ಮೈಸೂರು: ಕನ್ನಡ ಭಾಷೆಯನ್ನು ಆಡಳಿತದಲ್ಲಿ ಕಡ್ಡಾಯವಾಗಿ ಬಳಕೆ ಮಾಡುವ ಮೂಲಕ ಕನ್ನಡ ಭಾಷೆಯನ್ನು ಉಳಿಸಿ ಬೆಳೆಸಬೇಕಾದ ಜವಾಬ್ದಾರಿ ನಮ್ಮ ನಿಮ್ಮೆಲ್ಲರ ಮೇಲಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪುರುಷೋತ್ತಮ ಬಿಳಿಮಲೆ ಹೇಳಿದರು.
ಶನಿವಾರ ಜಿಲ್ಲಾಧಿಕಾರಿ ಕಛೇರಿಯ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಕನ್ನಡ ಅನುಷ್ಠಾನ ಕುರಿತ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕನ್ನಡವನ್ನು ಆಡಳಿತದಲ್ಲಿ ಅನುಷ್ಠಾನಕ್ಕೆ ತರಲು ಸರ್ಕಾರಗಳು ಹಲವು ಆದೇಶಗಳನ್ನು ಹೊರಡಿಸಿವೆ. 2000 ವರ್ಷಗಳ ಇತಿಹಾಸ ಇರುವ ಭಾಷೆಯನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಜವಾಬ್ದಾರಿ. 19519 ಮಾತೃ ಭಾಷೆಗಳು ಭಾರತದಲ್ಲಿ ಇವೆ. ಹಲವು ಭಾಷೆಗಳು ನಶಿಸಿ ಹೋಗುತ್ತಿವೆ ಎಂದು ಕಳವಳ ವ್ಯಕ್ತಪಡಿಸಿದರು.
ಕನ್ನಡದಲ್ಲಿ ಹೆಚ್ಚು ಕೃತಿಗಳನ್ನು ರಚನೆ ಮಾಡಿದವರು ಕುವೆಂಪು. ಮೈಸೂರು ಸಾಹಿತಿಗಳ ತವರೂರು. ಬೇರೆ ಭಾಷೆಗಳನ್ನು ಕಲಿಯಿರಿ ಆದರೆ ಕನ್ನಡವನ್ನು ಹೆಚ್ಚು ಬಳಕೆ ಮಾಡಬೇಕು. ಕನ್ನಡ ಬಳಕೆಗೆ 3000 ಆದೇಶಗಳನ್ನು ಮಾಡಲಾಗಿದೆ. ಕೇವಲ ಆದೇಶಗಳಿಂದ ಬಾಷೆ ಉಳಿಸಲು ಸಾಧ್ಯವಿಲ್ಲ. ಕನ್ನಡವನ್ನು ಬಳಕೆ ಮಾಡುವ ಮೂಲಕ ಉಳಿಸಬೇಕು ಎಂದು ತಿಳಿಸಿದರು.
ಕನ್ನಡ ಭಾಷೆಯ ಬೋಧನೆಯನ್ನು ಸುಲಭ ಗೊಳಿಸಿ ಬೋಧನೆ ಮಾಡಬೇಕು. ಜಿಲ್ಲಾ ತರಬೇತಿ ಸಂಸ್ಥೆಗಳಲ್ಲಿ ತರಬೇತಿ ಪಡೆಯುವ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಕನ್ನಡ ಬೋಧನೆಯನ್ನು ಹೆಚ್ಚು ಮಾಡಬೇಕು. ಬ್ಯಾಂಕ್ ಗಳಲ್ಲಿ ಹೆಚ್ಚಾಗಿ ಹೊರ ರಾಜ್ಯದವರು ಇರುತ್ತಾರೆ ಆದರೆ ಅವರು 3 ತಿಂಗಳ ಒಳಗೆ ಕನ್ನಡವನ್ನು ಕಲಿತು ವ್ಯವಹಾರ ನಡೆಸಬೇಕು. ಇಲ್ಲದಿದ್ದಲ್ಲಿ ಸ್ಥಳೀಯರೊಂದಿಗೆ ವ್ಯವಹಾರ ಮಾಡಲು ಕಷ್ಟ ಆಗುತ್ತದೆ.
