಂದಿನ ರಾತ್ರಿ ಓಣಂ…
ಮಂಡ್ಯ : ಕೈಯ್ಯಲ್ಲಿ ಬೇಡಿ ಹಾಕಿ ಕೊಂಡಿರುವಾಗಲೇ ಠಾಣೆಯಿಂದ ತಪ್ಪಿಸಿಕೊಂಡು ಬಂದ ಕಳ್ಳನೊಬ್ಬ ಜನರ ಕೈಗೆ ಸಿಕ್ಕಿಬಿದ್ದಿರುವ ಘಟನೆ ಇಲ್ಲಿನ…
ಮೈಸೂರು: ಮೊನ್ನೆಯಷ್ಟೇ ಲಿಂಗಾಂಬುಧಿ ಉದ್ಯಾನ ಪ್ರವೇಶಕ್ಕೆ ಶುಲ್ಕ ನಿಗದಿಪಡಿಸಿ ಪರಿಸರವಾದಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ಅರಣ್ಯ ಇಲಾಖೆ ಅಧಿಕಾರಿಗಳು ಅರಮನೆ ಅಂಗಳದಲ್ಲಿ…
ಎಚ್ಚೆತ್ತ ಪೊಲೀಸ್ ಆಡಳಿತ ; ಇಬ್ಬರು ಆರೋಪಿಗಳ ಬಂಧನ ಕಠ್ಮಂಡು : ನೇಪಾಳದಲ್ಲಿ ಸಂಭವಿಸಿರುವ ಭೀಕರ ಮಹಾಪೂರ ಹಾಗೂ ಭೂಕುಸಿತದಿಂದಾಗಿ…