ಮೈಸೂರು : ಕನ್ನಂಬಾಡಿ ಕಟ್ಟೆ ಸೇರಿದಂತೆ ಜಲಾಶಯಗಳಲ್ಲಿ ನೀರು ಇರುವ ಕುರಿತು ವಾಸ್ತವ ಪರಿಶೀಲನೆ ನಡೆಸಲು ಕೇಂದ್ರ ತಜ್ಞರ ತಂಡವನ್ನು ಕಳುಹಿಸಬೇಕು.ಪ್ರಧಾನಿ ಮಧ್ಯಸ್ಥಿಕೆ ವಹಿಸಬೇಕು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಒತ್ತಾಯಿಸಿದರು. ಕೇಂದ್ರದಿಂದ ತಂಡ ಕಳುಹಿಸಬೇಕು ಅಂತ ಹೇಳಿ ಎರಡು ಬಾರಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದೇನೆ. ಕೇಂದ್ರ ಸಚಿವರ ಗಮನಕ್ಕೂ ತಂದಿದ್ದೇನೆ. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಕೂಡ ಈಗ ಪತ್ರ ಬರೆದು ಕೇಳಿದ್ದಾರೆ. ಈಗಲಾದರೂ ಕೇಂದ್ರದಿಂದ ತಂಡ ಕಳುಹಿಸಲಿ ಎಂದು ಹೇಳಿದರು.
ಕೇಂದ್ರದ ತಂಡ ಯಾಕೆ ಬರುತ್ತಿಲ್ಲ ಅಂತ ಬಿಜೆಪಿಯವರು ಹೇಳಲಿ. ಸುಮ್ಮನೆ ಕರ್ನಾಟಕದ ಬಿಜೆಪಿ ನಾಯಕರು ಹಾದಿಬೀದಿಯಲ್ಲಿ ಹೋರಾಟಮಾಡುವ ಬದಲಿಗೆ ಕೇಂದ್ರದಿಂದ ತಜ್ಞರ ತಂಡ ಕರೆಸುವಂತೆ ಮಾಡಲಿ ಎಂದು ಕಿಡಿಕಾರಿದರು. ನ್ಯಾಯಾಲಯದ ಮಧ್ಯಸ್ಥಿಕೆ ಇಲ್ಲದೆ ಎರಡು ರಾಜ್ಯಗಳು ಕುಳಿತು ಮಾತುಕತೆಗೆ ಈಗಲೂ ನಾವು ಸಿದ್ದವಿದ್ದೇವೆ ಎಂದರು. ರಾಜ್ಯ ಕಾಂಗ್ರೆಸ್ ಡಿಎಂಕೆ ಬಿ ಟೀಮ್ ಎಂಬ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಸಿಎಂ, ಎಐಎಡಿಎಂಕೆ ಬಿಜೆಪಿ ಜೊತೆ ಇತ್ತಲ್ಲ? ಆಗ ಅದು ಯಾವ ಟೀಮ್? ಸುಮ್ಮನೆ ರಾಜಕೀಯ ಕಾರಣಕ್ಕೆ ಏನೇನೋ ಹೇಳಿಕೆ ಕೊಡಬಾರದು.ಸುಮ್ಮನೆ ಬಿ ಟೀಮ್,ಬಿ ಟೀಮ್ ಎನ್ನಬಾರದು ಎಂದು ತಿರುಗೇಟುನೀಡಿದರು.
ಬಿಜೆಪಿಯವರನ್ನು ನಾವು ಮೊದಲಿನಿಂದಲೂ ಚಡ್ಡಿಗಳು ಎಂದೇ ಕರೆಯುತ್ತಿದ್ದೇವೆ.ಈಗ ಅವರು ಚಡ್ಡಿ ಚಳುವಳಿ ಮಾಡ್ತಾ ಇದ್ದಾರೆ.ಚಳುವಳಿ ಮಾಡಲಿ ಎಂದು ಟೀಕಿಸಿದರು.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…