ಜಿಲ್ಲಾಧಿಕಾರಿಗಳಾದ ಜಿ ಲಕ್ಷ್ಮೀಕಾಂತ ರೆಡ್ಡಿ ಅವರು ಮಾತನಾಡಿ ಜಿಲ್ಲೆಯಲ್ಲಿ ಇರುವ ನಾಮಫಲಕಗಳು ಕನ್ನಡಲ್ಲಿ ಇವೆ ಆದರೆ ಕೆಲವು ಕಡೆ 60: 40 ರೇಶಿಯೋ ಇಲ್ಲ ಎಂಬ ಬಗ್ಗೆ ಪರಿಶೀಲನೆ ನಡೆಸಲಾಗುವುದು. ಪರವಾನಗಿ ರಿನಿವಲ್ ಗೆ ಬಂದಾಗ ಈ ಬಗ್ಗೆ ಷರತ್ತನ್ನು ವಿಧಿಸಿ ಅನುಷ್ಠಾನ ಮಾಡಲಾಗುವುದು ಎಂದು ತಿಳಿಸಿದರು.
ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಗಳಾದ ಸಂತೋಷ್ ಹಾನಗಲ್ ಅವರು ಮಾತನಾಡಿ ಸರ್ಕಾರದ ಇಲಾಖೆಗಳ ಅಂತರ್ಜಾಲ ಪುಟ ಕನ್ನಡದಲ್ಲಿ ಇರಬೇಕು. ಜಿಲ್ಲೆಯ ಅಂಗಡಿ ಮುಗ್ಗಟ್ಟು ಗಳ ಬೋರ್ಡುಗಳು ಶೇಕಡಾ 60 ರಷ್ಟು ಕನ್ನಡದಲ್ಲಿ ಇರಬೇಕು. ಸರ್ಕಾರಿ ಇಲಾಖೆಗಳ ಕಡತಗಳಲ್ಲಿ ಕನ್ನಡವನ್ನು ಬಳಕೆ ಮಾಡಬೇಕು. ಸರ್ಕಾರಿ ಹಾಗೂ ಖಾಸಗಿ ಶಾಲೆಗಳಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಕನ್ನಡ ಭಾಷೆಯಲ್ಲಿ ಮಕ್ಕಳು ಅನುತ್ತೀರ್ಣ ಆಗುತ್ತಿರುವ ಬಗ್ಗೆ ವರದಿ ಇದ್ದು, ಕನ್ನಡ ಭಾಷೆಗೆ ಹೆಚ್ಚಿನ ಒತ್ತು ನೀಡಿ ಬೋಧನೆ ಮಾಡಬೇಕು ಎಂದು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕನ್ನಡ ಅಭಿವೃದ್ಧಿ ಪ್ರಾಧಿಕಾರದ ನಾಮ ನಿರ್ದೇಶಿತ ಸದಸ್ಯರಾದ ಟಿ ಗುರುರಾಜ್ ಅವರು ಮಾತನಾಡಿ ಎಲ್ಲಾ ನಾಮಫಲಕಗಳು ಶೇಕಡಾ 60 ರಷ್ಟು ಕನ್ನಡದಲ್ಲಿ ಇರಬೇಕು ಆದರೆ ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಎನ್ ಪಿ ಎಸ್ ಶಾಲೆಯ ನಾಮಫಲಕ ಸಂಪೂರ್ಣ ಇಂಗ್ಲಿಷ್ ಮಯವಾಗಿದ್ದು ಶೇಕಡಾ 60 ರಷ್ಟು ನಾಮಫಲಕ ಕನ್ನಡದಲ್ಲಿ ಇರಬೇಕು ಎಂಬ ಸರ್ಕಾರದ ಆದೇಶವನ್ನು ಉಲ್ಲಂಘನೆ ಮಾಡಲಾಗಿದೆ. ಈ ಬಗ್ಗೆ ಶಿಕ್ಷಣ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕು. ಹಲವು