ಮೈಸೂರು : ಕನ್ನಂಬಾಡಿ ಕಟ್ಟೆ ಸೇರಿದಂತೆ ಜಲಾಶಯಗಳಲ್ಲಿ ನೀರು ಇರುವ ಕುರಿತು ವಾಸ್ತವ ಪರಿಶೀಲನೆ ನಡೆಸಲು ಕೇಂದ್ರ ತಜ್ಞರ ತಂಡವನ್ನು ಕಳುಹಿಸಬೇಕು.ಪ್ರಧಾನಿ ಮಧ್ಯಸ್ಥಿಕೆ ವಹಿಸಬೇಕು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಒತ್ತಾಯಿಸಿದರು. ಕೇಂದ್ರದಿಂದ ತಂಡ ಕಳುಹಿಸಬೇಕು ಅಂತ ಹೇಳಿ ಎರಡು ಬಾರಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದೇನೆ. ಕೇಂದ್ರ ಸಚಿವರ ಗಮನಕ್ಕೂ ತಂದಿದ್ದೇನೆ. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಕೂಡ ಈಗ ಪತ್ರ ಬರೆದು ಕೇಳಿದ್ದಾರೆ. ಈಗಲಾದರೂ ಕೇಂದ್ರದಿಂದ ತಂಡ ಕಳುಹಿಸಲಿ ಎಂದು ಹೇಳಿದರು.
ಕೇಂದ್ರದ ತಂಡ ಯಾಕೆ ಬರುತ್ತಿಲ್ಲ ಅಂತ ಬಿಜೆಪಿಯವರು ಹೇಳಲಿ. ಸುಮ್ಮನೆ ಕರ್ನಾಟಕದ ಬಿಜೆಪಿ ನಾಯಕರು ಹಾದಿಬೀದಿಯಲ್ಲಿ ಹೋರಾಟಮಾಡುವ ಬದಲಿಗೆ ಕೇಂದ್ರದಿಂದ ತಜ್ಞರ ತಂಡ ಕರೆಸುವಂತೆ ಮಾಡಲಿ ಎಂದು ಕಿಡಿಕಾರಿದರು. ನ್ಯಾಯಾಲಯದ ಮಧ್ಯಸ್ಥಿಕೆ ಇಲ್ಲದೆ ಎರಡು ರಾಜ್ಯಗಳು ಕುಳಿತು ಮಾತುಕತೆಗೆ ಈಗಲೂ ನಾವು ಸಿದ್ದವಿದ್ದೇವೆ ಎಂದರು. ರಾಜ್ಯ ಕಾಂಗ್ರೆಸ್ ಡಿಎಂಕೆ ಬಿ ಟೀಮ್ ಎಂಬ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಸಿಎಂ, ಎಐಎಡಿಎಂಕೆ ಬಿಜೆಪಿ ಜೊತೆ ಇತ್ತಲ್ಲ? ಆಗ ಅದು ಯಾವ ಟೀಮ್? ಸುಮ್ಮನೆ ರಾಜಕೀಯ ಕಾರಣಕ್ಕೆ ಏನೇನೋ ಹೇಳಿಕೆ ಕೊಡಬಾರದು.ಸುಮ್ಮನೆ ಬಿ ಟೀಮ್,ಬಿ ಟೀಮ್ ಎನ್ನಬಾರದು ಎಂದು ತಿರುಗೇಟುನೀಡಿದರು.
ಬಿಜೆಪಿಯವರನ್ನು ನಾವು ಮೊದಲಿನಿಂದಲೂ ಚಡ್ಡಿಗಳು ಎಂದೇ ಕರೆಯುತ್ತಿದ್ದೇವೆ.ಈಗ ಅವರು ಚಡ್ಡಿ ಚಳುವಳಿ ಮಾಡ್ತಾ ಇದ್ದಾರೆ.ಚಳುವಳಿ ಮಾಡಲಿ ಎಂದು ಟೀಕಿಸಿದರು.
ಹೊಸದಿಲ್ಲಿ: ಮುಂಬರುವ ಐಸಿಸಿ ಟಿ-೨೦ ವಿಶ್ವಕಪ್ಗಾಗಿ ೧೫ ಸದಸ್ಯರ ಭಾರತ ತಂಡವನ್ನು ಪ್ರಕಟಿಸಲಾಗಿದೆ. ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಲಿದ್ದು, ಶುಭಮನ್…
ಹೊಸದಿಲ್ಲಿ : ಮೊಟ್ಟೆ ಸೇವೆನೆಗೆ ಸುರಕ್ಷಿತವಾಗಿದ್ದು ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕವಾಗುವ ಯಾವುದೇ ಅಂಶ ಪತ್ತೆ ಆಗಿಲ್ಲ ಎಂದು ಕೇಂದ್ರ ಆಹಾರ…
ಚಾಮರಾಜನಗರ : ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಹೆಚ್ಚಿಸುವಂತಹ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಕೈಗೊಳ್ಳುವಂತೆ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಜಲಶಕ್ತಿ ಮಂತ್ರಾಲಯದ…
ಮೈಸೂರು : ಕ್ರಿಸ್ಮಸ್ ಹಾಗೂ ಹೊಸ ವರ್ಷದ ಸಂಭ್ರಮಾಚರಣೆಗಾಗಿ ಪ್ರವಾಸಿಗರು, ಸ್ಥಳೀಯರಿಗೆ ಮನರಂಜನೆ ಒದಗಿಸಲು ಅರಮನೆ ಅಂಗಳದಲ್ಲಿ ಡಿ.೨೧ರಿಂದ ೩೧ರವರೆಗೆ…
ಮೈಸೂರು : ಮೈಸೂರಿನ ರೇಸ್ಕ್ಲಬ್ನ ಪ್ರದೇಶದ ಸುತ್ತಲಿನ ಎರಡು ಕಿ.ಮೀ ವ್ಯಾಪ್ತಿಯಲ್ಲಿ ಕುದುರೆ, ಕತ್ತೆ, ಹೇಸರಗತ್ತೆ ಪ್ರಾಣಿಗಳ ಚಲನವಲನ, ಕುದುರೆಗಳನ್ನು…
ಮೈಸೂರು : ಪ್ರತಿ ಜೀವ ಅಮೂಲ್ಯ, ರಸ್ತೆ ಅಪಘಾತಗಳ ಸಂಖ್ಯೆ ಶೂನ್ಯವಾಗುವುದು ಗುರಿಯಾಗಬೇಕು ಎಂದು ಸುಪ್ರೀಂ ಕೋಟ್೯ನ ನಿ.ನ್ಯಾಯಮೂರ್ತಿಯೂ ಆದ…