ಮೈಸೂರು : ಕನ್ನಂಬಾಡಿ ಕಟ್ಟೆ ಸೇರಿದಂತೆ ಜಲಾಶಯಗಳಲ್ಲಿ ನೀರು ಇರುವ ಕುರಿತು ವಾಸ್ತವ ಪರಿಶೀಲನೆ ನಡೆಸಲು ಕೇಂದ್ರ ತಜ್ಞರ ತಂಡವನ್ನು ಕಳುಹಿಸಬೇಕು.ಪ್ರಧಾನಿ ಮಧ್ಯಸ್ಥಿಕೆ ವಹಿಸಬೇಕು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಒತ್ತಾಯಿಸಿದರು. ಕೇಂದ್ರದಿಂದ ತಂಡ ಕಳುಹಿಸಬೇಕು ಅಂತ ಹೇಳಿ ಎರಡು ಬಾರಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದೇನೆ. ಕೇಂದ್ರ ಸಚಿವರ ಗಮನಕ್ಕೂ ತಂದಿದ್ದೇನೆ. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಕೂಡ ಈಗ ಪತ್ರ ಬರೆದು ಕೇಳಿದ್ದಾರೆ. ಈಗಲಾದರೂ ಕೇಂದ್ರದಿಂದ ತಂಡ ಕಳುಹಿಸಲಿ ಎಂದು ಹೇಳಿದರು.
ಕೇಂದ್ರದ ತಂಡ ಯಾಕೆ ಬರುತ್ತಿಲ್ಲ ಅಂತ ಬಿಜೆಪಿಯವರು ಹೇಳಲಿ. ಸುಮ್ಮನೆ ಕರ್ನಾಟಕದ ಬಿಜೆಪಿ ನಾಯಕರು ಹಾದಿಬೀದಿಯಲ್ಲಿ ಹೋರಾಟಮಾಡುವ ಬದಲಿಗೆ ಕೇಂದ್ರದಿಂದ ತಜ್ಞರ ತಂಡ ಕರೆಸುವಂತೆ ಮಾಡಲಿ ಎಂದು ಕಿಡಿಕಾರಿದರು. ನ್ಯಾಯಾಲಯದ ಮಧ್ಯಸ್ಥಿಕೆ ಇಲ್ಲದೆ ಎರಡು ರಾಜ್ಯಗಳು ಕುಳಿತು ಮಾತುಕತೆಗೆ ಈಗಲೂ ನಾವು ಸಿದ್ದವಿದ್ದೇವೆ ಎಂದರು. ರಾಜ್ಯ ಕಾಂಗ್ರೆಸ್ ಡಿಎಂಕೆ ಬಿ ಟೀಮ್ ಎಂಬ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಸಿಎಂ, ಎಐಎಡಿಎಂಕೆ ಬಿಜೆಪಿ ಜೊತೆ ಇತ್ತಲ್ಲ? ಆಗ ಅದು ಯಾವ ಟೀಮ್? ಸುಮ್ಮನೆ ರಾಜಕೀಯ ಕಾರಣಕ್ಕೆ ಏನೇನೋ ಹೇಳಿಕೆ ಕೊಡಬಾರದು.ಸುಮ್ಮನೆ ಬಿ ಟೀಮ್,ಬಿ ಟೀಮ್ ಎನ್ನಬಾರದು ಎಂದು ತಿರುಗೇಟುನೀಡಿದರು.
ಬಿಜೆಪಿಯವರನ್ನು ನಾವು ಮೊದಲಿನಿಂದಲೂ ಚಡ್ಡಿಗಳು ಎಂದೇ ಕರೆಯುತ್ತಿದ್ದೇವೆ.ಈಗ ಅವರು ಚಡ್ಡಿ ಚಳುವಳಿ ಮಾಡ್ತಾ ಇದ್ದಾರೆ.ಚಳುವಳಿ ಮಾಡಲಿ ಎಂದು ಟೀಕಿಸಿದರು.
ಜಿಲ್ಲೆಯಲ್ಲಿ ೧೧ ಮಂದಿ ಸಾವು ಮುಂಜಾಗ್ರತೆ ಪಾಲಿಸುವುದು ಅಗತ್ಯ ಮೈಸೂರು: ಬಿರು ಬೇಸಿಗೆ ಸಂದರ್ಭದಲ್ಲಿ ನದಿ, ಕೆರೆ ಹಾಗೂ ಕಾಲುವೆಗಳಲ್ಲಿ…
ಪ್ರೊ.ಜಯಪ್ರಕಾಶಗೌಡ, ಅಧ್ಯಕ್ಷರು, ಕರ್ನಾಟಕ ಸಂಘ, ಮೈಸೂರು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರಿಗೆ ಎಸ್.ಎಂ.ಕೃಷ್ಣ ಪ್ರಶಸ್ತಿ ಪುರಸ್ಕಾರ ಮಂಡ್ಯ ಜಿಲ್ಲೆಯ…
ಚಿರಂಜೀವಿ ಸಿ.ಹುಲ್ಲಹಳ್ಳಿ ೩,೭೫೦ ರೂ., ಶೇ.೧೮ರಷ್ಟು ಜಿಎಸ್ಟಿ ಸೇರಿ ಒಟ್ಟು ೪,೭೫೦ ರೂ.ಶುಲ್ಕ ಪ್ರತಿ ಶಿಬಿರಾರ್ಥಿಗೆ ನಿಗದಿ ಮೈಸೂರು: ಮಲ್ಲಿಗೆ…
ಕೆ.ಬಿ.ರಮೇಶನಾಯಕ ಬಯೋಮೆಟ್ರಿಕ್ ಹಾಜರಾತಿ ಜತೆಗೆ ಜಿಪಿಎಸ್ ವ್ಯವಸ್ಥೆ ಜಾರಿಗೆ ಚಿಂತನೆ ಹಾಜರಾತಿ ಹಾಕಿ ಬೇಕಾಬಿಟ್ಟಿ ಓಡಾಡುವ ಸಿಬ್ಬಂದಿಗಳಿಗೆ ಬ್ರೇಕ್ ಮೈಸೂರು:…
ಪ್ರಶಾಂತ್ ಎಸ್. ಮೈಸೂರು: ಎಲ್ಲೆಡೆ ಬಿರು ಬಿಸಿಲು ಜನರನ್ನು ಹೈರಾಣಾಗಿಸುತ್ತಿದೆ. ಬಿಸಿಲ ಬೇಗೆಯಿಂದ ದಾಹ ನೀಗಿಸಿಕೊಳ್ಳಲು ಜನರು ಎಳನೀರು ಮೊರೆ…
ದಾವಣಗೆರೆ ದಕ್ಷಿಣ, ಬಾಗಲಕೋಟೆ ಉಪಸಮರದಲ್ಲಿ ಕೈ ಜಯಭೇರಿ ಆರ್.ಟಿ.ವಿಠ್ಠಲಮೂರ್ತಿ ಬೆಂಗಳೂರು: ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪ…