ಮೈಸೂರು: ಮಕ್ಕಳಿಗೆ ಶಿಕ್ಷಣ ಎಷ್ಟು ಮುಖ್ಯವೋ ಅಷ್ಟೇ ರಂಗಭೂಮಿಯು ಸಹ ಮುಖ್ಯ. ಮಕ್ಕಳ ಬಹುರೂಪಿ ಎಂಬುದು ನಿಜವಾಗಿಯೂ ಒಂದು ಪ್ರಮುಖ ಆಯಾಮವಾಗಿದೆ. ಮಕ್ಕಳ ರೂಪದಲ್ಲಿ ಆರಂಭ ಮಾಡುತ್ತಿರುವುದು ಒಂದು ಆರೋಗ್ಯಕರವಂತಹ ಬೆಳವಣಿಗೆ ಚಿತ್ರ ನಟ ಪ್ರಕಾಶ್ ರಾಜ್ ಹೇಳಿದರು.
ಮೈಸೂರು ರಂಗಾಯಣದ ವತಿಯಿಂದ ಕರ್ನಾಟಕ ಕಲಾಮಂದಿರದಲ್ಲಿ ಮಕ್ಕಳ ಬಹುರೂಪಿ ನಾಟಕೋತ್ಸವ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.
ಮಕ್ಕಳು ಎಂಬುದು ಒಂದು ಭಾಗ. ನಾವೆಲ್ಲ ಮಕ್ಕಳನ್ನು ಭವಿಷ್ಯಕ್ಕಾಗಿ ರೂಪಿಸಬಾರದು ಇವತ್ತಿಗೂ ಸಹ ಮಕ್ಕಳಿಗೆ ಅವರದೇ ಆದಂತಹ ಪ್ರಪಂಚ ಎಂಬುದು ಇದೆ. ಅದು ಹಸಿರಿನ ಪ್ರಪಂಚ, ಕುತೂಹಲದ ಪ್ರಪಂಚ ಜೊತೆಗೆ ತನ್ನನ್ನು ತಾನು ರೂಪಿಸಿಕೊಳ್ಳುವಂತಹ ಪ್ರಪಂಚ ಇದೆ. ಮಕ್ಕಳನ್ನು ನಾವು ಬೆಳೆಸಬೇಕಾಗಿಲ್ಲ ಬೆಳೆಯುತ್ತಿರುವಂತಹ ಮಕ್ಕಳನ್ನು ನಾವು ಸೂಕ್ಷ್ಮ ಗೊಳಿಸಬೇಕು ಎಂದು ಹೇಳಿದರು.
ಮನೆಯಲ್ಲೇ ಒಂದು ಅದ್ಭುತವಾದ ಕಲಿಕೆ ಇದ್ದರೂ ಸಹ ಶಾಲೆಯಿಂದ ಬಂದಂತ ಮಕ್ಕಳನ್ನ ನಂತರ ಟ್ಯೂಷನ್ ಹಾಕಿ ಅವರಿಗೆ ಒತ್ತಡ ವಾಗುವಂತಹ ರೀತಿಯಲ್ಲಿ ನಾವು ತೊಡಗಿಸುತ್ತಿದ್ದೇವೆ. ಮಕ್ಕಳ ಬಗ್ಗೆ ಪೋಷಕರು ಸಹ ಯೋಚನೆ ಮಾಡಬೇಕು ಅವರ ಬಗ್ಗೆ ಗಮನ ಕೊಡಬೇಕು ಎಂದು ತಿಳಿಸಿದರು.