ಇಲಾಖೆಗಳ ಮೋಹರುಗಳು ಇಂಗ್ಲಿಷ್ ನಲ್ಲಿ ಇದ್ದು ಕನ್ನಡದ ಮೋಹರುಗಳನ್ನು ಬಳಕೆ ಮಾಡಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಕನ್ನಡ ಕ್ರಿಯಾ ಸಮಿತಿಯ ಕಾರ್ಯಾಧ್ಯಕ್ಷರಾದ ಸಾರಾ ಸುದರ್ಶನ್ , ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಕೆ ಎಂ ಗಾಯತ್ರಿ, ಅಪರ ಜಿಲ್ಲಾಧಿಕಾರಿಗಳಾದ ಡಾ. ಪಿ. ಶಿವರಾಜು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ರನ್ಯಾ ರಾವ್ ಚಿನ್ನ ಕಳ್ಳಸಾಗಾಣಿಕೆಗೆ ಖಾಕಿ ಖಾದಿ ಕಾವಿ ಕೃಪೆಯಂತೆ! ದಂಗುಬಡಿಸುವ ಸುದ್ದಿಯಿದು ಬೆಚ್ಚಿ ಬೆದರಿಬಿದ್ದಿದೆ ಜನ ಜಗ! ಕಲೆಯಲಿ…
ಫಲಾನುಭವಿಗಳಿಗೆ ಗ್ಯಾರಂಟಿಗಳನ್ನು ವಿತರಿಸುವಾಗ ಸರ್ಕಾರದಿಂದ ಆಗಬಹುದು ಅಲ್ಲಲ್ಲಿ ತುಸು ವ್ಯತ್ಯಾಸ... ಆದರೆ, ಆಡಳಿತ ಪಕ್ಷ ಮತ್ತು ವಿರೋಧ ಪಕ್ಷಗಳ ನಡುವೆ…
ಕಳೆದ ವಾರ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ೧೪ ಕೆ.ಜಿ. ಚಿನ್ನವನ್ನು ಕಳ್ಳಸಾಗಣೆ ಮಾಡುತ್ತಿದ್ದಾರೆ ಎಂಬ ಆರೋಪದ ಮೇಲೆ ನಟಿ ರನ್ಯಾ…
ಹಿಂದುಳಿದ ತಾಲ್ಲೂಕು ಎಂಬ ಹಣೆಪಟ್ಟಿಯನ್ನು ಹೊಂದಿರುವ ಎಚ್.ಡಿ.ಕೋಟೆ ತಾಲ್ಲೂಕಿನಲ್ಲಿ ಸರಿಯಾದ ವೈದ್ಯಕೀಯ ಸೌಲಭ್ಯಗಳಿಲ್ಲದೆ ಜನರು ಚಿಕಿತ್ಸೆಗಾಗಿ ಮೈಸೂರಿಗೆ ತೆರಳಬೇಕಾದ ಅನಿವಾರ್ಯತೆ…
ಡಿ.ವಿ.ರಾಜಶೇಖರ ಪಾಕಿಸ್ತಾನದ ಜಾಫರ್ ಎಕ್ಸ್ಪ್ರೆಸ್ ರೈಲು ಅಪಹರಣ ಮಾಡಿದ್ದ ಬಲೂಚಿ ಪ್ರತ್ಯೇಕತಾವಾದಿಗಳನ್ನು (ಬಲೂಚಿಸ್ತಾನ್ ಲಿಬರೇಷನ್ ಆರ್ಮಿ-ಬಿಎಲ್ಎ) ಕೊಲ್ಲುವಲ್ಲಿ ಪಾಕಿಸ್ತಾನ ಸೇನೆ…
ಹೇಮಂತ್ಕುಮಾರ್ ಒಂದೂವರೆ ತಿಂಗಳಾದರೂ ಬಿಡುಗಡೆಯಾಗದ ನರೇಗಾ ಕೂಲಿ ಹಣ ಮಂಡ್ಯ: ಸರ್ಕಾರಿ ನೌಕರಿಯಲ್ಲಿರುವವರಿಗೆ ಎಲ್ಲ ಸೌಲಭ್ಯಗಳೊಂದಿಗೆ ತಿಂಗಳಾದ ಕೂಡಲೇ ಪಗಾರ…