ಮಕ್ಕಳನ್ನು ನಾವು ಒಂದು ಸಮುದಾಯದ ಒಳಗೆ ಬೆಳೆಸಿದರೆ ಮಕ್ಕಳು ಮೌನವಾಗಿ ಇದ್ದು ಬಿಡುತ್ತಾರೆ. ನಾವು ಎಳೆ ಮನಸ್ಸಿಗೆ ಬೇಕಾದಂತಹ ಕುತೂಹಲಕಾರಿ ಶಕ್ತಿಯನ್ನು ನೀಡಬೇಕು. ಮಕ್ಕಳನ್ನು ಹಾರುವುದಕ್ಕೆ ಬಿಡುವುದಕ್ಕೆ ನಾವು ಆರು ದಿಗಂತಗಳನ್ನು ಬಳಸುತ್ತಿದ್ದೇವೆ ಅದನ್ನು ಮಾಡುವುದು ತಪ್ಪು. ಈ ನಿಟ್ಟಿನಲ್ಲಾದರೂ ನಾವು ಒಂದು ಆರೋಗ್ಯಕರವಾದಂತಹ ಸಮಾಜವನ್ನು ಕಟ್ಟಲಿಕ್ಕೆ ಸಹಾಯವಾಗುತ್ತದೆ ಈಗಲಾದರೂ ನಾವು ಎಚ್ಚೆತ್ತುಕೊಂಡು ಮಕ್ಕಳೊಂದಿಗೆ ಮಕ್ಕಳಾಗಿ ಮಕ್ಕಳ ಭಾಷೆ, ಮಾತು, ನೋಟ, ಕುತೂಹಲವನ್ನು ನಾವು ಆಲಿಸಬೇಕು ಎಂದು ಹೇಳಿದರು.
ಈ ಮಕ್ಕಳ ಬಹುರೂಪಿ ಎಂಬುದು ನಿಜವಾಗಿಯೂ ಒಂದು ಪ್ರಮುಖ ಆಯಾಮವಾಗಿದೆ ಇದನ್ನ ನಾವು ಬೆಳೆಸುತ್ತಾ ಮುಂದೇನು ಬೆಳೆಸೋಣ ಎಂದು ತಿಳಿಸಿದರು.
ಸಮಾರಂಭದಲ್ಲಿ ಮೈಸೂರು ರಂಗಾಯಣದ ನಿರ್ದೇಶಕರಾದ ಸತೀಶ್ ತಿಪಟೂರು, ಮೈಸೂರು ವಿಭಾಗದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕರಾದ ವಿ.ಎನ್ ಮಲ್ಲಿಕಾರ್ಜುನಸ್ವಾಮಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕರಾದ ಜವರೇಗೌಡ, ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಎಂ ಡಿ ಸುದರ್ಶನ್ ಅವರು ಉಪಸ್ಥಿತರಿದ್ದರು.
ದಾವಣಗೆರೆ: ಜಿಲ್ಲೆಯ ಆನಗೋಡಿನ ಇಂದಿರಾ ಪ್ರಿಯದರ್ಶಿನಿ ಕಿರು ಮೃಗಾಲಯದಲ್ಲಿ ನಾಲ್ಕು ಚುಕ್ಕೆ ಜಿಂಕೆಗಳ ಸಾವಿಗೆ ಕಾರಣ ಬಹಿರಂಗವಾಗಿದೆ. ನಾಲ್ಕು ಚುಕ್ಕೆ…
ಬೆಂಗಳೂರು: ವಾಲ್ಮೀಕಿ ಹಗರಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೀಡಿದ್ದ ಜಾಮೀನು ರದ್ದು…
ಬೆಂಗಳೂರು: ರಾಜ್ಯಪಾಲರು ಭಾಷಣ ಓದದೇ ಸಂವಿಧಾನ ಉಲ್ಲಂಘಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ವಿಧಾನಸೌಧದಲ್ಲಿ ಮಾತನಾಡಿದ…
ಬೆಂಗಳೂರು: ವಿಧಾನಸೌಧದಲ್ಲಿ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಬೇಕಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಕೇವಲ ಎರಡನೇ ಮಾತಿನಲ್ಲಿ…
ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣದಲ್ಲಿ ಲೋಕಾಯುಕ್ತ ನೀಡಿರುವ ಕ್ಲೀನ್ಚಿಟ್ ಕುರಿತು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ಮಹತ್ವದ…
ಬೆಂಗಳೂರು: ರಾಜ್ಯ ಸರ್ಕಾರ ಇಂದಿನಿಂದ ಜನವರಿ.31ರವರೆಗೆ ವಿಧಾನಮಂಡಲ ವಿಶೇಷ ಅಧಿವೇಶನ ಕರೆದಿದ್ದು, ನರೇಗಾ ಯೋಜನೆ ಹೆಸರು ಬದಲಾವಣೆ ಆಕ್ಷೇಪಿಸಿ ಕರೆದಿರುವ…